8:10 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

Shivamogga | ತೀರ್ಥಹಳ್ಳಿ: 3 ಮಂದಿ ಗೋ ಕಳ್ಳರ ಬಂಧನ; ಓಮಿನಿ ಕಾರು ವಶ

20/09/2025, 16:31

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಕಳೆದ ಹಲವಾರು ದಿನಗಳಿಂದ ತೀರ್ಥಹಳ್ಳಿ ತಾಲೂಕಿನಲ್ಲಿ ಗೋ ಕಳ್ಳತನವಾಗುತ್ತಿರುವ ಬಗ್ಗೆ ಅದರಲ್ಲೂ ಕಾರಿನಲ್ಲಿ ಗೋವುಗಳನ್ನು ತುಂಬಿಕೊಂಡು ಹೋಗುವ ದೃಶ್ಯಗಳು ವರದಿಯಾಗುತ್ತಿದ್ದವು. ಆ ನಂತರ ಬಿಜೆಪಿ ವತಿಯಿಂದ ಈ ವಿಚಾರವಾಗಿ ಪ್ರತಿಭಟನೆ ಸಹ ನಡೆದಿತ್ತು.
ಈ ವಿಚಾರದಲ್ಲಿ ತನಿಖೆ ಚುರುಕುಗೊಳಿಸಿದ ತೀರ್ಥಹಳ್ಳಿ ಪೊಲೀಸರು ಪಟ್ಟಣದ ಬೆಟ್ಟಮಕ್ಕಿಯ ಭೂತರಾಯನಕಟ್ಟೆ ಬಳಿ ಗೋ ಕಳ್ಳತನ ಮಾಡಲು ಬಂದಿದ್ದ ಮೂವರನ್ನು ಬಂಧಿಸಿದ್ದಾರೆ. ಶಿವಮೊಗ್ಗದ ಓರ್ವ ಹಾಗೂ ಲಿಂಗಾಪುರದ ಇಬ್ಬರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರತಿ ನಿತ್ಯ ಗೋ ಕಳ್ಳತನ ಮಾಡಿ ಗೋ ಸಾಗಾಟ ಮಾಡಲಾಗುತ್ತಿತ್ತು. ಇದರಿಂದ ಜಾಗೃತಗೊಂಡ ಪೊಲೀಸ್ ತಂಡ ಇಂದು ಮೂವರನ್ನು ಬಂಧಿಸಿದೆ. ಬೆಟ್ಟಮಕ್ಕಿ ಬಳಿ ಓಮಿನಿ ಕಾರಿನ ಮೂಲಕ ಗೋ ಕಳ್ಳತನ ಮಾಡಲು ಬಂದಾಗಲೇ ಪೋಲೀಸರ ಕೈಗೆ ಕಳ್ಳರು ಸಿಕ್ಕಿಬಿದ್ದಿದ್ದಾರೆ. ಆರೋಪಿಗಳಾದ ಮೌಸಿನ್ ಖಾನ್, ಮಹಮದ್ ಮುಸ್ತಾಕ್, ಶಿರಾಜ್ ಉದ್ದಿನ್ ಎಂಬ ಮೂವರನ್ನು ಬಂಧಿಸಲಾಗಿದೆ. ಈ ಮೂವರು ರಸ್ತೆ ಬದಿಯಲ್ಲಿ ಮಲಗಿರುವ ಜಾನುವಾರುಗಳನ್ನು ಒಮಿನಿ ಕಾರಿನಲ್ಲಿ ಹಾಕಿಕೊಂಡು ಶಿವಮೊಗ್ಗಕ್ಕೆ ತೆಗೆದುಕೊಂಡು ಹೋಗಿ ಮಾರಾಟ ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ.
ಮೂರು ಆರೋಪಿಗಳನ್ನು ಮತ್ತು ಅವರು ಕಳ್ಳತನ ಮಾಡಲು ತಂದಿದ್ದ ಓಮಿನಿ ಕಾರನ್ನು ವಶಕ್ಕೆ ಪಡೆದು ಕಾನೂನು ಕ್ರಮವನ್ನು ಜರುಗಿಸಲಾಗಿದೆ.
ಡಿ ವೈ ಎಸ್ ಪಿ ಅರವಿಂದ್ ಕಲಗುಜ್ಜಿ ಹಾಗೂ ಇನ್ಸ್ಪೆಕ್ಟರ್ ಇಮ್ರಾನ್ ಬೇಗ್ ರವರ ನೇತೃತ್ವದ ತಂಡ ಮಿಂಚಿನ ಕಾರ್ಯಾಚರಣೆ ನಡೆಸಿ ಗೋ ಕಳ್ಳರನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು