8:13 PM Monday8 - June 2026
ಬ್ರೇಕಿಂಗ್ ನ್ಯೂಸ್
ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:…

ಇತ್ತೀಚಿನ ಸುದ್ದಿ

ಶ್ರೀ ಮಂಗಳಾದೇವಿ ಸೇವಾ ಸಮಿತಿಯ ವತಿಯಿಂದ ಶ್ರೀ ಮಂಗಳಾಂಬೆಗೆ ರಜತ ಹಸ್ತ ಸಮರ್ಪಣೆ

03/10/2024, 22:23

ಮಂಗಳೂರು(reporterkarnataka.com):ನಗರದ ಶ್ರೀ ಮಂಗಳಾದೇವಿ ದೇವಸ್ಥಾನದ ಸೇವೆಯನ್ನೇ ಮೂಲ ಧ್ಯೆಯವನ್ನಾಗಿಸಿಕೊಂಡು ಸ್ಥಾಪನೆಯಾದಂತಹ ಶ್ರೀ ಮಂಗಳಾದೇವಿ ಸೇವಾ ಸಮಿತಿಯ ವತಿಯಿಂದ ನವರಾತ್ರಿಯ ಆರಂಭದ ದಿನವಾದ ಇಂದು ಕ್ಷೇತ್ರದ ತಂತ್ರಿಗಳಾದ ನೀಲೇಶ್ವರ ಶ್ರೀ ಪದ್ಮನಾಭ ತಂತ್ರಿಯವರ ಸಮ್ಮುಖದಲ್ಲಿ ರಜತ ಹಸ್ತಗಳನ್ನು ಸಮರ್ಪಿಸಲಾಯಿತು. ಶ್ರೀಮಂಗಳಾದೇವಿ ದೇವಸ್ಥಾನದ ಎಲ್ಲಾ ಕಾರ್ಯಕ್ರಮಗಳಲ್ಲಿಯೂ ತನ್ನನ್ನು ತಾನು ತೊಡಗಿಸಿಕೊಂಡಿರುವಂತಹ ಶ್ರೀಮಂಗಳಾದೇವಿ ಸೇವಾ ಸಮಿತಿಯು ಕ್ಷೇತ್ರದಲ್ಲಿ ನಡೆಯುವ ನವರಾತ್ರಿ ಮಹೋತ್ಸವ ಜಾತ್ರಾ ಮಹೋತ್ಸವ ಸೇರಿದಂತೆ ಎಲ್ಲಾ ಅನ್ನ-ಸಂತರ್ಪಣೆಯ ದಿವಸಗಳಂದು ಮಾತ್ರವಲ್ಲದೆ ದೇವಸ್ಥಾನದ ಎಲ್ಲಾ ಕಾರ್ಯಕ್ರಮಗಳಲ್ಲಿ ಆತ್ಮೀಯವಾಗಿ ತೊಡಗಿಸಿಕೊಂಡಿರುತ್ತದೆ, ಮಾತ್ರವಲ್ಲದೆ ಸಂದರ್ಭನುಸಾರವಾಗಿ ಶ್ರೀ ಕ್ಷೇತ್ರದ ಅನುಕೂಲಕ್ಕೆ ಅನುಗುಣವಾಗಿ ಸದಾಕಾಲ ತಮ್ಮಿಂದ ಆಗುವ ಸೇವೆಯಲ್ಲಿ ಪಾಲ್ಗೊಂಡಿರುತ್ತದೆ.
ಸಮಿತಿಯ ಅಧ್ಯಕ್ಷರಾದ ದಿಲ್ ರಾಜ್ ಆಳ್ವ ಮಾತನಾಡಿ ನಮ್ಮ ಸಮಿತಿಯು ಅನೇಕ ವರ್ಷಗಳಿಂದ ತಾಯಿಯ ಸೇವೆಯಲ್ಲಿ ಪಾಲ್ಗೊಂಡಿದೆ. ಈ ವರ್ಷ ವಿಷೇಷವಾಗಿ ರಜತ ಹಸ್ತ ಸಮರ್ಪಣೆ ಮಾತ್ರವಲ್ಲದೆ ವಿಜಯ ದಶಮಿಯಂದು ಸಮಿತಿಯ ವತಿಯಿಂದ ಸಾರ್ವಜನಿಕ ಅನ್ನ ಸಂತರ್ಪಣೆ ನೆರವೇರಲಿದೆ ಎಂದು ತಿಳಿಸಿದರು.
ಹಿರಿಯ ಸದಸ್ಯರಾದ ಎ. ಸೀತಾರಾಮ, ಬಿ. ಅಶೋಕ್ ಕುಮಾರ್, ಕೇಶವ , ತುಕಾರಾಮ್, ಪ್ರಧಾನ ಕಾರ್ಯದರ್ಶಿ ತಿಲಕ್ ರಾಜ್ ಕೋಶಾಧಿಕಾರಿ ವಿಶ್ವನಾಥ್, ದೇವಸ್ತಾನದ ಆಡಳಿತ ಮಂಡಳಿ ಸದಸ್ಯರು, ಅರ್ಚಕ ವೃಂದ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು