9:37 AM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಶ್ರೀರಾಮುಲು ವಿರುದ್ಧ ಹೇಳಿಕೆ: ಜನಾರ್ದನ ರೆಡ್ಡಿ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ; ವಾಲ್ಮೀಕಿ ಮುಖಂಡರ ಎಚ್ಚರಿಕೆ

25/01/2025, 14:19

ಬಳ್ಳಾರಿ(reporterkarnataka.com): ಮಾಜಿ ಸಚಿವ ಶ್ರೀರಾಮುಲು ಅವರ ವಿರುದ್ಧ ಮಾತನಾಡುತ್ತಿರುವ ಶಾಸಕ ಜನಾರ್ದನ ರೆಡ್ಡಿ ಅವರ ವಿರುದ್ಧ ರಾಜ್ಯದಾದ್ಯಂತ ಚಳವಳಿ ರೂಪಿಸುವುದಾಗಿ ವಾಲ್ಮೀಕಿ ಸಮುದಾಯದ ಬಳ್ಳಾರಿ ಜಿಲ್ಲಾ ಮುಖಂಡರು ಎಚ್ಚರಿಕೆ ನೀಡಿದ್ದಾರೆ. 
ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮುದಾಯದ ಮುಖಂಡ ಜೋಳದ ರಾಶಿ ತಿಮ್ಮಪ್ಪ, ‘ಜನಾರ್ದನ ರೆಡ್ಡಿ ಅವರು ಶ್ರೀರಾಮುಲು ವಿರುದ್ಧ ‘ನೀನು ಕೀಳು ಜಾತಿಯವನು, ಕೊಡಲಿ ಹಿಡಿದುಕೊಂಡು ಬೀದಿಯಲ್ಲಿ ಓಡಾಡುತ್ತಿದ್ದವನು, ನಿನ್ನ ರಾಜಕೀಯ ಜೀವನ ರೂಪಿಸಿದ್ದು ನಾನು’ ಎಂದೆಲ್ಲ ಮಾತನಾಡಿದ್ದಾರೆ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗುವುದು. ಜನಾರ್ದನ ರೆಡ್ಡಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು, ಜಾತಿ ನಿಂದನೆ ಪ್ರಕರಣ ದಾಖಲು ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿ ರಾಜ್ಯದ ಎಲ್ಲ ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿಗಳಿಗೆ ದೂರು ಕೊಡಲಾಗುವುದು’ ಎಂದರು. 
ಅದು ಸಫಲವಾಗದಿದ್ದರೆ ರಾಜ್ಯದಾದ್ಯಂತ ಚಳವಳಿ ರೂಪಿಸುತ್ತೇವೆ. ಅಭಿಯಾನ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.  
ಜನಾರ್ದನ ರೆಡ್ಡಿ ಕ್ಷಮೆ ಕೇಳಬೇಕು, ಬಿಜೆಪಿಯಿಂದ ಅವರನ್ನು ಹೊರ ಹಾಕಬೇಕು. ಶ್ರೀರಾಮುಲು ಅವರಿಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೇ ಬೆಂಬಲ ಸೂಚಿಸಿದ್ದಾರೆ. ಶ್ರೀರಾಮುಲು ಮನಸ್ಥಿತಿ ಏನು, ರೆಡ್ಡಿ ಮನಸ್ಥಿತಿ ಏನು ಎಂಬುದು ಪಕ್ಷಕ್ಕೂ ಗೊತ್ತಾಗಿದೆ.  ನಾವು ರಾಮುಲು ಪರವಾಗಿ ಇರುತ್ತೇವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು