6:00 AM Tuesday28 - July 2026
ಬ್ರೇಕಿಂಗ್ ನ್ಯೂಸ್
Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ…

ಇತ್ತೀಚಿನ ಸುದ್ದಿ

ಶ್ರೀ ಮಂಗಳಾದೇವಿ ಸೇವಾ ಸಮಿತಿಯ ವತಿಯಿಂದ ಶ್ರೀ ಮಂಗಳಾಂಬೆಗೆ ರಜತ ಹಸ್ತ ಸಮರ್ಪಣೆ

03/10/2024, 22:23

ಮಂಗಳೂರು(reporterkarnataka.com):ನಗರದ ಶ್ರೀ ಮಂಗಳಾದೇವಿ ದೇವಸ್ಥಾನದ ಸೇವೆಯನ್ನೇ ಮೂಲ ಧ್ಯೆಯವನ್ನಾಗಿಸಿಕೊಂಡು ಸ್ಥಾಪನೆಯಾದಂತಹ ಶ್ರೀ ಮಂಗಳಾದೇವಿ ಸೇವಾ ಸಮಿತಿಯ ವತಿಯಿಂದ ನವರಾತ್ರಿಯ ಆರಂಭದ ದಿನವಾದ ಇಂದು ಕ್ಷೇತ್ರದ ತಂತ್ರಿಗಳಾದ ನೀಲೇಶ್ವರ ಶ್ರೀ ಪದ್ಮನಾಭ ತಂತ್ರಿಯವರ ಸಮ್ಮುಖದಲ್ಲಿ ರಜತ ಹಸ್ತಗಳನ್ನು ಸಮರ್ಪಿಸಲಾಯಿತು. ಶ್ರೀಮಂಗಳಾದೇವಿ ದೇವಸ್ಥಾನದ ಎಲ್ಲಾ ಕಾರ್ಯಕ್ರಮಗಳಲ್ಲಿಯೂ ತನ್ನನ್ನು ತಾನು ತೊಡಗಿಸಿಕೊಂಡಿರುವಂತಹ ಶ್ರೀಮಂಗಳಾದೇವಿ ಸೇವಾ ಸಮಿತಿಯು ಕ್ಷೇತ್ರದಲ್ಲಿ ನಡೆಯುವ ನವರಾತ್ರಿ ಮಹೋತ್ಸವ ಜಾತ್ರಾ ಮಹೋತ್ಸವ ಸೇರಿದಂತೆ ಎಲ್ಲಾ ಅನ್ನ-ಸಂತರ್ಪಣೆಯ ದಿವಸಗಳಂದು ಮಾತ್ರವಲ್ಲದೆ ದೇವಸ್ಥಾನದ ಎಲ್ಲಾ ಕಾರ್ಯಕ್ರಮಗಳಲ್ಲಿ ಆತ್ಮೀಯವಾಗಿ ತೊಡಗಿಸಿಕೊಂಡಿರುತ್ತದೆ, ಮಾತ್ರವಲ್ಲದೆ ಸಂದರ್ಭನುಸಾರವಾಗಿ ಶ್ರೀ ಕ್ಷೇತ್ರದ ಅನುಕೂಲಕ್ಕೆ ಅನುಗುಣವಾಗಿ ಸದಾಕಾಲ ತಮ್ಮಿಂದ ಆಗುವ ಸೇವೆಯಲ್ಲಿ ಪಾಲ್ಗೊಂಡಿರುತ್ತದೆ.
ಸಮಿತಿಯ ಅಧ್ಯಕ್ಷರಾದ ದಿಲ್ ರಾಜ್ ಆಳ್ವ ಮಾತನಾಡಿ ನಮ್ಮ ಸಮಿತಿಯು ಅನೇಕ ವರ್ಷಗಳಿಂದ ತಾಯಿಯ ಸೇವೆಯಲ್ಲಿ ಪಾಲ್ಗೊಂಡಿದೆ. ಈ ವರ್ಷ ವಿಷೇಷವಾಗಿ ರಜತ ಹಸ್ತ ಸಮರ್ಪಣೆ ಮಾತ್ರವಲ್ಲದೆ ವಿಜಯ ದಶಮಿಯಂದು ಸಮಿತಿಯ ವತಿಯಿಂದ ಸಾರ್ವಜನಿಕ ಅನ್ನ ಸಂತರ್ಪಣೆ ನೆರವೇರಲಿದೆ ಎಂದು ತಿಳಿಸಿದರು.
ಹಿರಿಯ ಸದಸ್ಯರಾದ ಎ. ಸೀತಾರಾಮ, ಬಿ. ಅಶೋಕ್ ಕುಮಾರ್, ಕೇಶವ , ತುಕಾರಾಮ್, ಪ್ರಧಾನ ಕಾರ್ಯದರ್ಶಿ ತಿಲಕ್ ರಾಜ್ ಕೋಶಾಧಿಕಾರಿ ವಿಶ್ವನಾಥ್, ದೇವಸ್ತಾನದ ಆಡಳಿತ ಮಂಡಳಿ ಸದಸ್ಯರು, ಅರ್ಚಕ ವೃಂದ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು