6:41 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಶಿವಮೊಗ್ಗ: ಆಟವಾಡುತ್ತಿದ್ದಾಗ ಜೋಕಾಲಿ ಕುಣಿಕೆ ಬಿಗಿದು ಬಾಲಕಿ ಸಾವು

24/04/2026, 18:40

ಶಿವಮೊಗ್ಗ(reporterkarnataka.com): ಜೋಕಾಲಿ ಆಡಲು ಹೋಗಿ, ಕುಣಿಕೆ ಬಿಗಿದು ಬಾಲಕಿ ಸಾವಿಗೀಡಾದಂತಹ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಶಿವಮೊಗ್ಗ ತಾಲೂಕಿನ ಲಕ್ಕಿನಕೊಪ್ಪದಲ್ಲಿ ಮೂರು ದಿನದ ಹಿಂದೆ ಘಟನೆ ನಡೆದಿದ್ದು,ತಡವಾಗಿ ಬೆಳಕಿಗೆ ಬಂದಿದೆ.ಮೃತ ಬಾಲಕಿಯನ್ನು 9 ವರ್ಷದ ಪ್ರಣಮ್ಯ ಎಂದು ಗುರುತಿಸಲಾಗಿದೆ. ಲಕ್ಕಿನಕೊಪ್ಪದ ಚಿಕ್ಕಮ್ಮನ ಮನೆಯಲ್ಲಿ ಈ ಘಟನೆ ನಡೆದಿದೆ. ಬಾಲಕಿ ಪ್ರಣಮ್ಯ ರೂಮಿನಲ್ಲಿ ಕಟ್ಟಿದ್ದ ಜೋಕಾಲಿಯಲ್ಲಿ ಆಡುತ್ತಿದ್ದಳು, ಬಾಗಿಲು ಹಾಕಿ ಜೋಕಾಲಿ ಆಡುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಆಡುತ್ತಿದ್ದ ಜೋಕಾಲಿಯೇ ನೇಣಿನಂತೆ ಕತ್ತನ್ನು ಸುತ್ತಿಕೊಂಡು ಬಾಲಕಿ ಸಾವನ್ನಪ್ಪಿದ್ದಾಳೆ.
ಬಾಲಕಿ ಪ್ರಣಮ್ಯ ವಿದ್ಯಾನಗರದ ನಿವಾಸಿಯಾಗಿದ್ದು, ಲಕ್ಕಿನಕೊಪ್ಪದ ಚಿಕ್ಕಮ್ಮನ ಮನೆಗೆ ಬೇಸಿಗೆ ರಜೆ ಕಳೆಯಲು ಹೋಗಿದ್ದ ವೇಳೆ ಈ ದುರಂತ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಟ್ಟಿನಲ್ಲಿ ಈ ಬಾರಿಯ ಬೇಸಿಗೆ ರಜೆ ಪೋಷಕರಿಗೆ ಸಜೆಯಂತಾಗಿದ್ದು, ಮಕ್ಕಳನ್ನು ನೋಡಿಕೊಳ್ಳುವುದೇ ಒಂದು ದೊಡ್ಡ ಸವಾಲಾಗಿದೆ. ಬೇಸಿಗೆಯ ಸೆಖೆಯಿಂದಾಗಿ ನೀರಿನ ಮೂಲಗಳಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಮಕ್ಕಳ ಸಂಖ್ಯೆ ರಾಜ್ಯದಲ್ಲಿ ಎರಡಂಕಿ ದಾಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು