6:15 PM Sunday6 - October 2024
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಸಹೋದರ ದಿಢೀರ್ ನಾಪತ್ತೆ; ಕೂಳೂರು ಸೇತುವೆಯಲ್ಲಿ ಕಾರು ಪತ್ತೆ; ಆತ್ಮಹತ್ಯೆ… ಮಂಗಳೂರು-ಪೊಳಲಿಗೆ ಬೆಂಜನಪದವು- ಕಲ್ಪನೆ ಮಾರ್ಗವಾಗಿ ಕೆಎಸ್‌ಆರ್‌ಟಿಸಿ ಬಸ್ ಆರಂಭ ಕೋಲಾರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಕ್ಟೋಬರ್ 7 ರಿಂದ ಇ-ಖಾತಾ ಲಭ್ಯ ಬೆಂಗಳೂರು: ಹೃದಯವಾಹಿನಿ ರಜತ ಮಹೋತ್ಸವ, ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನ ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಕೊಟ್ಟಿಗೆಹಾರ ಭೇಟಿ: ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ… ಕೊಟ್ಟಿಗೆಹಾರ: ಗಾಂಧಿ ಜಯಂತಿಯಂದು ಮಾಂಸ ಮಾರಾಟ; ನಿಯಮ ಉಲ್ಲಂಘಿಸಿದ ಮಾರಾಟಗಾರರು ಗಾಂಧೀಜಿ ಚಿಂತನೆಗಳು ಎಲ್ಲಾ ಪತ್ರಕರ್ತರಿಗೆ ಎಂದೆಂದಿಗೂ ಮಾರ್ಗದರ್ಶಿ: ಮಂಗಳೂರು ಬಿಷಪ್ ಡಾ. ಪೀಟರ್… ಸಾಲ ಕೇಳ್ತಾ ಇಲ್ಲ, ಕೆಲಸ ಮಾಡಿದ್ದಕ್ಕೆ ನ್ಯಾಯ ಕೊಡಿ: ಪ್ರತಿಭಟನಾ ಸಭೆಯಲ್ಲಿ ರಾಜ್ಯ… ಈಚರ್ ಲಾರಿ – ಬೈಕ್ ಮಧ್ಯೆ ಭೀಕರ ಅಪಘಾತ: ಮೂವರು ಮಕ್ಕಳು ಸಹಿತ… ಬೈಕ್ ಗೆ ಗುದ್ದಿದ ಕಾಡುಕೋಣ: ರಸ್ತೆಗೆ ಬಿದ್ದು ಸವಾರನಿಗೆ ಗಾಯ

ಇತ್ತೀಚಿನ ಸುದ್ದಿ

ಶ್ರೀ ಆದಿನಾಥ ತೀರ್ಥಂಕರರ ಬಾಳ್ತಿಲ ಬಸದಿಯಲ್ಲಿ ಮೃತ್ಯುಂಜಯ ಆರಾಧನೆ

30/09/2024, 21:03

ಬಂಟ್ವಾಳ(reporterkarnataka.com): ಕಲ್ಲಡ್ಕ ಸಮೀಪದ ಶ್ರೀ ಆದಿನಾಥ ತೀರ್ಥಂಕರ ಬಸದಿ ಬಾಳ್ತಿಲದಲ್ಲಿ ಶ್ರೀ ಜ್ಞಾನೇಶ್ವರ ಮುನಿಮಹಾರಾಜ್ ಅವರ ಶಿಷ್ಯೆ ಕ್ಷುಲ್ಲಿಕಾ‌ ವಿಶುದ್ಧ ಮತಿ ಮಾತಾಜಿಯವರು ಭವ್ಯ ಮಂಗಳ ವರ್ಷಾ ಯೋಗದ ನಿಮಿತ್ತ ಮೊಕ್ಕಾಂ ಹೂಡಿದ್ದು ಪ್ರತಿದಿನ ಶ್ರೀ ಆದಿನಾಥ ಸ್ವಾಮಿಗೆ ವಿಶೇಷ‌ ಅಲಂಕಾರ ಪೂಜೆ ಹಾಗೂ ವಿಶೇಷ ಸೇವೆ ನಡೆಯುತ್ತಿದೆ.

ಭಾನುವಾರ ಮೃತ್ಯುಂಜಯ ಆರಾಧನೆ ಮತ್ತು ನವಗ್ರಹ ಶಾಂತಿ ನಡೆಯಿತು.
ಉದಯ ಕುಮಾರ್ ಜೈನ್ ಕುಟುಂಬಸ್ಥರು ಪೂಜೆ ಸೇವೆ ನಡೆಸಿದರು. ಅಖಿಲ ವಿಜಯಕುಮಾರ್ ಬೆಳ್ತಂಗಡಿ ಮನೆಯವರು ಆಹಾರ ದಾನ ಸೇವೆ ನಡೆಸಿಕೊಟ್ಟರು.
ಪ್ರಮುಖರಾದ ಉದ್ಯಮಿ ಪದ್ಮಪ್ರಸಾದ್ ಜೈನ್ ಬುಡೋಳಿ, ಮಹಾವೀರ ಪ್ರಸಾದ್ ಜೈನ್ ಪೆರಾಜೆ, ಆದಿರಾಜ ಜೈನ್ ಕೇದಿಗೆ, ಅಮಿತ್ ಕುಮಾರ್ ಜೈನ್,ಅನಿಲ್ ಕುಮಾರ್ ಜೈನ್, ಪಾಪೆತ್ತಿಮಾರು,ಉದಯ ಕುಮಾರ್ ಮದ್ವ, ನ್ಯಾಯವಾದಿ ಶಿವ ಪ್ರಕಾಶ್ , ಬೃಜೇಶ್ ಜೈನ್ ಬಾಳ್ತಿಲ ಬೂಡು ಮೊದಲಾದವರು ಧಾರ್ಮಿಕ ಕಾರ್ಯಕ್ರಮದಲ್ಲಿ‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು