8:04 AM Friday20 - September 2024
ಬ್ರೇಕಿಂಗ್ ನ್ಯೂಸ್
ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ

ಇತ್ತೀಚಿನ ಸುದ್ದಿ

ಶಿವಶಂಕರ ನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಾಲಕರ ಸಭೆ

24/08/2024, 23:51

ಸಂತೋಷ್ ಬೆಳಗಾವಿ

info.reporterkarnataka@gmail.com

ಸರಕಾರಿ ಶಾಲೆಗಳಲ್ಲಿ ಪ್ರತಿ ತಿಂಗಳು ಪಾಲಕರ ಸಭೆ ಸರಕಾರ ಆದೇಶ ಮಾಡಿದ್ದು ಸ್ವಾಗತಾರ್ಹ. ಪ್ರತೀ ತಿಂಗಳು ಸಭೆ ಮಾಡುವುದರಿಂದ ಮಕ್ಕಳ ಬೌದ್ಧಿಕ ಮಟ್ಟ ಹೆಚ್ಚಿಸಿ ಹೆಚ್ಚು ಶಿಕ್ಷಣ ಕಲಿಯಲು ಅವಕಾಶ ಕಲ್ಪಿಸುವ ಸರಳ ಮಾರ್ಗವೆಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಮುರಿಗೆಪ್ಪ ಮಾಲಗಾರ ಹೇಳಿದರು.
ಅವರು ಹಳ್ಳೂರ 24 ಗ್ರಾಮದ ಶಿವಶಂಕರ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪಾಲಕರ ಸಭೆಯಲ್ಲಿ ಮಾತನಾಡಿ ದರು.
ಪ್ರಾಥಮಿಕ ಶಾಲೆಯಲ್ಲಿ ಕಲಿಯುವ ಶಿಕ್ಷಣ ಜೀವನದ ತಳಪಾಯವಿದ್ದಂತೆ. ಉನ್ನತ ಮಟ್ಟದ ಶಿಕ್ಷಣ ಕಲಿತು ಮೇಧಾವಿಗಳಾಗಿರಿ ಮೊಬೈಲ್ ಟಿವಿ ಕಡೆ ಗಮನ ಕೊಡದೆ ಹೆಚ್ಚು ಅಭ್ಯಾಸದ ಗಮನ ಹರಿಸಿ ವಿದ್ಯಾವಂತರಾಗಿರೆಂದು ಹೇಳಿದರು. ಪ್ರಧಾನ ಗುರುಗಳಾದ ಆರ್. ಕೆ. ಮೆಲಗಡೆ ಮಾತನಾಡಿ, ನಮ್ಮ ಶಾಲೆಯಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಶಿಕ್ಷಕರಲ್ಲಿ ಏನಾದರೂ ತಪ್ಪುಗಳು ಕಂಡು ಬಂದರೆ ನಮ್ಮ ಗಮನಕ್ಕೆ ತಂದರೆ ಸರಿ ಪಡಿಸಿಕೊಳ್ಳುತ್ತೇವೆ. ಎಲ್ಲರೂ ಸೇರಿಕೊಂಡು ಶಾಲೆಗೆ ವಿದ್ಯಾರ್ಥಿಗಳ ಇನ್ನಷ್ಟು ಸಂಖ್ಯೆ ಹೆಚ್ಚಿಸಿ ಶಾಲೆಯ ಕೀರ್ತಿ ಬೆಳೆಸೋಣಾ ಎಂದು ಹೇಳಿದರು. ಬಸಲಿಂಗ ಬಾಗೋಡಿ ಮಾತನಾಡಿ ಮಕ್ಕಳಿಗೆ ದಿನಾಲು ಎಲ್ಲಾ ರೀತಿಯ ಪಾಠ ಕಲಿಸುವದರ ಜೊತೆಗೆ ಮರಳಿ ನೆನಪಿಸಿಕೊಂಡು ಮಕ್ಕಳ ತಲೆಯಲ್ಲಿ ಉಳಿಯುವ ಹಾಗೆ ಶಿಕ್ಷಣ ನೀಡಬೇಕು.ಪಾಲಕರ ಸಭೆಯು ಪ್ರತಿ ತಿಂಗಳು ಅರ್ಥ ಪೂರ್ಣವಾಗಿ ನಡೆಯಿಲಿ ಎಂದು ಹೇಳಿದರು. ಸಭೆಯಲ್ಲಿ ಮಕ್ಕಳನ್ನು ಎಬ್ಬಿಸಿ ಸರಳ ಪ್ರಶ್ನೆ ಕೇಳಿದಾಗ ಕೆಲವು ಪ್ರಶ್ನೆಗೆ ಮಾತ್ರ ಉತ್ತರವನ್ನು ನೀಡಿದರು. ಪಾಲಕರು ಮತ್ತು ಶಿಕ್ಷಕರ ಮದ್ಯೆ ಕೆಲವು ವಿಚಾರ ನಡೆದವು.
ಈ ಸಮಯದಲ್ಲಿ ಸಿದ್ದಪ್ಪ ಅಂಗಡಿ, ದುಂಡಪ್ಪ ಕೂಲಿಗೋಡ, ಲಕ್ಷ್ಮಣ ಗಲಗಲಿ, ಸಂಜು ಕೊರೆ, ಕೆಂಪವ್ವ ಅಂಗಡಿ, ಶಿಕ್ಷಕರಾದ ಬಿ. ಜೆ. ಪಾರ್ಥನಳ್ಳಿ,ರಾಮು ಹರಿಜನ, ಶೋಭಾ ಮುತಾರಿ, ಪಾಲಕರಾದ ನಾಗಪ್ಪ ಬಿಸನಾಳ, ಶಂಕರ ಮಾಲಗಾರ, ಪ್ರಕಾಶ ಲೋಕನ್ನವರ, ಪ್ರಕಾಶ ಬಾಗೋಡಿ ಸೇರಿದಂತೆ ಅನೇಕರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು