10:01 AM Friday10 - April 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ: ಬಹುತೇಕ ಶಾಂತಿಯುತ ಮತದಾನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:…

ಇತ್ತೀಚಿನ ಸುದ್ದಿ

ಶೋಷಿತರು ಅಧಿಕಾರ ನಡೆಸುವುದು ಮನುವಾದಿಗಳಿಗೆ ಸಹಿಸಲು ಆಗುತ್ತಿಲ್ಲ: ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

09/08/2024, 21:03

ಮೈಸೂರು(reporterkarnataka.com): ಶೋಷಿತ ವರ್ಗಕ್ಕೆ ಸೇರಿದ ತಾನು ಅಧಿಕಾರ ನಡೆಸುವುದು ಮನುವಾದಿ ಹಾಗೂ ಜಾತಿವಾದಿಗಳಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ದೇವರಾಜ ಅರಸು, ಬಂಗಾರಪ್ಪ ಅವರನ್ನೂ ಇವರು ಸಹಿಸಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.


ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಜನಾಂದೋಲನ ಸಮಾವೇಶದಲ್ಲಿ ಅವರು ಮಾತನಾಡಿದರು.
ರಾಜ್ಯದ ಜನರ ಆಶೀರ್ವಾದ ಬಲದಿಂದ ನಾನು ಎರಡು ಬಾರಿ ಉಪ ಮುಖ್ಯಮಂತ್ರಿಯಾಗಿದ್ದೀನಿ.ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನನಗೆ ಇಷ್ಟೆಲ್ಲಾ ಅಧಿಕಾರ ಸಿಕ್ಕಾಗಲೂ, ಹಣ ಮಾಡುವ ಆಸೆ ಬಂದಿಲ್ಲ. ನನ್ನ ಪತ್ನಿ ಇವತ್ತಿನವರೆಗೂ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಎರಡು ಬಾರಿ ಸಿಎಂ ಆದರೂ, ಪ್ರಮಾಣ ವಚನಕ್ಕೂ ನನ್ನ ಪತ್ನಿ ಬಂದಿಲ್ಲ.
ನಾವು ಭ್ರಷ್ಟಾಚಾರ ಮಾಡಲು, ನಿಮ್ಮ ನಂಬಿಕೆಗೆ ದ್ರೋಹವೆಸಗಲು ಸಾಧ್ಯವಿಲ್ಲ. ನಾನು ರಾಜಕೀಯದಲ್ಲಿ ಇರುವವರೆಗೂ ಯಾವತ್ತೂ ನಿಮ್ಮ ನಂಬಿಕೆಗೆ ದ್ರೋಹ ಬಗೆಯೋದಿಲ್ಲ ಎಂದರು.
ಮಾಜಿ ಪ್ರಧಾನಿ, ಜೆಡಿಎಸ್‌ನ ದೇವೇಗೌಡರು ಮತ್ತು ಕುಮಾರಸ್ವಾಮಿ ಯಾವತ್ತೂ ಕೊಟ್ಟ ಮಾತಿನಂತೆ ನಡೆದುಕೊಂಡವರಲ್ಲ. ಧರ್ಮ ಸಿಂಗ್ ಜೊತೆ ಸರ್ಕಾರ ರಚಿಸಿ ಕೊಟ್ಟ ಮಾತು ಉಳಿಸಿಕೊಂಡಿಲ್ಲ. ಕುಮಾರಸ್ವಾಮಿ ಬಿಜೆಪಿ ಜೊತೆ ಸೇರಿ ಅಧಿಕಾರ ನಡೆಸಿದರೆ ನನ್ನ ಶವದ ಮೇಲೆ ನಡೆಸಬೇಕು ಎಂದು ದೇವೇಗೌಡರು ಹೇಳಿದ್ದರು. ಮೋದಿ ಮತ್ತೆ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ ಎಂದಿದ್ದರು. ಈಗ ಬಿಜೆಪಿ ಜೊತೆ ಶಾಮೀಲಾಗಿದ್ದಾರೆ ಎಂದರು.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ವಯಸ್ಸಲ್ಲಿ ಲೈಂಗಿಕ ದೌರ್ಜನ್ಯ ನಡೆಸಿ ಪೋಕ್ಸೋ ಕೇಸಲ್ಲಿ ಇದ್ದಾರೆ. ನಾಚಿಕೆ ಆಗಲ್ವಾ? ಬಿಜೆಪಿ, ಜೆಡಿಎಸ್ ಅಧಿಕಾರಿದಲ್ಲಿ ಇದ್ದಾಗ ನಡೆಸಿದ್ದು ಒಂದಾ, ಎರಡಾ ಹಗರಣಗಳು. ಸುಪ್ರೀಕೋರ್ಟ್‌ನಲ್ಲಿ ತಮ್ಮ ಹಗರಣಗಳಿಗೆ ತಡೆಯಾಜ್ಞೆ ತಂದಿದ್ದಾರೆ. ಇವರು ನನ್ನ ರಾಜೀನಾಮೆ ಕೇಳುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ಯಡಿಯೂರಪ್ಪ ಅವರು ಚೆಕ್‌ನಲ್ಲಿ ಲಂಚ ಪಡೆದು ಜೈಲಿಗೆ ಹೋದರು. ಆರ್.ಅಶೋಕ್, ವಿಜಯೇಂದ್ರ ಇವರೆಲ್ಲರೂ ಜೈಲಿಗೆ ಹೋಗಬೇಕಾದವರು. ಇವರಿಗೆ ನನ್ನ ಬಗ್ಗೆ ಮಾತನಾಡುವ ಯಾವ ಯೋಗ್ಯತೆ ಇದೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು