7:27 AM Tuesday25 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ಶ್ರೀ ಮಂಗಳಾದೇವಿ ಸೇವಾ ಸಮಿತಿಯ ವತಿಯಿಂದ ಶ್ರೀ ಮಂಗಳಾಂಬೆಗೆ ರಜತ ಹಸ್ತ ಸಮರ್ಪಣೆ

03/10/2024, 22:23

ಮಂಗಳೂರು(reporterkarnataka.com):ನಗರದ ಶ್ರೀ ಮಂಗಳಾದೇವಿ ದೇವಸ್ಥಾನದ ಸೇವೆಯನ್ನೇ ಮೂಲ ಧ್ಯೆಯವನ್ನಾಗಿಸಿಕೊಂಡು ಸ್ಥಾಪನೆಯಾದಂತಹ ಶ್ರೀ ಮಂಗಳಾದೇವಿ ಸೇವಾ ಸಮಿತಿಯ ವತಿಯಿಂದ ನವರಾತ್ರಿಯ ಆರಂಭದ ದಿನವಾದ ಇಂದು ಕ್ಷೇತ್ರದ ತಂತ್ರಿಗಳಾದ ನೀಲೇಶ್ವರ ಶ್ರೀ ಪದ್ಮನಾಭ ತಂತ್ರಿಯವರ ಸಮ್ಮುಖದಲ್ಲಿ ರಜತ ಹಸ್ತಗಳನ್ನು ಸಮರ್ಪಿಸಲಾಯಿತು. ಶ್ರೀಮಂಗಳಾದೇವಿ ದೇವಸ್ಥಾನದ ಎಲ್ಲಾ ಕಾರ್ಯಕ್ರಮಗಳಲ್ಲಿಯೂ ತನ್ನನ್ನು ತಾನು ತೊಡಗಿಸಿಕೊಂಡಿರುವಂತಹ ಶ್ರೀಮಂಗಳಾದೇವಿ ಸೇವಾ ಸಮಿತಿಯು ಕ್ಷೇತ್ರದಲ್ಲಿ ನಡೆಯುವ ನವರಾತ್ರಿ ಮಹೋತ್ಸವ ಜಾತ್ರಾ ಮಹೋತ್ಸವ ಸೇರಿದಂತೆ ಎಲ್ಲಾ ಅನ್ನ-ಸಂತರ್ಪಣೆಯ ದಿವಸಗಳಂದು ಮಾತ್ರವಲ್ಲದೆ ದೇವಸ್ಥಾನದ ಎಲ್ಲಾ ಕಾರ್ಯಕ್ರಮಗಳಲ್ಲಿ ಆತ್ಮೀಯವಾಗಿ ತೊಡಗಿಸಿಕೊಂಡಿರುತ್ತದೆ, ಮಾತ್ರವಲ್ಲದೆ ಸಂದರ್ಭನುಸಾರವಾಗಿ ಶ್ರೀ ಕ್ಷೇತ್ರದ ಅನುಕೂಲಕ್ಕೆ ಅನುಗುಣವಾಗಿ ಸದಾಕಾಲ ತಮ್ಮಿಂದ ಆಗುವ ಸೇವೆಯಲ್ಲಿ ಪಾಲ್ಗೊಂಡಿರುತ್ತದೆ.
ಸಮಿತಿಯ ಅಧ್ಯಕ್ಷರಾದ ದಿಲ್ ರಾಜ್ ಆಳ್ವ ಮಾತನಾಡಿ ನಮ್ಮ ಸಮಿತಿಯು ಅನೇಕ ವರ್ಷಗಳಿಂದ ತಾಯಿಯ ಸೇವೆಯಲ್ಲಿ ಪಾಲ್ಗೊಂಡಿದೆ. ಈ ವರ್ಷ ವಿಷೇಷವಾಗಿ ರಜತ ಹಸ್ತ ಸಮರ್ಪಣೆ ಮಾತ್ರವಲ್ಲದೆ ವಿಜಯ ದಶಮಿಯಂದು ಸಮಿತಿಯ ವತಿಯಿಂದ ಸಾರ್ವಜನಿಕ ಅನ್ನ ಸಂತರ್ಪಣೆ ನೆರವೇರಲಿದೆ ಎಂದು ತಿಳಿಸಿದರು.
ಹಿರಿಯ ಸದಸ್ಯರಾದ ಎ. ಸೀತಾರಾಮ, ಬಿ. ಅಶೋಕ್ ಕುಮಾರ್, ಕೇಶವ , ತುಕಾರಾಮ್, ಪ್ರಧಾನ ಕಾರ್ಯದರ್ಶಿ ತಿಲಕ್ ರಾಜ್ ಕೋಶಾಧಿಕಾರಿ ವಿಶ್ವನಾಥ್, ದೇವಸ್ತಾನದ ಆಡಳಿತ ಮಂಡಳಿ ಸದಸ್ಯರು, ಅರ್ಚಕ ವೃಂದ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು