11:49 AM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

Shivamogga | ಗುಡ್ಡ ಕುಸಿಯುವ ಭೀತಿ: ಶಿವಮೊಗ್ಗ- ತೀರ್ಥಹಳ್ಳಿ ಸಂಪರ್ಕದ ಭಾರತೀಪುರ ಫ್ಲೈ ಓವರ್ ಒಂದು ಭಾಗ ಬಂದ್

11/07/2025, 16:04

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ

info.reporterkarnataka@gmail.com

ಕೋಟಿ ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಯಾಗಿದ್ದ ಭಾರತೀಪುರ ಫ್ಲೈ ಓವರ್ ಈಗ ಒಂದು ಭಾಗ ಸಂಚಾರ ಬಂದ್ ಮಾಡಲಾಗಿದೆ.
ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆ ಬರುವಾಗ ಎಡ ಭಾಗದಲ್ಲಿ ಬ್ಯಾರಿಕೆಡ್ ಹಾಕಿ ಸಂಚಾರ ಬಂದ್ ಮಾಡಲಾಗಿದ್ದು, ಧರೆ ಕುಸಿಯುವ ಭೀತಿಯಿಂದ ರಸ್ತೆ ಸಂಚಾರ ಬಂದ್ ಮಾಡಲಾಗಿದೆ.
ಮಳೆಗಾಲ ಸಂದರ್ಭದಲ್ಲಿ ಎಲ್ಲೆಡೆ ಭೂ ಕುಸಿತ, ಧರೆ ಕುಸಿತ ಆಗುತ್ತದೆ. ಆದರೆ ಭಾರತೀಪುರದಲ್ಲಿ ಧರೆ ಕುಸಿತಕ್ಕೆ ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ಹಾಗೂ ಗುತ್ತಿಗೆದಾರರೇ ಕಾರಣ ಎಂಬ ಆರೋಪ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ. ಮಳೆಗಾಲದಲ್ಲಿ ಕುಸಿಯುತ್ತದೆ ಎಂಬ ಪರಿಜ್ಞಾನ ಸಹ ಇಲ್ಲದೆ ಇಲ್ಲಿಯವರೆಗೆ ಗುಡ್ಡ ಕುಸಿಯುವುದನ್ನು ತಡೆಯಲು ಪ್ರಯತ್ನ ಸಹ ಮಾಡಿಲ್ಲ. ಈಗ ಕುಸಿದು ಬಿದ್ದರೆ ತಕ್ಷಣ ಅದರಿಂದ ತುರ್ತು ಕಾಮಗಾರಿ ಎಂದು ಮತ್ತೆ ಬಿಲ್ ಮಾಡುತ್ತಾರೆ ಎಂದು ಆರೋಪಿಸಿದ್ದಾರೆ.


ಈ ಮಧ್ಯೆ ಕುಡು ಮಲ್ಲಿಗೆಯಿಂದ ಕೂಗಳತೆ ದೂರದಲ್ಲಿ ಮತ್ತೊಂದು ರಸ್ತೆ ಮಾಡುತ್ತಿದ್ದು ಅದು ಚಿಟ್ಟೆಬೈಲು ಸಂಪರ್ಕ ಮಾಡುತ್ತದೆ ಎನ್ನಲಾಗುತ್ತಿದೆ. ಈಗಾಗಲೇ ಅದಕ್ಕೆ ಜಲ್ಲಿ ಕಲ್ಲು ಸಹ ಹಾಕಲಾಗಿದೆ. ಅದಕ್ಕೆ ಕಾರಣ ಒಂದು ವೇಳೆ ಗುಡ್ಡ ಕುಸಿತ ದೊಡ್ಡ ಮಟ್ಟದಲ್ಲಿ ಆದರೆ ಪರ್ಯಾಯ ಮಾರ್ಗ ಎಂಬ ಮಾತು ಕೇಳಿ ಬಂದಿದೆ. ಇವರ ಕೆಲಸ ನೋಡುತ್ತಿದ್ದರೆ ಗುಡ್ಡ ಕುಸಿಯುವುದನ್ನೇ ಅಧಿಕಾರಿಗಳು ಕಾಯುತ್ತಿದ್ದಾರಾ? ಎಂಬುದಾಗಿ ಸಾರ್ವಜನಿಕರು ಪ್ರೆಶ್ನೆ ಮಾಡುತ್ತಿದ್ದಾರೆ.
ಒಟ್ಟಿನಲ್ಲಿ ಇದೇ ತರ ಮಳೆ ಜಾಸ್ತಿ ಆದರೆ ಭಾರತೀಪುರ ಫ್ಲೈ ಓವರ್ ಮುಚ್ಚುತ್ತದೆಯೇ ಎಂಬ ಪ್ರೆಶ್ನೆ ಉದ್ಭವವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು