10:12 PM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

Shivamogga | ಗುಡ್ಡ ಕುಸಿಯುವ ಭೀತಿ: ಶಿವಮೊಗ್ಗ- ತೀರ್ಥಹಳ್ಳಿ ಸಂಪರ್ಕದ ಭಾರತೀಪುರ ಫ್ಲೈ ಓವರ್ ಒಂದು ಭಾಗ ಬಂದ್

11/07/2025, 16:04

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ

info.reporterkarnataka@gmail.com

ಕೋಟಿ ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಯಾಗಿದ್ದ ಭಾರತೀಪುರ ಫ್ಲೈ ಓವರ್ ಈಗ ಒಂದು ಭಾಗ ಸಂಚಾರ ಬಂದ್ ಮಾಡಲಾಗಿದೆ.
ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆ ಬರುವಾಗ ಎಡ ಭಾಗದಲ್ಲಿ ಬ್ಯಾರಿಕೆಡ್ ಹಾಕಿ ಸಂಚಾರ ಬಂದ್ ಮಾಡಲಾಗಿದ್ದು, ಧರೆ ಕುಸಿಯುವ ಭೀತಿಯಿಂದ ರಸ್ತೆ ಸಂಚಾರ ಬಂದ್ ಮಾಡಲಾಗಿದೆ.
ಮಳೆಗಾಲ ಸಂದರ್ಭದಲ್ಲಿ ಎಲ್ಲೆಡೆ ಭೂ ಕುಸಿತ, ಧರೆ ಕುಸಿತ ಆಗುತ್ತದೆ. ಆದರೆ ಭಾರತೀಪುರದಲ್ಲಿ ಧರೆ ಕುಸಿತಕ್ಕೆ ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ಹಾಗೂ ಗುತ್ತಿಗೆದಾರರೇ ಕಾರಣ ಎಂಬ ಆರೋಪ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ. ಮಳೆಗಾಲದಲ್ಲಿ ಕುಸಿಯುತ್ತದೆ ಎಂಬ ಪರಿಜ್ಞಾನ ಸಹ ಇಲ್ಲದೆ ಇಲ್ಲಿಯವರೆಗೆ ಗುಡ್ಡ ಕುಸಿಯುವುದನ್ನು ತಡೆಯಲು ಪ್ರಯತ್ನ ಸಹ ಮಾಡಿಲ್ಲ. ಈಗ ಕುಸಿದು ಬಿದ್ದರೆ ತಕ್ಷಣ ಅದರಿಂದ ತುರ್ತು ಕಾಮಗಾರಿ ಎಂದು ಮತ್ತೆ ಬಿಲ್ ಮಾಡುತ್ತಾರೆ ಎಂದು ಆರೋಪಿಸಿದ್ದಾರೆ.


ಈ ಮಧ್ಯೆ ಕುಡು ಮಲ್ಲಿಗೆಯಿಂದ ಕೂಗಳತೆ ದೂರದಲ್ಲಿ ಮತ್ತೊಂದು ರಸ್ತೆ ಮಾಡುತ್ತಿದ್ದು ಅದು ಚಿಟ್ಟೆಬೈಲು ಸಂಪರ್ಕ ಮಾಡುತ್ತದೆ ಎನ್ನಲಾಗುತ್ತಿದೆ. ಈಗಾಗಲೇ ಅದಕ್ಕೆ ಜಲ್ಲಿ ಕಲ್ಲು ಸಹ ಹಾಕಲಾಗಿದೆ. ಅದಕ್ಕೆ ಕಾರಣ ಒಂದು ವೇಳೆ ಗುಡ್ಡ ಕುಸಿತ ದೊಡ್ಡ ಮಟ್ಟದಲ್ಲಿ ಆದರೆ ಪರ್ಯಾಯ ಮಾರ್ಗ ಎಂಬ ಮಾತು ಕೇಳಿ ಬಂದಿದೆ. ಇವರ ಕೆಲಸ ನೋಡುತ್ತಿದ್ದರೆ ಗುಡ್ಡ ಕುಸಿಯುವುದನ್ನೇ ಅಧಿಕಾರಿಗಳು ಕಾಯುತ್ತಿದ್ದಾರಾ? ಎಂಬುದಾಗಿ ಸಾರ್ವಜನಿಕರು ಪ್ರೆಶ್ನೆ ಮಾಡುತ್ತಿದ್ದಾರೆ.
ಒಟ್ಟಿನಲ್ಲಿ ಇದೇ ತರ ಮಳೆ ಜಾಸ್ತಿ ಆದರೆ ಭಾರತೀಪುರ ಫ್ಲೈ ಓವರ್ ಮುಚ್ಚುತ್ತದೆಯೇ ಎಂಬ ಪ್ರೆಶ್ನೆ ಉದ್ಭವವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು