7:17 PM Tuesday24 - March 2026
ಬ್ರೇಕಿಂಗ್ ನ್ಯೂಸ್
ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ

ಇತ್ತೀಚಿನ ಸುದ್ದಿ

ಶ್ರೀರಾಮುಲು ವಿರುದ್ಧ ಹೇಳಿಕೆ: ಜನಾರ್ದನ ರೆಡ್ಡಿ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ; ವಾಲ್ಮೀಕಿ ಮುಖಂಡರ ಎಚ್ಚರಿಕೆ

25/01/2025, 14:19

ಬಳ್ಳಾರಿ(reporterkarnataka.com): ಮಾಜಿ ಸಚಿವ ಶ್ರೀರಾಮುಲು ಅವರ ವಿರುದ್ಧ ಮಾತನಾಡುತ್ತಿರುವ ಶಾಸಕ ಜನಾರ್ದನ ರೆಡ್ಡಿ ಅವರ ವಿರುದ್ಧ ರಾಜ್ಯದಾದ್ಯಂತ ಚಳವಳಿ ರೂಪಿಸುವುದಾಗಿ ವಾಲ್ಮೀಕಿ ಸಮುದಾಯದ ಬಳ್ಳಾರಿ ಜಿಲ್ಲಾ ಮುಖಂಡರು ಎಚ್ಚರಿಕೆ ನೀಡಿದ್ದಾರೆ. 
ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮುದಾಯದ ಮುಖಂಡ ಜೋಳದ ರಾಶಿ ತಿಮ್ಮಪ್ಪ, ‘ಜನಾರ್ದನ ರೆಡ್ಡಿ ಅವರು ಶ್ರೀರಾಮುಲು ವಿರುದ್ಧ ‘ನೀನು ಕೀಳು ಜಾತಿಯವನು, ಕೊಡಲಿ ಹಿಡಿದುಕೊಂಡು ಬೀದಿಯಲ್ಲಿ ಓಡಾಡುತ್ತಿದ್ದವನು, ನಿನ್ನ ರಾಜಕೀಯ ಜೀವನ ರೂಪಿಸಿದ್ದು ನಾನು’ ಎಂದೆಲ್ಲ ಮಾತನಾಡಿದ್ದಾರೆ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗುವುದು. ಜನಾರ್ದನ ರೆಡ್ಡಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು, ಜಾತಿ ನಿಂದನೆ ಪ್ರಕರಣ ದಾಖಲು ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿ ರಾಜ್ಯದ ಎಲ್ಲ ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿಗಳಿಗೆ ದೂರು ಕೊಡಲಾಗುವುದು’ ಎಂದರು. 
ಅದು ಸಫಲವಾಗದಿದ್ದರೆ ರಾಜ್ಯದಾದ್ಯಂತ ಚಳವಳಿ ರೂಪಿಸುತ್ತೇವೆ. ಅಭಿಯಾನ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.  
ಜನಾರ್ದನ ರೆಡ್ಡಿ ಕ್ಷಮೆ ಕೇಳಬೇಕು, ಬಿಜೆಪಿಯಿಂದ ಅವರನ್ನು ಹೊರ ಹಾಕಬೇಕು. ಶ್ರೀರಾಮುಲು ಅವರಿಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೇ ಬೆಂಬಲ ಸೂಚಿಸಿದ್ದಾರೆ. ಶ್ರೀರಾಮುಲು ಮನಸ್ಥಿತಿ ಏನು, ರೆಡ್ಡಿ ಮನಸ್ಥಿತಿ ಏನು ಎಂಬುದು ಪಕ್ಷಕ್ಕೂ ಗೊತ್ತಾಗಿದೆ.  ನಾವು ರಾಮುಲು ಪರವಾಗಿ ಇರುತ್ತೇವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು