7:00 PM Monday1 - June 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..!

ಇತ್ತೀಚಿನ ಸುದ್ದಿ

ಶ್ರೀ ಮಂಗಳಾದೇವಿ ಸೇವಾ ಸಮಿತಿಯ ವತಿಯಿಂದ ಶ್ರೀ ಮಂಗಳಾಂಬೆಗೆ ರಜತ ಹಸ್ತ ಸಮರ್ಪಣೆ

03/10/2024, 22:23

ಮಂಗಳೂರು(reporterkarnataka.com):ನಗರದ ಶ್ರೀ ಮಂಗಳಾದೇವಿ ದೇವಸ್ಥಾನದ ಸೇವೆಯನ್ನೇ ಮೂಲ ಧ್ಯೆಯವನ್ನಾಗಿಸಿಕೊಂಡು ಸ್ಥಾಪನೆಯಾದಂತಹ ಶ್ರೀ ಮಂಗಳಾದೇವಿ ಸೇವಾ ಸಮಿತಿಯ ವತಿಯಿಂದ ನವರಾತ್ರಿಯ ಆರಂಭದ ದಿನವಾದ ಇಂದು ಕ್ಷೇತ್ರದ ತಂತ್ರಿಗಳಾದ ನೀಲೇಶ್ವರ ಶ್ರೀ ಪದ್ಮನಾಭ ತಂತ್ರಿಯವರ ಸಮ್ಮುಖದಲ್ಲಿ ರಜತ ಹಸ್ತಗಳನ್ನು ಸಮರ್ಪಿಸಲಾಯಿತು. ಶ್ರೀಮಂಗಳಾದೇವಿ ದೇವಸ್ಥಾನದ ಎಲ್ಲಾ ಕಾರ್ಯಕ್ರಮಗಳಲ್ಲಿಯೂ ತನ್ನನ್ನು ತಾನು ತೊಡಗಿಸಿಕೊಂಡಿರುವಂತಹ ಶ್ರೀಮಂಗಳಾದೇವಿ ಸೇವಾ ಸಮಿತಿಯು ಕ್ಷೇತ್ರದಲ್ಲಿ ನಡೆಯುವ ನವರಾತ್ರಿ ಮಹೋತ್ಸವ ಜಾತ್ರಾ ಮಹೋತ್ಸವ ಸೇರಿದಂತೆ ಎಲ್ಲಾ ಅನ್ನ-ಸಂತರ್ಪಣೆಯ ದಿವಸಗಳಂದು ಮಾತ್ರವಲ್ಲದೆ ದೇವಸ್ಥಾನದ ಎಲ್ಲಾ ಕಾರ್ಯಕ್ರಮಗಳಲ್ಲಿ ಆತ್ಮೀಯವಾಗಿ ತೊಡಗಿಸಿಕೊಂಡಿರುತ್ತದೆ, ಮಾತ್ರವಲ್ಲದೆ ಸಂದರ್ಭನುಸಾರವಾಗಿ ಶ್ರೀ ಕ್ಷೇತ್ರದ ಅನುಕೂಲಕ್ಕೆ ಅನುಗುಣವಾಗಿ ಸದಾಕಾಲ ತಮ್ಮಿಂದ ಆಗುವ ಸೇವೆಯಲ್ಲಿ ಪಾಲ್ಗೊಂಡಿರುತ್ತದೆ.
ಸಮಿತಿಯ ಅಧ್ಯಕ್ಷರಾದ ದಿಲ್ ರಾಜ್ ಆಳ್ವ ಮಾತನಾಡಿ ನಮ್ಮ ಸಮಿತಿಯು ಅನೇಕ ವರ್ಷಗಳಿಂದ ತಾಯಿಯ ಸೇವೆಯಲ್ಲಿ ಪಾಲ್ಗೊಂಡಿದೆ. ಈ ವರ್ಷ ವಿಷೇಷವಾಗಿ ರಜತ ಹಸ್ತ ಸಮರ್ಪಣೆ ಮಾತ್ರವಲ್ಲದೆ ವಿಜಯ ದಶಮಿಯಂದು ಸಮಿತಿಯ ವತಿಯಿಂದ ಸಾರ್ವಜನಿಕ ಅನ್ನ ಸಂತರ್ಪಣೆ ನೆರವೇರಲಿದೆ ಎಂದು ತಿಳಿಸಿದರು.
ಹಿರಿಯ ಸದಸ್ಯರಾದ ಎ. ಸೀತಾರಾಮ, ಬಿ. ಅಶೋಕ್ ಕುಮಾರ್, ಕೇಶವ , ತುಕಾರಾಮ್, ಪ್ರಧಾನ ಕಾರ್ಯದರ್ಶಿ ತಿಲಕ್ ರಾಜ್ ಕೋಶಾಧಿಕಾರಿ ವಿಶ್ವನಾಥ್, ದೇವಸ್ತಾನದ ಆಡಳಿತ ಮಂಡಳಿ ಸದಸ್ಯರು, ಅರ್ಚಕ ವೃಂದ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು