1:45 PM Saturday4 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ಶಿವಮೊಗ್ಗದಲ್ಲಿ ಯೋಗ ಪ್ರದರ್ಶಿಸಿ ನಾಡಿನ ಗಮನ ಸೆಳೆದ ಸ್ಪೀಕರ್ ಖಾದರ್!: 6ನೇ ತರಗತಿಯಲ್ಲೇ ಕರಗತ!!

22/10/2023, 22:47

ಪಲ್ಲವಿ ರಾಮಯ್ಯ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಮತ್ತೊಮ್ಮೆ ಸುದ್ದಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಗಣೇಶೋತ್ಸವ ವೇಳೆ ತಾಲೀಮು ಪ್ರದರ್ಶಿಸಿ ಸುದ್ದಿ ಮಾಡಿದ್ದ ಸ್ಪೀಕರ್ ಅವರು ಇದೀಗ ಯೋಗ ಪ್ರದರ್ಶನ ನೀಡುವ ಮೂಲಕ ನಾಡಿನ ಗಮನ ಸೆಳೆದಿದ್ದಾರೆ.
ಶಿವಮೊಗ್ಗದಲ್ಲಿ ನಡೆಯುತ್ತಿರುವ ದಸರಾ ಕಾರ್ಯಕ್ರಮವನ್ನು ಯು.ಟಿ. ಖಾದರ್ ಉದ್ಘಾಟಿಸಿ, ಯೋಗಪಟುಗಳೊಂದಿಗೆ ತಾವು ಕೂಡ ಯೋಗ ಮಾಡಿದ್ದಾರೆ. ಖಾದರ್ ಅವರು ಹೆಚ್ಚು ಕಡಿಮೆ ಎಲ್ಲಾ ಆಸನಗಳನ್ನು ಲೀಲಾಜಾಲವಾಗಿ ಮಾಡಿ ಶಿವಮೊಗ್ಗ ಮಾತ್ರವಲ್ಲ, ಇಡೀ ನಾಡಿನ ಗಮನ ಸೆಳೆದಿದ್ದಾರೆ.
ನನ್ನ ಬಾಲ್ಯಾವಸ್ಥೆಯಲ್ಲೇ 6ನೇ ತರಗತಿಯಿಂದ ನಾನು ಯೋಗಾಸನ ಮಾಡುತ್ತಿದ್ದೇನೆ.
ಯೋಗಾಸನ ಆರೋಗ್ಯಕ್ಕೆ ಒಳ್ಳೆಯದು.ಯೋಗವನ್ನು ಎಲ್ಲರು ಮಾಡಬೇಕು ಎಂದು ಹೇಳಿದ್ದಾರೆ.
ನನ್ನ ಅಜ್ಜ (ತಾಯಿಯ ತಂದೆ) ಅವರು ಯೋಗ ಗುರುವಿಗೆ ಮನೆಗೆ ಬಂದು ಕಲಿಸಿಕೊಡುವಂತೆ ಕರೆಯುತ್ತಿದ್ದರು. ಇದರಿಂದ ಯೋಗ ನನಗೆ ಕಲಿಯಲು ಸಾಧ್ಯವಾಯಿತು ಎಂದು ಯು.ಟಿ. ಖಾದರ್ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು