12:05 PM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಶ್ರೀರಾಮುಲು ವಿರುದ್ಧ ಹೇಳಿಕೆ: ಜನಾರ್ದನ ರೆಡ್ಡಿ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ; ವಾಲ್ಮೀಕಿ ಮುಖಂಡರ ಎಚ್ಚರಿಕೆ

25/01/2025, 14:19

ಬಳ್ಳಾರಿ(reporterkarnataka.com): ಮಾಜಿ ಸಚಿವ ಶ್ರೀರಾಮುಲು ಅವರ ವಿರುದ್ಧ ಮಾತನಾಡುತ್ತಿರುವ ಶಾಸಕ ಜನಾರ್ದನ ರೆಡ್ಡಿ ಅವರ ವಿರುದ್ಧ ರಾಜ್ಯದಾದ್ಯಂತ ಚಳವಳಿ ರೂಪಿಸುವುದಾಗಿ ವಾಲ್ಮೀಕಿ ಸಮುದಾಯದ ಬಳ್ಳಾರಿ ಜಿಲ್ಲಾ ಮುಖಂಡರು ಎಚ್ಚರಿಕೆ ನೀಡಿದ್ದಾರೆ. 
ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮುದಾಯದ ಮುಖಂಡ ಜೋಳದ ರಾಶಿ ತಿಮ್ಮಪ್ಪ, ‘ಜನಾರ್ದನ ರೆಡ್ಡಿ ಅವರು ಶ್ರೀರಾಮುಲು ವಿರುದ್ಧ ‘ನೀನು ಕೀಳು ಜಾತಿಯವನು, ಕೊಡಲಿ ಹಿಡಿದುಕೊಂಡು ಬೀದಿಯಲ್ಲಿ ಓಡಾಡುತ್ತಿದ್ದವನು, ನಿನ್ನ ರಾಜಕೀಯ ಜೀವನ ರೂಪಿಸಿದ್ದು ನಾನು’ ಎಂದೆಲ್ಲ ಮಾತನಾಡಿದ್ದಾರೆ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗುವುದು. ಜನಾರ್ದನ ರೆಡ್ಡಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು, ಜಾತಿ ನಿಂದನೆ ಪ್ರಕರಣ ದಾಖಲು ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿ ರಾಜ್ಯದ ಎಲ್ಲ ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿಗಳಿಗೆ ದೂರು ಕೊಡಲಾಗುವುದು’ ಎಂದರು. 
ಅದು ಸಫಲವಾಗದಿದ್ದರೆ ರಾಜ್ಯದಾದ್ಯಂತ ಚಳವಳಿ ರೂಪಿಸುತ್ತೇವೆ. ಅಭಿಯಾನ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.  
ಜನಾರ್ದನ ರೆಡ್ಡಿ ಕ್ಷಮೆ ಕೇಳಬೇಕು, ಬಿಜೆಪಿಯಿಂದ ಅವರನ್ನು ಹೊರ ಹಾಕಬೇಕು. ಶ್ರೀರಾಮುಲು ಅವರಿಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೇ ಬೆಂಬಲ ಸೂಚಿಸಿದ್ದಾರೆ. ಶ್ರೀರಾಮುಲು ಮನಸ್ಥಿತಿ ಏನು, ರೆಡ್ಡಿ ಮನಸ್ಥಿತಿ ಏನು ಎಂಬುದು ಪಕ್ಷಕ್ಕೂ ಗೊತ್ತಾಗಿದೆ.  ನಾವು ರಾಮುಲು ಪರವಾಗಿ ಇರುತ್ತೇವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು