9:56 AM Tuesday17 - March 2026
ಬ್ರೇಕಿಂಗ್ ನ್ಯೂಸ್
Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ… ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್

ಇತ್ತೀಚಿನ ಸುದ್ದಿ

ಶ್ರೀ ಮಂಗಳಾದೇವಿ ಸೇವಾ ಸಮಿತಿಯ ವತಿಯಿಂದ ಶ್ರೀ ಮಂಗಳಾಂಬೆಗೆ ರಜತ ಹಸ್ತ ಸಮರ್ಪಣೆ

03/10/2024, 22:23

ಮಂಗಳೂರು(reporterkarnataka.com):ನಗರದ ಶ್ರೀ ಮಂಗಳಾದೇವಿ ದೇವಸ್ಥಾನದ ಸೇವೆಯನ್ನೇ ಮೂಲ ಧ್ಯೆಯವನ್ನಾಗಿಸಿಕೊಂಡು ಸ್ಥಾಪನೆಯಾದಂತಹ ಶ್ರೀ ಮಂಗಳಾದೇವಿ ಸೇವಾ ಸಮಿತಿಯ ವತಿಯಿಂದ ನವರಾತ್ರಿಯ ಆರಂಭದ ದಿನವಾದ ಇಂದು ಕ್ಷೇತ್ರದ ತಂತ್ರಿಗಳಾದ ನೀಲೇಶ್ವರ ಶ್ರೀ ಪದ್ಮನಾಭ ತಂತ್ರಿಯವರ ಸಮ್ಮುಖದಲ್ಲಿ ರಜತ ಹಸ್ತಗಳನ್ನು ಸಮರ್ಪಿಸಲಾಯಿತು. ಶ್ರೀಮಂಗಳಾದೇವಿ ದೇವಸ್ಥಾನದ ಎಲ್ಲಾ ಕಾರ್ಯಕ್ರಮಗಳಲ್ಲಿಯೂ ತನ್ನನ್ನು ತಾನು ತೊಡಗಿಸಿಕೊಂಡಿರುವಂತಹ ಶ್ರೀಮಂಗಳಾದೇವಿ ಸೇವಾ ಸಮಿತಿಯು ಕ್ಷೇತ್ರದಲ್ಲಿ ನಡೆಯುವ ನವರಾತ್ರಿ ಮಹೋತ್ಸವ ಜಾತ್ರಾ ಮಹೋತ್ಸವ ಸೇರಿದಂತೆ ಎಲ್ಲಾ ಅನ್ನ-ಸಂತರ್ಪಣೆಯ ದಿವಸಗಳಂದು ಮಾತ್ರವಲ್ಲದೆ ದೇವಸ್ಥಾನದ ಎಲ್ಲಾ ಕಾರ್ಯಕ್ರಮಗಳಲ್ಲಿ ಆತ್ಮೀಯವಾಗಿ ತೊಡಗಿಸಿಕೊಂಡಿರುತ್ತದೆ, ಮಾತ್ರವಲ್ಲದೆ ಸಂದರ್ಭನುಸಾರವಾಗಿ ಶ್ರೀ ಕ್ಷೇತ್ರದ ಅನುಕೂಲಕ್ಕೆ ಅನುಗುಣವಾಗಿ ಸದಾಕಾಲ ತಮ್ಮಿಂದ ಆಗುವ ಸೇವೆಯಲ್ಲಿ ಪಾಲ್ಗೊಂಡಿರುತ್ತದೆ.
ಸಮಿತಿಯ ಅಧ್ಯಕ್ಷರಾದ ದಿಲ್ ರಾಜ್ ಆಳ್ವ ಮಾತನಾಡಿ ನಮ್ಮ ಸಮಿತಿಯು ಅನೇಕ ವರ್ಷಗಳಿಂದ ತಾಯಿಯ ಸೇವೆಯಲ್ಲಿ ಪಾಲ್ಗೊಂಡಿದೆ. ಈ ವರ್ಷ ವಿಷೇಷವಾಗಿ ರಜತ ಹಸ್ತ ಸಮರ್ಪಣೆ ಮಾತ್ರವಲ್ಲದೆ ವಿಜಯ ದಶಮಿಯಂದು ಸಮಿತಿಯ ವತಿಯಿಂದ ಸಾರ್ವಜನಿಕ ಅನ್ನ ಸಂತರ್ಪಣೆ ನೆರವೇರಲಿದೆ ಎಂದು ತಿಳಿಸಿದರು.
ಹಿರಿಯ ಸದಸ್ಯರಾದ ಎ. ಸೀತಾರಾಮ, ಬಿ. ಅಶೋಕ್ ಕುಮಾರ್, ಕೇಶವ , ತುಕಾರಾಮ್, ಪ್ರಧಾನ ಕಾರ್ಯದರ್ಶಿ ತಿಲಕ್ ರಾಜ್ ಕೋಶಾಧಿಕಾರಿ ವಿಶ್ವನಾಥ್, ದೇವಸ್ತಾನದ ಆಡಳಿತ ಮಂಡಳಿ ಸದಸ್ಯರು, ಅರ್ಚಕ ವೃಂದ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು