7:21 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಶ್ರೀ ಮಂಗಳಾದೇವಿ ಸೇವಾ ಸಮಿತಿಯ ವತಿಯಿಂದ ಶ್ರೀ ಮಂಗಳಾಂಬೆಗೆ ರಜತ ಹಸ್ತ ಸಮರ್ಪಣೆ

03/10/2024, 22:23

ಮಂಗಳೂರು(reporterkarnataka.com):ನಗರದ ಶ್ರೀ ಮಂಗಳಾದೇವಿ ದೇವಸ್ಥಾನದ ಸೇವೆಯನ್ನೇ ಮೂಲ ಧ್ಯೆಯವನ್ನಾಗಿಸಿಕೊಂಡು ಸ್ಥಾಪನೆಯಾದಂತಹ ಶ್ರೀ ಮಂಗಳಾದೇವಿ ಸೇವಾ ಸಮಿತಿಯ ವತಿಯಿಂದ ನವರಾತ್ರಿಯ ಆರಂಭದ ದಿನವಾದ ಇಂದು ಕ್ಷೇತ್ರದ ತಂತ್ರಿಗಳಾದ ನೀಲೇಶ್ವರ ಶ್ರೀ ಪದ್ಮನಾಭ ತಂತ್ರಿಯವರ ಸಮ್ಮುಖದಲ್ಲಿ ರಜತ ಹಸ್ತಗಳನ್ನು ಸಮರ್ಪಿಸಲಾಯಿತು. ಶ್ರೀಮಂಗಳಾದೇವಿ ದೇವಸ್ಥಾನದ ಎಲ್ಲಾ ಕಾರ್ಯಕ್ರಮಗಳಲ್ಲಿಯೂ ತನ್ನನ್ನು ತಾನು ತೊಡಗಿಸಿಕೊಂಡಿರುವಂತಹ ಶ್ರೀಮಂಗಳಾದೇವಿ ಸೇವಾ ಸಮಿತಿಯು ಕ್ಷೇತ್ರದಲ್ಲಿ ನಡೆಯುವ ನವರಾತ್ರಿ ಮಹೋತ್ಸವ ಜಾತ್ರಾ ಮಹೋತ್ಸವ ಸೇರಿದಂತೆ ಎಲ್ಲಾ ಅನ್ನ-ಸಂತರ್ಪಣೆಯ ದಿವಸಗಳಂದು ಮಾತ್ರವಲ್ಲದೆ ದೇವಸ್ಥಾನದ ಎಲ್ಲಾ ಕಾರ್ಯಕ್ರಮಗಳಲ್ಲಿ ಆತ್ಮೀಯವಾಗಿ ತೊಡಗಿಸಿಕೊಂಡಿರುತ್ತದೆ, ಮಾತ್ರವಲ್ಲದೆ ಸಂದರ್ಭನುಸಾರವಾಗಿ ಶ್ರೀ ಕ್ಷೇತ್ರದ ಅನುಕೂಲಕ್ಕೆ ಅನುಗುಣವಾಗಿ ಸದಾಕಾಲ ತಮ್ಮಿಂದ ಆಗುವ ಸೇವೆಯಲ್ಲಿ ಪಾಲ್ಗೊಂಡಿರುತ್ತದೆ.
ಸಮಿತಿಯ ಅಧ್ಯಕ್ಷರಾದ ದಿಲ್ ರಾಜ್ ಆಳ್ವ ಮಾತನಾಡಿ ನಮ್ಮ ಸಮಿತಿಯು ಅನೇಕ ವರ್ಷಗಳಿಂದ ತಾಯಿಯ ಸೇವೆಯಲ್ಲಿ ಪಾಲ್ಗೊಂಡಿದೆ. ಈ ವರ್ಷ ವಿಷೇಷವಾಗಿ ರಜತ ಹಸ್ತ ಸಮರ್ಪಣೆ ಮಾತ್ರವಲ್ಲದೆ ವಿಜಯ ದಶಮಿಯಂದು ಸಮಿತಿಯ ವತಿಯಿಂದ ಸಾರ್ವಜನಿಕ ಅನ್ನ ಸಂತರ್ಪಣೆ ನೆರವೇರಲಿದೆ ಎಂದು ತಿಳಿಸಿದರು.
ಹಿರಿಯ ಸದಸ್ಯರಾದ ಎ. ಸೀತಾರಾಮ, ಬಿ. ಅಶೋಕ್ ಕುಮಾರ್, ಕೇಶವ , ತುಕಾರಾಮ್, ಪ್ರಧಾನ ಕಾರ್ಯದರ್ಶಿ ತಿಲಕ್ ರಾಜ್ ಕೋಶಾಧಿಕಾರಿ ವಿಶ್ವನಾಥ್, ದೇವಸ್ತಾನದ ಆಡಳಿತ ಮಂಡಳಿ ಸದಸ್ಯರು, ಅರ್ಚಕ ವೃಂದ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು