7:29 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

Shivamogga | ತೀರ್ಥಹಳ್ಳಿ: ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇಗುಲದಿಂದ 1 ಲಕ್ಷಕ್ಕೂ ಅಧಿಕ ಹಣ ಕದ್ದ ಖತರ್ನಾಕ್ ಕಳ್ಳನ ಬಂಧನ

15/08/2025, 22:15

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿಯ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವಸ್ಥಾನದಿಂದ ಒಂದು ಲಕ್ಷಕ್ಕೂ ಅಧಿಕ ಹಣ ಕಳ್ಳತನ ಮಾಡಿದ್ದ ಖತರ್ನಾಕ್ ಕಳ್ಳನ ಬಂಧನವಾಗಿದೆ.
ಸಿಸಿ ಕ್ಯಾಮರಾ ಕಣ್ಣು ತಪ್ಪಿಸಿದ್ದ ಖತರ್ನಾಕ್ ಕಳ್ಳ ರಾಮೇಶ್ವರನ ಮೂರನೇ ಕಣ್ಣಿನಲ್ಲಿ ಸಿಕ್ಕಿಬಿದ್ದಂತೆ ಆಗಿದೆ ಎಂದು ಭಕ್ತರು ಮಾತನಾಡಿಕೊಳ್ಳುತ್ತಿದ್ದಾರೆ.
ಮೊದಲಿಗೆ ರಾಮೇಶ್ವರ ದೇವಸ್ಥಾನದ ಪಕ್ಕದಲ್ಲಿ ಇದ್ದಂತಹ ಮಾಧವ ದೇವಸ್ಥಾನದಲ್ಲಿ ಕಳ್ಳತನ ಮಾಡಲು ಯತ್ನಿಸಿ ಪಕ್ಕದ ವೆಂಕಟರಮಣ ದೇವಸ್ಥಾನದ ಸಿಸಿ ಕ್ಯಾಮರದಲ್ಲಿ ಸೇರಿಯಾಗಿತ್ತು. ನಂತರ ರಾಮೇಶ್ವರ ದೇವಸ್ಥಾನದ ಅನ್ನ ದಾಸೋಹ ಕೊಠಡಿಯಲ್ಲಿ ಇದ್ದ ಹಣವನ್ನು ಕಳ್ಳತನ ಮಾಡಿದ್ದ. ಅಷ್ಟೇ ಅಲ್ಲದೆ ಎರಡು ಮೊಬೈಲ್ ಕೂಡ ದೋಚಿದ್ದ. ಅನ್ನ ದಾಸೋಹ ಕೊಠಡಿಯ ಹಲವು ಬಾಗಿಲುಗಳನ್ನು ಮುರಿದು ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿದ್ದ ಹಾಗೂ ಸಣ್ಣದೊಂದು ಕಾಣಿಕೆ ಹುಂಡಿ ಸಹ ತೆಗೆದು ಅದರಲ್ಲಿದ್ದ ಹಣ ದೋಚಿಕೊಂಡು ಪರಾರಿಯಾಗಿದ್ದ.

ಮಾಸ್ಕ್ ಧರಿಸಿ ಕಳ್ಳತನ ಮಾಡಿದ್ದ ಆ ಮಾಸ್ಕ್ ಮ್ಯಾನ್ ಯಾರು? ಎಂಬುದು ಬಾರಿ ಸಂಚಲನ ಮೂಡಿಸಿದ್ದ. ತೀರ್ಥಹಳ್ಳಿ ಪೊಲೀಸರ ಚಾಣಕ್ಷತನದಿಂದ ಮೂರು ದಿನದೊಳಗೆ ಕಳ್ಳನನ್ನು ಬಂಧಿಸಲಾಗಿದೆ. ಡಿ ವೈ ಎಸ್ ಪಿ ಅರವಿಂದ್ ಕಲಗುಂಜಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಚರಣೆಯಿಂದಾಗಿ ಖತರ್ನಾಕ್ ಕಳ್ಳನ ಬಂಧನವಾಗಿದೆ.
ಬಂಧನವಾದ ಖತರ್ನಾಕ್ ಕಳ್ಳನಿಂದ ಎರಡು ಮೊಬೈಲ್ ಹಾಗೂ 20 ಸಾವಿರ ಹಣ ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು