3:42 AM Friday9 - January 2026
ಬ್ರೇಕಿಂಗ್ ನ್ಯೂಸ್
ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ…

ಇತ್ತೀಚಿನ ಸುದ್ದಿ

ಶಿವಶಂಕರ ನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಾಲಕರ ಸಭೆ

24/08/2024, 23:51

ಸಂತೋಷ್ ಬೆಳಗಾವಿ

info.reporterkarnataka@gmail.com

ಸರಕಾರಿ ಶಾಲೆಗಳಲ್ಲಿ ಪ್ರತಿ ತಿಂಗಳು ಪಾಲಕರ ಸಭೆ ಸರಕಾರ ಆದೇಶ ಮಾಡಿದ್ದು ಸ್ವಾಗತಾರ್ಹ. ಪ್ರತೀ ತಿಂಗಳು ಸಭೆ ಮಾಡುವುದರಿಂದ ಮಕ್ಕಳ ಬೌದ್ಧಿಕ ಮಟ್ಟ ಹೆಚ್ಚಿಸಿ ಹೆಚ್ಚು ಶಿಕ್ಷಣ ಕಲಿಯಲು ಅವಕಾಶ ಕಲ್ಪಿಸುವ ಸರಳ ಮಾರ್ಗವೆಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಮುರಿಗೆಪ್ಪ ಮಾಲಗಾರ ಹೇಳಿದರು.
ಅವರು ಹಳ್ಳೂರ 24 ಗ್ರಾಮದ ಶಿವಶಂಕರ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪಾಲಕರ ಸಭೆಯಲ್ಲಿ ಮಾತನಾಡಿ ದರು.
ಪ್ರಾಥಮಿಕ ಶಾಲೆಯಲ್ಲಿ ಕಲಿಯುವ ಶಿಕ್ಷಣ ಜೀವನದ ತಳಪಾಯವಿದ್ದಂತೆ. ಉನ್ನತ ಮಟ್ಟದ ಶಿಕ್ಷಣ ಕಲಿತು ಮೇಧಾವಿಗಳಾಗಿರಿ ಮೊಬೈಲ್ ಟಿವಿ ಕಡೆ ಗಮನ ಕೊಡದೆ ಹೆಚ್ಚು ಅಭ್ಯಾಸದ ಗಮನ ಹರಿಸಿ ವಿದ್ಯಾವಂತರಾಗಿರೆಂದು ಹೇಳಿದರು. ಪ್ರಧಾನ ಗುರುಗಳಾದ ಆರ್. ಕೆ. ಮೆಲಗಡೆ ಮಾತನಾಡಿ, ನಮ್ಮ ಶಾಲೆಯಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಶಿಕ್ಷಕರಲ್ಲಿ ಏನಾದರೂ ತಪ್ಪುಗಳು ಕಂಡು ಬಂದರೆ ನಮ್ಮ ಗಮನಕ್ಕೆ ತಂದರೆ ಸರಿ ಪಡಿಸಿಕೊಳ್ಳುತ್ತೇವೆ. ಎಲ್ಲರೂ ಸೇರಿಕೊಂಡು ಶಾಲೆಗೆ ವಿದ್ಯಾರ್ಥಿಗಳ ಇನ್ನಷ್ಟು ಸಂಖ್ಯೆ ಹೆಚ್ಚಿಸಿ ಶಾಲೆಯ ಕೀರ್ತಿ ಬೆಳೆಸೋಣಾ ಎಂದು ಹೇಳಿದರು. ಬಸಲಿಂಗ ಬಾಗೋಡಿ ಮಾತನಾಡಿ ಮಕ್ಕಳಿಗೆ ದಿನಾಲು ಎಲ್ಲಾ ರೀತಿಯ ಪಾಠ ಕಲಿಸುವದರ ಜೊತೆಗೆ ಮರಳಿ ನೆನಪಿಸಿಕೊಂಡು ಮಕ್ಕಳ ತಲೆಯಲ್ಲಿ ಉಳಿಯುವ ಹಾಗೆ ಶಿಕ್ಷಣ ನೀಡಬೇಕು.ಪಾಲಕರ ಸಭೆಯು ಪ್ರತಿ ತಿಂಗಳು ಅರ್ಥ ಪೂರ್ಣವಾಗಿ ನಡೆಯಿಲಿ ಎಂದು ಹೇಳಿದರು. ಸಭೆಯಲ್ಲಿ ಮಕ್ಕಳನ್ನು ಎಬ್ಬಿಸಿ ಸರಳ ಪ್ರಶ್ನೆ ಕೇಳಿದಾಗ ಕೆಲವು ಪ್ರಶ್ನೆಗೆ ಮಾತ್ರ ಉತ್ತರವನ್ನು ನೀಡಿದರು. ಪಾಲಕರು ಮತ್ತು ಶಿಕ್ಷಕರ ಮದ್ಯೆ ಕೆಲವು ವಿಚಾರ ನಡೆದವು.
ಈ ಸಮಯದಲ್ಲಿ ಸಿದ್ದಪ್ಪ ಅಂಗಡಿ, ದುಂಡಪ್ಪ ಕೂಲಿಗೋಡ, ಲಕ್ಷ್ಮಣ ಗಲಗಲಿ, ಸಂಜು ಕೊರೆ, ಕೆಂಪವ್ವ ಅಂಗಡಿ, ಶಿಕ್ಷಕರಾದ ಬಿ. ಜೆ. ಪಾರ್ಥನಳ್ಳಿ,ರಾಮು ಹರಿಜನ, ಶೋಭಾ ಮುತಾರಿ, ಪಾಲಕರಾದ ನಾಗಪ್ಪ ಬಿಸನಾಳ, ಶಂಕರ ಮಾಲಗಾರ, ಪ್ರಕಾಶ ಲೋಕನ್ನವರ, ಪ್ರಕಾಶ ಬಾಗೋಡಿ ಸೇರಿದಂತೆ ಅನೇಕರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು