10:08 AM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

Shivamogga | ತೀರ್ಥಹಳ್ಳಿ: 3 ಮಂದಿ ಗೋ ಕಳ್ಳರ ಬಂಧನ; ಓಮಿನಿ ಕಾರು ವಶ

20/09/2025, 16:31

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಕಳೆದ ಹಲವಾರು ದಿನಗಳಿಂದ ತೀರ್ಥಹಳ್ಳಿ ತಾಲೂಕಿನಲ್ಲಿ ಗೋ ಕಳ್ಳತನವಾಗುತ್ತಿರುವ ಬಗ್ಗೆ ಅದರಲ್ಲೂ ಕಾರಿನಲ್ಲಿ ಗೋವುಗಳನ್ನು ತುಂಬಿಕೊಂಡು ಹೋಗುವ ದೃಶ್ಯಗಳು ವರದಿಯಾಗುತ್ತಿದ್ದವು. ಆ ನಂತರ ಬಿಜೆಪಿ ವತಿಯಿಂದ ಈ ವಿಚಾರವಾಗಿ ಪ್ರತಿಭಟನೆ ಸಹ ನಡೆದಿತ್ತು.
ಈ ವಿಚಾರದಲ್ಲಿ ತನಿಖೆ ಚುರುಕುಗೊಳಿಸಿದ ತೀರ್ಥಹಳ್ಳಿ ಪೊಲೀಸರು ಪಟ್ಟಣದ ಬೆಟ್ಟಮಕ್ಕಿಯ ಭೂತರಾಯನಕಟ್ಟೆ ಬಳಿ ಗೋ ಕಳ್ಳತನ ಮಾಡಲು ಬಂದಿದ್ದ ಮೂವರನ್ನು ಬಂಧಿಸಿದ್ದಾರೆ. ಶಿವಮೊಗ್ಗದ ಓರ್ವ ಹಾಗೂ ಲಿಂಗಾಪುರದ ಇಬ್ಬರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರತಿ ನಿತ್ಯ ಗೋ ಕಳ್ಳತನ ಮಾಡಿ ಗೋ ಸಾಗಾಟ ಮಾಡಲಾಗುತ್ತಿತ್ತು. ಇದರಿಂದ ಜಾಗೃತಗೊಂಡ ಪೊಲೀಸ್ ತಂಡ ಇಂದು ಮೂವರನ್ನು ಬಂಧಿಸಿದೆ. ಬೆಟ್ಟಮಕ್ಕಿ ಬಳಿ ಓಮಿನಿ ಕಾರಿನ ಮೂಲಕ ಗೋ ಕಳ್ಳತನ ಮಾಡಲು ಬಂದಾಗಲೇ ಪೋಲೀಸರ ಕೈಗೆ ಕಳ್ಳರು ಸಿಕ್ಕಿಬಿದ್ದಿದ್ದಾರೆ. ಆರೋಪಿಗಳಾದ ಮೌಸಿನ್ ಖಾನ್, ಮಹಮದ್ ಮುಸ್ತಾಕ್, ಶಿರಾಜ್ ಉದ್ದಿನ್ ಎಂಬ ಮೂವರನ್ನು ಬಂಧಿಸಲಾಗಿದೆ. ಈ ಮೂವರು ರಸ್ತೆ ಬದಿಯಲ್ಲಿ ಮಲಗಿರುವ ಜಾನುವಾರುಗಳನ್ನು ಒಮಿನಿ ಕಾರಿನಲ್ಲಿ ಹಾಕಿಕೊಂಡು ಶಿವಮೊಗ್ಗಕ್ಕೆ ತೆಗೆದುಕೊಂಡು ಹೋಗಿ ಮಾರಾಟ ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ.
ಮೂರು ಆರೋಪಿಗಳನ್ನು ಮತ್ತು ಅವರು ಕಳ್ಳತನ ಮಾಡಲು ತಂದಿದ್ದ ಓಮಿನಿ ಕಾರನ್ನು ವಶಕ್ಕೆ ಪಡೆದು ಕಾನೂನು ಕ್ರಮವನ್ನು ಜರುಗಿಸಲಾಗಿದೆ.
ಡಿ ವೈ ಎಸ್ ಪಿ ಅರವಿಂದ್ ಕಲಗುಜ್ಜಿ ಹಾಗೂ ಇನ್ಸ್ಪೆಕ್ಟರ್ ಇಮ್ರಾನ್ ಬೇಗ್ ರವರ ನೇತೃತ್ವದ ತಂಡ ಮಿಂಚಿನ ಕಾರ್ಯಾಚರಣೆ ನಡೆಸಿ ಗೋ ಕಳ್ಳರನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು