6:36 AM Monday27 - April 2026
ಬ್ರೇಕಿಂಗ್ ನ್ಯೂಸ್
New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ಇತ್ತೀಚಿನ ಸುದ್ದಿ

ಶಿವಮೊಗ್ಗ ಜಿಲ್ಲೆಯಾದ್ಯಂತ 241 ರೌಡಿಗಳ ಮನೆಗೆ ಪೊಲೀಸ್ ದಾಳಿ: ಏಕಕಾಲದಲ್ಲಿ ಭಾರಿ ಕಾರ್ಯಾಚರಣೆ

11/09/2023, 16:07

ಶಿವಮೊಗ್ಗ(reporterkarnataka.com):ಶಿವಮೊಗ್ಗ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ವಿವಿಧ ಪೊಲೀಸ್ ತಂಡಗಳು 241 ರೌಡಿಗಳ ಮನೆಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಸೋಮವಾರ ಬೆಳಗಿನ ಜಾವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಮಿಥುನ್ ಕುಮಾರ್ ಜಿ.ಕೆ. ನೇತೃತ್ವದಲ್ಲಿ ಶಿವಮೊಗ್ಗ ಎ ಉಪ ವಿಭಾಗದ ಡಿವೈಎಸ್ಪಿ ಬಾಲರಾಜ್, ಶಿವಮೊಗ್ಗ ಬಿ ಉಪ ವಿಭಾಗದಲ್ಲಿ ಡಿವೈಎಸ್ಪಿ ಸುರೇಶ್ ಎಂ, ಭದ್ರಾವತಿ ಉಪ ವಿಭಾಗದಲ್ಲಿ ಪೊಲೀಸ್ ಉಪಾಧೀಕ್ಷ ನಾಗರಾಜ್, ಸಾಗರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷ ಗೋಪಾಲಕೃಷ್ಣ ತಿಮ್ಮಣ್ಣ ನಾಯ್ಕ್, , ಶಿಕಾರಿಪುರ ಉಪ ವಿಭಾಗದ ಡಿವೈಎಸ್ಪಿ ಶಿವಾನಂದ್ ಮದರಖಂಡಿ, ಮತ್ತು ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ, ಹಾಗೂ ಆಯಾ ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು ಹಾಗೂ ಸಿಬ್ಬಂಧಿಗಳನ್ನೊಳಗೊಂಡ ಪ್ರತ್ಯೇಕ ತಂಡಗಳು ಜಿಲ್ಲೆಯಾದ್ಯಂತ ಏಕಕಾಲದಲ್ಲಿ ದಾಳಿ ನಡೆಸಿವೆ. ಶಿವಮೊಗ್ಗ ಎ ಉಪ ವಿಭಾಗದಲ್ಲಿ 39, ಶಿವಮೊಗ್ಗ ಬಿ ಉಪ ವಿಭಾಗದಲ್ಲಿ 38, ಭದ್ರಾವತಿ ಉಪ ವಿಭಾಗದಲ್ಲಿ 72, ಸಾಗರ ಉಪ ವಿಭಾಗದಲ್ಲಿ 21, ಶಿಕಾರಿಪುರ ಉಪ ವಿಭಾಗದಲ್ಲಿ 27, ತೀರ್ಥಹಳ್ಳಿ ಉಪ ವಿವಭಾಗದಲ್ಲಿ 44 ಸೇರಿ ಜಿಲ್ಲೆಯಾದ್ಯಂತ ಒಟ್ಟು 241 ರೌಡಿಗಳ ಮನೆಗಳನ್ನು ತಪಾಸಣೆ ನಡೆಸಿ ರೌಡಿಗಳ ಹಾಜರಾತಿ, ಹಾಲಿ ಮಾಡುತ್ತಿರುವ ಕೆಲಸ, ಮನೆಯಲ್ಲಿ ಮಾದಕ ವಸ್ತು ಹಾಗೂ ಮಾರಕಾಸ್ತ್ರಗಳನ್ನು ಇಟ್ಟುಕೊಂಡಿರುವ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
ಮುಂಬರುವ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಸಂದರ್ಭದಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಮತ್ತು ಕೋಮು ಸೌಹಾರ್ದತೆಗೆ ದಕ್ಕೆತರುವಂತಹ / ಶಾಂತಿಗೆ ಭಂಗವನ್ನುಂಟು ಮಾಡುವಂತಹ ಕೃತ್ಯಗಳಲ್ಲಿ ಭಾಗಿಯಾಗದಂತೆ ಸೂಕ್ತ ಎಚ್ಚರಿಕೆ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು