7:40 PM Thursday3 - July 2025
ಬ್ರೇಕಿಂಗ್ ನ್ಯೂಸ್
ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ…

ಇತ್ತೀಚಿನ ಸುದ್ದಿ

ಶ್ರೀ ಮಂಗಳಾದೇವಿ ಸೇವಾ ಸಮಿತಿಯ ವತಿಯಿಂದ ಶ್ರೀ ಮಂಗಳಾಂಬೆಗೆ ರಜತ ಹಸ್ತ ಸಮರ್ಪಣೆ

03/10/2024, 22:23

ಮಂಗಳೂರು(reporterkarnataka.com):ನಗರದ ಶ್ರೀ ಮಂಗಳಾದೇವಿ ದೇವಸ್ಥಾನದ ಸೇವೆಯನ್ನೇ ಮೂಲ ಧ್ಯೆಯವನ್ನಾಗಿಸಿಕೊಂಡು ಸ್ಥಾಪನೆಯಾದಂತಹ ಶ್ರೀ ಮಂಗಳಾದೇವಿ ಸೇವಾ ಸಮಿತಿಯ ವತಿಯಿಂದ ನವರಾತ್ರಿಯ ಆರಂಭದ ದಿನವಾದ ಇಂದು ಕ್ಷೇತ್ರದ ತಂತ್ರಿಗಳಾದ ನೀಲೇಶ್ವರ ಶ್ರೀ ಪದ್ಮನಾಭ ತಂತ್ರಿಯವರ ಸಮ್ಮುಖದಲ್ಲಿ ರಜತ ಹಸ್ತಗಳನ್ನು ಸಮರ್ಪಿಸಲಾಯಿತು. ಶ್ರೀಮಂಗಳಾದೇವಿ ದೇವಸ್ಥಾನದ ಎಲ್ಲಾ ಕಾರ್ಯಕ್ರಮಗಳಲ್ಲಿಯೂ ತನ್ನನ್ನು ತಾನು ತೊಡಗಿಸಿಕೊಂಡಿರುವಂತಹ ಶ್ರೀಮಂಗಳಾದೇವಿ ಸೇವಾ ಸಮಿತಿಯು ಕ್ಷೇತ್ರದಲ್ಲಿ ನಡೆಯುವ ನವರಾತ್ರಿ ಮಹೋತ್ಸವ ಜಾತ್ರಾ ಮಹೋತ್ಸವ ಸೇರಿದಂತೆ ಎಲ್ಲಾ ಅನ್ನ-ಸಂತರ್ಪಣೆಯ ದಿವಸಗಳಂದು ಮಾತ್ರವಲ್ಲದೆ ದೇವಸ್ಥಾನದ ಎಲ್ಲಾ ಕಾರ್ಯಕ್ರಮಗಳಲ್ಲಿ ಆತ್ಮೀಯವಾಗಿ ತೊಡಗಿಸಿಕೊಂಡಿರುತ್ತದೆ, ಮಾತ್ರವಲ್ಲದೆ ಸಂದರ್ಭನುಸಾರವಾಗಿ ಶ್ರೀ ಕ್ಷೇತ್ರದ ಅನುಕೂಲಕ್ಕೆ ಅನುಗುಣವಾಗಿ ಸದಾಕಾಲ ತಮ್ಮಿಂದ ಆಗುವ ಸೇವೆಯಲ್ಲಿ ಪಾಲ್ಗೊಂಡಿರುತ್ತದೆ.
ಸಮಿತಿಯ ಅಧ್ಯಕ್ಷರಾದ ದಿಲ್ ರಾಜ್ ಆಳ್ವ ಮಾತನಾಡಿ ನಮ್ಮ ಸಮಿತಿಯು ಅನೇಕ ವರ್ಷಗಳಿಂದ ತಾಯಿಯ ಸೇವೆಯಲ್ಲಿ ಪಾಲ್ಗೊಂಡಿದೆ. ಈ ವರ್ಷ ವಿಷೇಷವಾಗಿ ರಜತ ಹಸ್ತ ಸಮರ್ಪಣೆ ಮಾತ್ರವಲ್ಲದೆ ವಿಜಯ ದಶಮಿಯಂದು ಸಮಿತಿಯ ವತಿಯಿಂದ ಸಾರ್ವಜನಿಕ ಅನ್ನ ಸಂತರ್ಪಣೆ ನೆರವೇರಲಿದೆ ಎಂದು ತಿಳಿಸಿದರು.
ಹಿರಿಯ ಸದಸ್ಯರಾದ ಎ. ಸೀತಾರಾಮ, ಬಿ. ಅಶೋಕ್ ಕುಮಾರ್, ಕೇಶವ , ತುಕಾರಾಮ್, ಪ್ರಧಾನ ಕಾರ್ಯದರ್ಶಿ ತಿಲಕ್ ರಾಜ್ ಕೋಶಾಧಿಕಾರಿ ವಿಶ್ವನಾಥ್, ದೇವಸ್ತಾನದ ಆಡಳಿತ ಮಂಡಳಿ ಸದಸ್ಯರು, ಅರ್ಚಕ ವೃಂದ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು