4:43 PM Friday5 - December 2025
ಬ್ರೇಕಿಂಗ್ ನ್ಯೂಸ್
New Delhi | ಬೆಳ್ಳಿ ವಸ್ತು, ಆಭರಣಗಳಿಗಿನ್ನು BIS ಹಾಲ್‌ಮಾರ್ಕ್‌, HUID ಕಡ್ಡಾಯ ರಾಜ್ಯ ಸರಕಾರ ಅನ್ನದಾತ ರೈತನ ಬಗ್ಗೆ ಕಾಳಜಿ ವಹಿಸುತ್ತಿಲ್ಲ: ಮಾಜಿ ಗೃಹ ಸಚಿವ… ವಿಶೇಷ ಚೇತನರು ಇನ್ನು ವಿಮಾನವೇರುವುದು ಸುಲಭ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಮೊಬಿಲಿಟಿ… ಕೊಡಗಿನಲ್ಲಿ ಮುಂದುವರಿದ ಆನೆ- ಮಾನವ ಸಂಘರ್ಷ: ಕುಶಾಲನಗರ ಬಳಿ ರೈಲ್ವೆ ಬ್ಯಾರಿಕೇಡ್ ಮುರಿದ… ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ

ಇತ್ತೀಚಿನ ಸುದ್ದಿ

ಶ್ರೀ ಮಂಗಳಾದೇವಿ ಸೇವಾ ಸಮಿತಿಯ ವತಿಯಿಂದ ಶ್ರೀ ಮಂಗಳಾಂಬೆಗೆ ರಜತ ಹಸ್ತ ಸಮರ್ಪಣೆ

03/10/2024, 22:23

ಮಂಗಳೂರು(reporterkarnataka.com):ನಗರದ ಶ್ರೀ ಮಂಗಳಾದೇವಿ ದೇವಸ್ಥಾನದ ಸೇವೆಯನ್ನೇ ಮೂಲ ಧ್ಯೆಯವನ್ನಾಗಿಸಿಕೊಂಡು ಸ್ಥಾಪನೆಯಾದಂತಹ ಶ್ರೀ ಮಂಗಳಾದೇವಿ ಸೇವಾ ಸಮಿತಿಯ ವತಿಯಿಂದ ನವರಾತ್ರಿಯ ಆರಂಭದ ದಿನವಾದ ಇಂದು ಕ್ಷೇತ್ರದ ತಂತ್ರಿಗಳಾದ ನೀಲೇಶ್ವರ ಶ್ರೀ ಪದ್ಮನಾಭ ತಂತ್ರಿಯವರ ಸಮ್ಮುಖದಲ್ಲಿ ರಜತ ಹಸ್ತಗಳನ್ನು ಸಮರ್ಪಿಸಲಾಯಿತು. ಶ್ರೀಮಂಗಳಾದೇವಿ ದೇವಸ್ಥಾನದ ಎಲ್ಲಾ ಕಾರ್ಯಕ್ರಮಗಳಲ್ಲಿಯೂ ತನ್ನನ್ನು ತಾನು ತೊಡಗಿಸಿಕೊಂಡಿರುವಂತಹ ಶ್ರೀಮಂಗಳಾದೇವಿ ಸೇವಾ ಸಮಿತಿಯು ಕ್ಷೇತ್ರದಲ್ಲಿ ನಡೆಯುವ ನವರಾತ್ರಿ ಮಹೋತ್ಸವ ಜಾತ್ರಾ ಮಹೋತ್ಸವ ಸೇರಿದಂತೆ ಎಲ್ಲಾ ಅನ್ನ-ಸಂತರ್ಪಣೆಯ ದಿವಸಗಳಂದು ಮಾತ್ರವಲ್ಲದೆ ದೇವಸ್ಥಾನದ ಎಲ್ಲಾ ಕಾರ್ಯಕ್ರಮಗಳಲ್ಲಿ ಆತ್ಮೀಯವಾಗಿ ತೊಡಗಿಸಿಕೊಂಡಿರುತ್ತದೆ, ಮಾತ್ರವಲ್ಲದೆ ಸಂದರ್ಭನುಸಾರವಾಗಿ ಶ್ರೀ ಕ್ಷೇತ್ರದ ಅನುಕೂಲಕ್ಕೆ ಅನುಗುಣವಾಗಿ ಸದಾಕಾಲ ತಮ್ಮಿಂದ ಆಗುವ ಸೇವೆಯಲ್ಲಿ ಪಾಲ್ಗೊಂಡಿರುತ್ತದೆ.
ಸಮಿತಿಯ ಅಧ್ಯಕ್ಷರಾದ ದಿಲ್ ರಾಜ್ ಆಳ್ವ ಮಾತನಾಡಿ ನಮ್ಮ ಸಮಿತಿಯು ಅನೇಕ ವರ್ಷಗಳಿಂದ ತಾಯಿಯ ಸೇವೆಯಲ್ಲಿ ಪಾಲ್ಗೊಂಡಿದೆ. ಈ ವರ್ಷ ವಿಷೇಷವಾಗಿ ರಜತ ಹಸ್ತ ಸಮರ್ಪಣೆ ಮಾತ್ರವಲ್ಲದೆ ವಿಜಯ ದಶಮಿಯಂದು ಸಮಿತಿಯ ವತಿಯಿಂದ ಸಾರ್ವಜನಿಕ ಅನ್ನ ಸಂತರ್ಪಣೆ ನೆರವೇರಲಿದೆ ಎಂದು ತಿಳಿಸಿದರು.
ಹಿರಿಯ ಸದಸ್ಯರಾದ ಎ. ಸೀತಾರಾಮ, ಬಿ. ಅಶೋಕ್ ಕುಮಾರ್, ಕೇಶವ , ತುಕಾರಾಮ್, ಪ್ರಧಾನ ಕಾರ್ಯದರ್ಶಿ ತಿಲಕ್ ರಾಜ್ ಕೋಶಾಧಿಕಾರಿ ವಿಶ್ವನಾಥ್, ದೇವಸ್ತಾನದ ಆಡಳಿತ ಮಂಡಳಿ ಸದಸ್ಯರು, ಅರ್ಚಕ ವೃಂದ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು