11:53 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ವಿದ್ಯಾರ್ಥಿಗಳ ಕೊರತೆ: ಮಂಗಳೂರು ವಿವಿಯಲ್ಲಿ 4 ಪಿಜಿ ಕೋರ್ಸ್ ತಾತ್ಕಾಲಿಕ ಸ್ಥಗಿತ

05/11/2025, 21:07

ಮಂಗಳೂರು(reporterkarnataka.com): ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯಲ್ಲಿ ಈ ಬಾರಿ ನಾಲ್ಕು ಪಿಜಿ ವಿಭಾಗಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕುಲಪತಿ ಪ್ರೊ. ಪಿ.ಎಲ್. ಧರ್ಮ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಸಂಖ್ಯಾಶಾಸ್ತ್ರ, ಎಚ್‌ಆರ್‌ಡಿ, ಎಂಸಿಜೆ (ಪತ್ರಿಕೋದ್ಯಮ),ಎಲೆಕ್ಟ್ರಾನಿಕ್ಸ್ ವಿಭಾಗಗಳಿಗೆ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದ್ದರಿಂದ ಈ ವರ್ಷಕ್ಕೆ ಮಾತ್ರ ಅನ್ವಯಿಸುವಂತೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದರು.
ಎಂಸಿಜೆ ವಿಭಾಗಕ್ಕೆ ಕೇವಲ ಒಬ್ಬ ವಿದ್ಯಾರ್ಥಿ ಅರ್ಜಿ ಸಲ್ಲಿಸಿದ್ದರು. ವಿಭಾಗವನ್ನು ನಡೆಸಲು ಕನಿಷ್ಠ ೧೦-೧೫ ವಿದ್ಯಾರ್ಥಿಗಳಾದರೂ ಬೇಕು. ಈ ಕುರಿತು ವಿದ್ಯಾರ್ಥಿಗೆ ಆಡಳಿತಾತ್ಮಕ ಸಮಜಾಯಿಷಿಕೆ ನೀಡಲಾಗಿದೆ ಎಂದು ತಿಳಿಸಿದರು.
ವಿವಿಗೆ ಪಂಚಾಯ್ತಿಯಿಂದ ಕಂದಾಯ ವಿಧಿಸುವ ವಿಚಾರದ ಕುರಿತು ಪ್ರತಿಕ್ರಿಯಿಸಿ, ವಾಣಿಜ್ಯ ಉದ್ದೇಶಗಳಿಗೆ ಬಳಕೆ ಮಾಡಲಾಗುವ ಕಟ್ಟಡಗಳಿಗೆ ಮಾತ್ರ ಕಂದಾಯ ವಿಧಿಸಬಹುದೇ ಹೊರತು ಸೇವಾ ವಿಭಾಗಗಳಿಗೆ ವಿಧಿಸಬಾರದು. ಈ ಕುರಿತು ಸ್ಪೀಕರ್ ಅವರ ಬಳಿ ಮಾತುಕತೆ ನಡೆಸಲಾಗಿದೆ. ಸರಿಯಾಗಿ ಕಂದಾಯ ಲೆಕ್ಕಾಚಾರ ನಡೆದ ಬಳಿಕ ಮುಂದಿನ ಹಂತದಲ್ಲಿ ಅದನ್ನು ಕಟ್ಟಲು ಕ್ರಮ ಕೈಗೊಳ್ಳಲಾಗುವುದು ಎಂದು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು