3:30 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ವಿದ್ಯಾರ್ಥಿಗಳ ಕೊರತೆ: ಮಂಗಳೂರು ವಿವಿಯಲ್ಲಿ 4 ಪಿಜಿ ಕೋರ್ಸ್ ತಾತ್ಕಾಲಿಕ ಸ್ಥಗಿತ

05/11/2025, 21:07

ಮಂಗಳೂರು(reporterkarnataka.com): ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯಲ್ಲಿ ಈ ಬಾರಿ ನಾಲ್ಕು ಪಿಜಿ ವಿಭಾಗಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕುಲಪತಿ ಪ್ರೊ. ಪಿ.ಎಲ್. ಧರ್ಮ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಸಂಖ್ಯಾಶಾಸ್ತ್ರ, ಎಚ್‌ಆರ್‌ಡಿ, ಎಂಸಿಜೆ (ಪತ್ರಿಕೋದ್ಯಮ),ಎಲೆಕ್ಟ್ರಾನಿಕ್ಸ್ ವಿಭಾಗಗಳಿಗೆ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದ್ದರಿಂದ ಈ ವರ್ಷಕ್ಕೆ ಮಾತ್ರ ಅನ್ವಯಿಸುವಂತೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದರು.
ಎಂಸಿಜೆ ವಿಭಾಗಕ್ಕೆ ಕೇವಲ ಒಬ್ಬ ವಿದ್ಯಾರ್ಥಿ ಅರ್ಜಿ ಸಲ್ಲಿಸಿದ್ದರು. ವಿಭಾಗವನ್ನು ನಡೆಸಲು ಕನಿಷ್ಠ ೧೦-೧೫ ವಿದ್ಯಾರ್ಥಿಗಳಾದರೂ ಬೇಕು. ಈ ಕುರಿತು ವಿದ್ಯಾರ್ಥಿಗೆ ಆಡಳಿತಾತ್ಮಕ ಸಮಜಾಯಿಷಿಕೆ ನೀಡಲಾಗಿದೆ ಎಂದು ತಿಳಿಸಿದರು.
ವಿವಿಗೆ ಪಂಚಾಯ್ತಿಯಿಂದ ಕಂದಾಯ ವಿಧಿಸುವ ವಿಚಾರದ ಕುರಿತು ಪ್ರತಿಕ್ರಿಯಿಸಿ, ವಾಣಿಜ್ಯ ಉದ್ದೇಶಗಳಿಗೆ ಬಳಕೆ ಮಾಡಲಾಗುವ ಕಟ್ಟಡಗಳಿಗೆ ಮಾತ್ರ ಕಂದಾಯ ವಿಧಿಸಬಹುದೇ ಹೊರತು ಸೇವಾ ವಿಭಾಗಗಳಿಗೆ ವಿಧಿಸಬಾರದು. ಈ ಕುರಿತು ಸ್ಪೀಕರ್ ಅವರ ಬಳಿ ಮಾತುಕತೆ ನಡೆಸಲಾಗಿದೆ. ಸರಿಯಾಗಿ ಕಂದಾಯ ಲೆಕ್ಕಾಚಾರ ನಡೆದ ಬಳಿಕ ಮುಂದಿನ ಹಂತದಲ್ಲಿ ಅದನ್ನು ಕಟ್ಟಲು ಕ್ರಮ ಕೈಗೊಳ್ಳಲಾಗುವುದು ಎಂದು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು