9:37 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Shivamogga | ಗುಡ್ಡ ಕುಸಿಯುವ ಭೀತಿ: ಶಿವಮೊಗ್ಗ- ತೀರ್ಥಹಳ್ಳಿ ಸಂಪರ್ಕದ ಭಾರತೀಪುರ ಫ್ಲೈ ಓವರ್ ಒಂದು ಭಾಗ ಬಂದ್

11/07/2025, 16:04

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ

info.reporterkarnataka@gmail.com

ಕೋಟಿ ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಯಾಗಿದ್ದ ಭಾರತೀಪುರ ಫ್ಲೈ ಓವರ್ ಈಗ ಒಂದು ಭಾಗ ಸಂಚಾರ ಬಂದ್ ಮಾಡಲಾಗಿದೆ.
ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆ ಬರುವಾಗ ಎಡ ಭಾಗದಲ್ಲಿ ಬ್ಯಾರಿಕೆಡ್ ಹಾಕಿ ಸಂಚಾರ ಬಂದ್ ಮಾಡಲಾಗಿದ್ದು, ಧರೆ ಕುಸಿಯುವ ಭೀತಿಯಿಂದ ರಸ್ತೆ ಸಂಚಾರ ಬಂದ್ ಮಾಡಲಾಗಿದೆ.
ಮಳೆಗಾಲ ಸಂದರ್ಭದಲ್ಲಿ ಎಲ್ಲೆಡೆ ಭೂ ಕುಸಿತ, ಧರೆ ಕುಸಿತ ಆಗುತ್ತದೆ. ಆದರೆ ಭಾರತೀಪುರದಲ್ಲಿ ಧರೆ ಕುಸಿತಕ್ಕೆ ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ಹಾಗೂ ಗುತ್ತಿಗೆದಾರರೇ ಕಾರಣ ಎಂಬ ಆರೋಪ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ. ಮಳೆಗಾಲದಲ್ಲಿ ಕುಸಿಯುತ್ತದೆ ಎಂಬ ಪರಿಜ್ಞಾನ ಸಹ ಇಲ್ಲದೆ ಇಲ್ಲಿಯವರೆಗೆ ಗುಡ್ಡ ಕುಸಿಯುವುದನ್ನು ತಡೆಯಲು ಪ್ರಯತ್ನ ಸಹ ಮಾಡಿಲ್ಲ. ಈಗ ಕುಸಿದು ಬಿದ್ದರೆ ತಕ್ಷಣ ಅದರಿಂದ ತುರ್ತು ಕಾಮಗಾರಿ ಎಂದು ಮತ್ತೆ ಬಿಲ್ ಮಾಡುತ್ತಾರೆ ಎಂದು ಆರೋಪಿಸಿದ್ದಾರೆ.


ಈ ಮಧ್ಯೆ ಕುಡು ಮಲ್ಲಿಗೆಯಿಂದ ಕೂಗಳತೆ ದೂರದಲ್ಲಿ ಮತ್ತೊಂದು ರಸ್ತೆ ಮಾಡುತ್ತಿದ್ದು ಅದು ಚಿಟ್ಟೆಬೈಲು ಸಂಪರ್ಕ ಮಾಡುತ್ತದೆ ಎನ್ನಲಾಗುತ್ತಿದೆ. ಈಗಾಗಲೇ ಅದಕ್ಕೆ ಜಲ್ಲಿ ಕಲ್ಲು ಸಹ ಹಾಕಲಾಗಿದೆ. ಅದಕ್ಕೆ ಕಾರಣ ಒಂದು ವೇಳೆ ಗುಡ್ಡ ಕುಸಿತ ದೊಡ್ಡ ಮಟ್ಟದಲ್ಲಿ ಆದರೆ ಪರ್ಯಾಯ ಮಾರ್ಗ ಎಂಬ ಮಾತು ಕೇಳಿ ಬಂದಿದೆ. ಇವರ ಕೆಲಸ ನೋಡುತ್ತಿದ್ದರೆ ಗುಡ್ಡ ಕುಸಿಯುವುದನ್ನೇ ಅಧಿಕಾರಿಗಳು ಕಾಯುತ್ತಿದ್ದಾರಾ? ಎಂಬುದಾಗಿ ಸಾರ್ವಜನಿಕರು ಪ್ರೆಶ್ನೆ ಮಾಡುತ್ತಿದ್ದಾರೆ.
ಒಟ್ಟಿನಲ್ಲಿ ಇದೇ ತರ ಮಳೆ ಜಾಸ್ತಿ ಆದರೆ ಭಾರತೀಪುರ ಫ್ಲೈ ಓವರ್ ಮುಚ್ಚುತ್ತದೆಯೇ ಎಂಬ ಪ್ರೆಶ್ನೆ ಉದ್ಭವವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು