5:16 PM Saturday19 - September 2026
ಬ್ರೇಕಿಂಗ್ ನ್ಯೂಸ್
*ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ…

ಇತ್ತೀಚಿನ ಸುದ್ದಿ

ಶೂಟಿಂಗ್ ವೇಳೆ ಬಿದ್ದು ಪ್ರಸಿದ್ಧ ನಟ ಪ್ರಕಾಶ್ ರೈ ಕೈಗೆ ಏಟು: ಶಸ್ತ್ರ ಚಿಕಿತ್ಸೆಗೆ ಹೈದರಾಬಾದ್ ಖಾಸಗಿ ಆಸ್ಪತ್ರೆಗೆ ದಾಖಲು

10/08/2021, 19:35

ಹೈದರಾಬಾದ್(reporterkarnataka.com): ಕರಾವಳಿ ಮೂಲದ ಪ್ರಸಿದ್ಧ ನಟ ಪ್ರಕಾಶ್ ರೈ ಅವರು ಸಿನಿಮಾ ಚಿತ್ರೀಕರಣದ ವೇಳೆ ಬಿದ್ದು ಗಾಯಗೊಂಡಿದ್ದಾರೆ.

ತಮಿಳು ಸಿನಿಮಾ ‘ತಿರುಚಿತ್ರಾಂಬರಂ’ ದ ಸಾಹಸ ದೃಶ್ಯ ಚಿತ್ರೀಕರಣದ ವೇಳೆ ಪ್ರಕಾಶ್ ರೈ ಅವರ ಕೈಗೆ ಗಂಭೀರ ಗಾಯವಾಗಿದೆ. ಅವರನ್ನು ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ದಾಖಲಿಸಲಾಗಿದೆ. ತಮಿಳು ನಟ ಧನುಷ್ ಈ ಚಿತ್ರದಲ್ಲಿ ನಾಯಕ ನಟನಾಗಿ ಅಭಿಯಿಸುತ್ತಿದ್ದಾರೆ. 

ಪ್ರಕಾಶ್ ರೈ ಅವರು ಈ ಕುರಿತು ಟ್ವೀಟ್ ಮಾಡಿದ್ದಾರೆ. ಶೂಟಿಂಗ್ ವೇಳೆ ಬಿದ್ದು ಕೈಗೆ ಸಣ್ಣ ಪೆಟ್ಟಾಗಿದೆ. ಶಸ್ತ್ರ ಚಿಕಿತ್ಸೆಗಾಗಿ ನನ್ನ ಸ್ನೇಹಿತ ಡಾ.ಗುರುವಾರೆಡ್ದಿ ಅವರ ಆಸ್ಪತ್ರೆಗೆ ತೆರಳುತ್ತಿದ್ದೇನೆ. ಬೇಗನೇ ಗುಣಮುಖನಾಗುತ್ತೇನೆ, ಆತಂಕ ಬೇಡ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು