8:26 AM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

Shivamogga | ಗುಡ್ಡ ಕುಸಿಯುವ ಭೀತಿ: ಶಿವಮೊಗ್ಗ- ತೀರ್ಥಹಳ್ಳಿ ಸಂಪರ್ಕದ ಭಾರತೀಪುರ ಫ್ಲೈ ಓವರ್ ಒಂದು ಭಾಗ ಬಂದ್

11/07/2025, 16:04

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ

info.reporterkarnataka@gmail.com

ಕೋಟಿ ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಯಾಗಿದ್ದ ಭಾರತೀಪುರ ಫ್ಲೈ ಓವರ್ ಈಗ ಒಂದು ಭಾಗ ಸಂಚಾರ ಬಂದ್ ಮಾಡಲಾಗಿದೆ.
ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆ ಬರುವಾಗ ಎಡ ಭಾಗದಲ್ಲಿ ಬ್ಯಾರಿಕೆಡ್ ಹಾಕಿ ಸಂಚಾರ ಬಂದ್ ಮಾಡಲಾಗಿದ್ದು, ಧರೆ ಕುಸಿಯುವ ಭೀತಿಯಿಂದ ರಸ್ತೆ ಸಂಚಾರ ಬಂದ್ ಮಾಡಲಾಗಿದೆ.
ಮಳೆಗಾಲ ಸಂದರ್ಭದಲ್ಲಿ ಎಲ್ಲೆಡೆ ಭೂ ಕುಸಿತ, ಧರೆ ಕುಸಿತ ಆಗುತ್ತದೆ. ಆದರೆ ಭಾರತೀಪುರದಲ್ಲಿ ಧರೆ ಕುಸಿತಕ್ಕೆ ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ಹಾಗೂ ಗುತ್ತಿಗೆದಾರರೇ ಕಾರಣ ಎಂಬ ಆರೋಪ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ. ಮಳೆಗಾಲದಲ್ಲಿ ಕುಸಿಯುತ್ತದೆ ಎಂಬ ಪರಿಜ್ಞಾನ ಸಹ ಇಲ್ಲದೆ ಇಲ್ಲಿಯವರೆಗೆ ಗುಡ್ಡ ಕುಸಿಯುವುದನ್ನು ತಡೆಯಲು ಪ್ರಯತ್ನ ಸಹ ಮಾಡಿಲ್ಲ. ಈಗ ಕುಸಿದು ಬಿದ್ದರೆ ತಕ್ಷಣ ಅದರಿಂದ ತುರ್ತು ಕಾಮಗಾರಿ ಎಂದು ಮತ್ತೆ ಬಿಲ್ ಮಾಡುತ್ತಾರೆ ಎಂದು ಆರೋಪಿಸಿದ್ದಾರೆ.


ಈ ಮಧ್ಯೆ ಕುಡು ಮಲ್ಲಿಗೆಯಿಂದ ಕೂಗಳತೆ ದೂರದಲ್ಲಿ ಮತ್ತೊಂದು ರಸ್ತೆ ಮಾಡುತ್ತಿದ್ದು ಅದು ಚಿಟ್ಟೆಬೈಲು ಸಂಪರ್ಕ ಮಾಡುತ್ತದೆ ಎನ್ನಲಾಗುತ್ತಿದೆ. ಈಗಾಗಲೇ ಅದಕ್ಕೆ ಜಲ್ಲಿ ಕಲ್ಲು ಸಹ ಹಾಕಲಾಗಿದೆ. ಅದಕ್ಕೆ ಕಾರಣ ಒಂದು ವೇಳೆ ಗುಡ್ಡ ಕುಸಿತ ದೊಡ್ಡ ಮಟ್ಟದಲ್ಲಿ ಆದರೆ ಪರ್ಯಾಯ ಮಾರ್ಗ ಎಂಬ ಮಾತು ಕೇಳಿ ಬಂದಿದೆ. ಇವರ ಕೆಲಸ ನೋಡುತ್ತಿದ್ದರೆ ಗುಡ್ಡ ಕುಸಿಯುವುದನ್ನೇ ಅಧಿಕಾರಿಗಳು ಕಾಯುತ್ತಿದ್ದಾರಾ? ಎಂಬುದಾಗಿ ಸಾರ್ವಜನಿಕರು ಪ್ರೆಶ್ನೆ ಮಾಡುತ್ತಿದ್ದಾರೆ.
ಒಟ್ಟಿನಲ್ಲಿ ಇದೇ ತರ ಮಳೆ ಜಾಸ್ತಿ ಆದರೆ ಭಾರತೀಪುರ ಫ್ಲೈ ಓವರ್ ಮುಚ್ಚುತ್ತದೆಯೇ ಎಂಬ ಪ್ರೆಶ್ನೆ ಉದ್ಭವವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು