6:52 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಶಾಕಿಂಗ್ ನ್ಯೂಸ್: ಮಂಗಳೂರು, ಬೆಂಗಳೂರು ಸೇರಿದಂತೆ 10 ನಗರಗಳಲ್ಲಿ ಅಧಿಕ ಮಾಲಿನ್ಯ; ಲಾಕ್ ಡೌನ್ ನಲ್ಲೂ ಹೆಚ್ಚಳ

28/01/2022, 21:50

ಹೊಸದಿಲ್ಲಿ(reporterkarnataka.com): ಕೊರೊನಾ ಭೀತಿಯ ನಡುವೆಯೂ ದಕ್ಷಿಣ ಭಾರತದ ಮಂಗಳೂರು, ಬೆಂಗಳೂರು ಮತ್ತು ಮೈಸೂರು ಸೇರಿದಂತೆ 10 ನಗರಗಳಲ್ಲಿ ಹೆಚ್ಚಿನ ಮಾಲಿನ್ಯ ಕಂಡು ಬಂದಿದೆ ಎಂಬ ಆತಂಕಕಾರಿ ಮಾಹಿತಿ ಹೊರಬಿದ್ದಿದೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ 2020ರ ನವೆಂಬರ್‌ 20ರಿಂದ 2021ರ ನವೆಂಬರ್‌ 20ರ ವರೆಗಿನ ದತ್ತಾಂಶಗಳ ಬಗ್ಗೆ ಅಧ್ಯಯನ ನಡೆಸಿರುವ ಗ್ರೀನ್‌ಪೀಸ್‌ ಇಂಡಿಯಾ ಈ ವರದಿ ಮಾಡಿದೆ. ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ನಿಗದಿಪಡಿಸಿರುವ ಗುಣಮಟ್ಟಕ್ಕಿಂತಲೂ ಈ ನಗರಗಳಲ್ಲಿ ಹೆಚ್ಚಿನ ಮಾಲಿನ್ಯವಿದೆ ಎಂದು ಗ್ರೀನ್‌ಪೀಸ್‌ ಇಂಡಿಯಾ ವರದಿ ತಿಳಿಸಿದೆ.

ಕೊಯಮತ್ತೂರು, ಬೆಂಗಳೂರು, ಮಂಗಳೂರು ಮತ್ತು ಅಮರಾವತಿಯ ಪಿಎಂ 2.5 ಮಟ್ಟ ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಯಲ್ಲಿ ತಿಳಿಸಿರುವ ಮಟ್ಟಕ್ಕಿಂತ 6ರಿಂದ 7 ಪಟ್ಟು ಹೆಚ್ಚಾಗಿದೆ. ಮೈಸೂರು, ಕೊಚ್ಚಿ, ಚೆನ್ನೈ ಮತ್ತು ಪುದುಚೇರಿಯ ಪಿಎಂ 2.5 ಮಟ್ಟ 4ರಿಂದ 5 ಪಟ್ಟು ಹೆಚ್ಚಿದೆ ಎಂದು ಗ್ರೀನ್‌ಪೀಸ್‌ ವರದಿ ಹೇಳಿದೆ. ಈ ಮೂಲಕ ವಾಯುಮಾಲಿನ್ಯ ಮಟ್ಟ ಕೇವಲ ಉತ್ತರ ಭಾರತವಷ್ಟೇ ಅಲ್ಲ, ದಕ್ಷಿಣ ಭಾರತದಲ್ಲೂ ಹೆಚ್ಚಾಗಿದೆ ಎಂಬುದನ್ನು ಮನದಟ್ಟು ಮಾಡಿದೆ ಎಂದು “ಇಂಡಿಯನ್‌ ಎಕ್ಸ್‌ಪ್ರಸ್‌’ ಉಲ್ಲೇಖೀಸಿದೆ.

ಲಾಕ್‌ಡೌನ್‌ನಲ್ಲೂ ಹೆಚ್ಚು: ವಿಚಿತ್ರವೆಂದರೆ, ಲಾಕ್‌ಡೌನ್‌ ಘೋಷಣೆ ಮಾಡಿದ್ದ ಅವಧಿಯಲ್ಲೂ 10 ನಗರಗಳಲ್ಲಿ ಪಿಎಂ 2.5 ಮತ್ತು ಪಿಎಂ 10 ವಾರ್ಷಿಕ ಮೌಲ್ಯ ವಿಶ್ವ ಆರೋಗ್ಯ ಸಂಸ್ಥೆ ನಿಗದಿಪಡಿಸಿರುವ ಮಾರ್ಗಸೂಚಿಗಿಂತ ಹೆಚ್ಚಾಗಿದೆ ಎಂದು ಈ ವರದಿ ತಿಳಿಸಿದೆ. ವಿಶಾಖ ಪಟ್ಟಣ, ಹೈದರಾಬಾದ್‌ಗಳಲ್ಲಿ ಮಾಲಿನ್ಯ 6 ಪಟ್ಟು ಹೆಚ್ಚಿದ್ದರೆ ಬೆಂಗಳೂರು, ಮಂಗಳೂರು, ಅಮರಾವತಿ, ಚೆನ್ನೈ, ಕೊಚ್ಚಿಯಲ್ಲಿ 3ರಿಂದ 4 ಪಟ್ಟು ಹೆಚ್ಚಿತ್ತು ಎಂದು ಗ್ರೀನ್‌ಪೀಸ್‌ ವರದಿ ಹೇಳಿದೆ. ಮೈಸೂರು, ಕೊಯಮತ್ತೂರು, ಪುದುಚೇರಿಯ ಮಾಲಿನ್ಯ ಪ್ರಮಾಣ ಎರಡರಿಂದ ಮೂರು ಪಟ್ಟು ಹೆಚ್ಚಾಗಿತ್ತು ಎಂದಿದೆ.

ಮೊದಲ 10 ಮಲಿನ ನಗರಗಳು: ಬೆಂಗಳೂರು, 2. ಹೈದರಾಬಾದ್‌, ಚೆನ್ನೈ, 4. ಅಮರಾವತಿ,ವಿಶಾಖಪಟ್ಟಣಂ, 6. ಕೊಚ್ಚಿ, ಮಂಗಳೂರು, 8. ಪುದುಚೇರಿ, ಕೊಯಮತ್ತೂರು, 10. ಮೈಸೂರು.

ಮಾಲಿನ್ಯಕ್ಕೆ ಕಾರಣವೇನು? : ಮೂಲ ಸೌಕರ್ಯ ಅಭಿವೃದ್ಧಿ, ಕೈಗಾರಿಕೆಗಳು, ಸಾರಿಗೆ, ಕಸವನ್ನು ಸುಡುವುದು, ನಿರ್ಮಾಣ ಕಾಮಗಾರಿ ಅತಿಯಾದ ಮಾಲಿನ್ಯಕ್ಕೆ ಕಾರಣವಾಗಿವೆ. ಇದರಿಂದ ಅಸ್ತಮಾ, ಹುಟ್ಟುವಾಗ ಮಗುವಿನ ತೂಕ ಕಡಿಮೆ, ಖನ್ನತೆ, ಸ್ಕಿಝೋಫ್ರೀನಿಯಾ, ಸಕ್ಕರೆ ಕಾಯಿಲೆ, ಪಾರ್ಶ್ವವಾಯು, ಶ್ವಾಸಕೋಶದ ಕ್ಯಾನ್ಸರ್‌, ಅವಧಿಗಿಂತ ಮುಂಚೆಯೇ ಮಗು ಹುಟ್ಟುವ ಸಮಸ್ಯೆಗಳು ಕಾಡಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು