9:16 PM Monday22 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಶ್ರೀ ಮಂಗಳಾದೇವಿ ಸೇವಾ ಸಮಿತಿಯ ವತಿಯಿಂದ ಶ್ರೀ ಮಂಗಳಾಂಬೆಗೆ ರಜತ ಹಸ್ತ ಸಮರ್ಪಣೆ

03/10/2024, 22:23

ಮಂಗಳೂರು(reporterkarnataka.com):ನಗರದ ಶ್ರೀ ಮಂಗಳಾದೇವಿ ದೇವಸ್ಥಾನದ ಸೇವೆಯನ್ನೇ ಮೂಲ ಧ್ಯೆಯವನ್ನಾಗಿಸಿಕೊಂಡು ಸ್ಥಾಪನೆಯಾದಂತಹ ಶ್ರೀ ಮಂಗಳಾದೇವಿ ಸೇವಾ ಸಮಿತಿಯ ವತಿಯಿಂದ ನವರಾತ್ರಿಯ ಆರಂಭದ ದಿನವಾದ ಇಂದು ಕ್ಷೇತ್ರದ ತಂತ್ರಿಗಳಾದ ನೀಲೇಶ್ವರ ಶ್ರೀ ಪದ್ಮನಾಭ ತಂತ್ರಿಯವರ ಸಮ್ಮುಖದಲ್ಲಿ ರಜತ ಹಸ್ತಗಳನ್ನು ಸಮರ್ಪಿಸಲಾಯಿತು. ಶ್ರೀಮಂಗಳಾದೇವಿ ದೇವಸ್ಥಾನದ ಎಲ್ಲಾ ಕಾರ್ಯಕ್ರಮಗಳಲ್ಲಿಯೂ ತನ್ನನ್ನು ತಾನು ತೊಡಗಿಸಿಕೊಂಡಿರುವಂತಹ ಶ್ರೀಮಂಗಳಾದೇವಿ ಸೇವಾ ಸಮಿತಿಯು ಕ್ಷೇತ್ರದಲ್ಲಿ ನಡೆಯುವ ನವರಾತ್ರಿ ಮಹೋತ್ಸವ ಜಾತ್ರಾ ಮಹೋತ್ಸವ ಸೇರಿದಂತೆ ಎಲ್ಲಾ ಅನ್ನ-ಸಂತರ್ಪಣೆಯ ದಿವಸಗಳಂದು ಮಾತ್ರವಲ್ಲದೆ ದೇವಸ್ಥಾನದ ಎಲ್ಲಾ ಕಾರ್ಯಕ್ರಮಗಳಲ್ಲಿ ಆತ್ಮೀಯವಾಗಿ ತೊಡಗಿಸಿಕೊಂಡಿರುತ್ತದೆ, ಮಾತ್ರವಲ್ಲದೆ ಸಂದರ್ಭನುಸಾರವಾಗಿ ಶ್ರೀ ಕ್ಷೇತ್ರದ ಅನುಕೂಲಕ್ಕೆ ಅನುಗುಣವಾಗಿ ಸದಾಕಾಲ ತಮ್ಮಿಂದ ಆಗುವ ಸೇವೆಯಲ್ಲಿ ಪಾಲ್ಗೊಂಡಿರುತ್ತದೆ.
ಸಮಿತಿಯ ಅಧ್ಯಕ್ಷರಾದ ದಿಲ್ ರಾಜ್ ಆಳ್ವ ಮಾತನಾಡಿ ನಮ್ಮ ಸಮಿತಿಯು ಅನೇಕ ವರ್ಷಗಳಿಂದ ತಾಯಿಯ ಸೇವೆಯಲ್ಲಿ ಪಾಲ್ಗೊಂಡಿದೆ. ಈ ವರ್ಷ ವಿಷೇಷವಾಗಿ ರಜತ ಹಸ್ತ ಸಮರ್ಪಣೆ ಮಾತ್ರವಲ್ಲದೆ ವಿಜಯ ದಶಮಿಯಂದು ಸಮಿತಿಯ ವತಿಯಿಂದ ಸಾರ್ವಜನಿಕ ಅನ್ನ ಸಂತರ್ಪಣೆ ನೆರವೇರಲಿದೆ ಎಂದು ತಿಳಿಸಿದರು.
ಹಿರಿಯ ಸದಸ್ಯರಾದ ಎ. ಸೀತಾರಾಮ, ಬಿ. ಅಶೋಕ್ ಕುಮಾರ್, ಕೇಶವ , ತುಕಾರಾಮ್, ಪ್ರಧಾನ ಕಾರ್ಯದರ್ಶಿ ತಿಲಕ್ ರಾಜ್ ಕೋಶಾಧಿಕಾರಿ ವಿಶ್ವನಾಥ್, ದೇವಸ್ತಾನದ ಆಡಳಿತ ಮಂಡಳಿ ಸದಸ್ಯರು, ಅರ್ಚಕ ವೃಂದ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು