7:24 PM Friday23 - January 2026
ಬ್ರೇಕಿಂಗ್ ನ್ಯೂಸ್
ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು

ಇತ್ತೀಚಿನ ಸುದ್ದಿ

ವಿದ್ಯಾರ್ಥಿಗಳ ಕೊರತೆ: ಮಂಗಳೂರು ವಿವಿಯಲ್ಲಿ 4 ಪಿಜಿ ಕೋರ್ಸ್ ತಾತ್ಕಾಲಿಕ ಸ್ಥಗಿತ

05/11/2025, 21:07

ಮಂಗಳೂರು(reporterkarnataka.com): ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯಲ್ಲಿ ಈ ಬಾರಿ ನಾಲ್ಕು ಪಿಜಿ ವಿಭಾಗಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕುಲಪತಿ ಪ್ರೊ. ಪಿ.ಎಲ್. ಧರ್ಮ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಸಂಖ್ಯಾಶಾಸ್ತ್ರ, ಎಚ್‌ಆರ್‌ಡಿ, ಎಂಸಿಜೆ (ಪತ್ರಿಕೋದ್ಯಮ),ಎಲೆಕ್ಟ್ರಾನಿಕ್ಸ್ ವಿಭಾಗಗಳಿಗೆ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದ್ದರಿಂದ ಈ ವರ್ಷಕ್ಕೆ ಮಾತ್ರ ಅನ್ವಯಿಸುವಂತೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದರು.
ಎಂಸಿಜೆ ವಿಭಾಗಕ್ಕೆ ಕೇವಲ ಒಬ್ಬ ವಿದ್ಯಾರ್ಥಿ ಅರ್ಜಿ ಸಲ್ಲಿಸಿದ್ದರು. ವಿಭಾಗವನ್ನು ನಡೆಸಲು ಕನಿಷ್ಠ ೧೦-೧೫ ವಿದ್ಯಾರ್ಥಿಗಳಾದರೂ ಬೇಕು. ಈ ಕುರಿತು ವಿದ್ಯಾರ್ಥಿಗೆ ಆಡಳಿತಾತ್ಮಕ ಸಮಜಾಯಿಷಿಕೆ ನೀಡಲಾಗಿದೆ ಎಂದು ತಿಳಿಸಿದರು.
ವಿವಿಗೆ ಪಂಚಾಯ್ತಿಯಿಂದ ಕಂದಾಯ ವಿಧಿಸುವ ವಿಚಾರದ ಕುರಿತು ಪ್ರತಿಕ್ರಿಯಿಸಿ, ವಾಣಿಜ್ಯ ಉದ್ದೇಶಗಳಿಗೆ ಬಳಕೆ ಮಾಡಲಾಗುವ ಕಟ್ಟಡಗಳಿಗೆ ಮಾತ್ರ ಕಂದಾಯ ವಿಧಿಸಬಹುದೇ ಹೊರತು ಸೇವಾ ವಿಭಾಗಗಳಿಗೆ ವಿಧಿಸಬಾರದು. ಈ ಕುರಿತು ಸ್ಪೀಕರ್ ಅವರ ಬಳಿ ಮಾತುಕತೆ ನಡೆಸಲಾಗಿದೆ. ಸರಿಯಾಗಿ ಕಂದಾಯ ಲೆಕ್ಕಾಚಾರ ನಡೆದ ಬಳಿಕ ಮುಂದಿನ ಹಂತದಲ್ಲಿ ಅದನ್ನು ಕಟ್ಟಲು ಕ್ರಮ ಕೈಗೊಳ್ಳಲಾಗುವುದು ಎಂದು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು