9:17 AM Friday6 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಶ್ರೀ ಶಾಂಕರ ತತ್ವಪ್ರಸಾರ ಅಭಿಯಾನ: ಸಾಮರಸ್ಯ ಸಮಾಜ ಜಾಗೃತಿ ಕಾರ್ಯಕ್ರಮ

18/05/2024, 23:00

ಬಂಟ್ವಾಳ(reporterkarnataka.com):ಶಂಕರಾಚಾರ್ಯರ ಅದ್ವೈತ ಸಿದ್ಧಾಂತದಂತೆ ಎಲ್ಲರಲ್ಲೂ ಪರಮಾತ್ಮನನ್ನು ಕಾಣಬೇಕು. ಎಲ್ಲರೂ ದೇವರ ಅಂಶಗಳೇ ಆಗಿದ್ದಾರೆ ಎಂದು ಸಾರಿದ ಶಂಕರಾಚಾರ್ಯರು ಧರ್ಮ ರಕ್ಷಣೆಗೆ ಹೊಸ ಮಾರ್ಗವನ್ನು ಹಾಕಿಕೊಟ್ಟು ಎಲ್ಲಾ ರೀತಿಯ ಭೇದಭಾವ ಅಳಿಸಿ ಸಾಮರಸ್ಯದ ಸಮಾಜ ನಿರ್ಮಾಣಕ್ಕೆ ಹರಿಕಾರರಾಗಿದ್ದಾರೆ‌ ಎಂದು ಧಾರ್ಮಿಕ ಪರಿಷತ್ತು ಜಿಲ್ಲಾ ಸದಸ್ಯ ಜಗನ್ನಾಥ ಚೌಟ ಬದಿಗುಡ್ಡೆ ಅಭಿಪ್ರಾಯ ಪಟ್ಟರು.
ಅವರು ಬಿ.ಸಿ.ರೋಡಿನ ಅನ್ನಪೂರ್ಣೇಶ್ವರೀ ದೇವಸ್ಥಾನ ದ ವಠಾರದಲ್ಲಿ ಸನಾತನ ಹಿಂದೂ ಧರ್ಮದ ಪುನರುತ್ಥಾನದ ಮಹಾಶಕ್ತಿಯಾಗಿ ಅವತರಿಸಿದ ಆಚಾರ್ಯ ಶಂಕರ ಭಗವತ್ಪಾದರ ಜಯಂತ್ಯುತ್ಸವದ ಅಂಗವಾಗಿ ಬಂಟ್ವಾಳ ತಾಲೂಕಿನ ಹಲವೆಡೆಗಳಲ್ಲಿ ಶ್ರೀ ಶಂಕರ ತತ್ವಪ್ರಸಾರ ಅಭಿಯಾನ ಶೃಂಗೇರಿ ಮಠ, ಅಖಿಲ ಕರ್ನಾಟ ಹಿರಿಯರ ಸೇವಾ ಪ್ರತಿಷ್ಠಾನ, ಶ್ರೀ ಶಂಕರ ಸೇವಾ ಪ್ರತಿಷ್ಠಾನ ಕೋಟೆಕಾರು ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾದ ಶ್ರೀ ಶಾಂಕರ ತತ್ವಪ್ರಸಾರ ಅಭಿಯಾನದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದರು.
ಅನ್ನಪೂರ್ಣೇಶ್ವರಿ ದೇವಸ್ಥಾನ ದ ಆಡಳಿತ ಮಂಡಳಿ‌ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ರೊಟೇರಿಯನ್ ಪ್ರಕಾಶ ಕಾರಂತ, ಶ್ರೀಶಂಕರ ಸೇವಾ ಪ್ರತಿಷ್ಠಾನ ಬಂಟ್ವಾಳ ತಾಲೂಕು ಸಂಚಾಲಕ ಎ.ಕೃಷ್ಣ ಶರ್ಮ, ಪದಾಧಿಕಾರಿಗಳಾದ ಶಿವರಾಮ ರಾವ್ ಬೈರಿಕಟ್ಟೆ, ಜಗದೀಶ ಹೊಳ್ಳ ಬಿ.ಸಿ.ರೋಡು ಉಪಸ್ಥಿತರಿದ್ದರು.
ಉಪಾಧ್ಯಕ್ಷ ಜಯಾನಂದ ಪೆರಾಜೆ ಸ್ವಾಗತಿಸಿ, ಪ್ರಸ್ತಾವನೆ ಗೈದರು. ಪ್ರಧಾನ ಕಾರ್ಯದರ್ಶಿ ರಾಜಾರಾಮ ಐತಾಳ್ ಕಂದೂರು ವಂದಿಸಿದರು.
ಮೇ 23ರಿಂದ ಜೂನ್ 2ರವರೆಗೆ ಸಮಾಜ ಜಾಗೃತಿ ಕಾರ್ಯಕ್ರಮ, ಧಾರ್ಮಿಕ ಸಭೆ, ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಮೇ 23ಕ್ಕೆ ಮಂಗಳಪದವು ಅಯ್ಯಪ್ಪ ಭಜನಾ ಮಂದಿರ, ಮೇ 24 ಸೇವಾಂಜಲಿ ಪ್ರತಿಷ್ಠಾನ ಪರಂಗಿಪೇಟೆ, ಮೇ 25 ವೆಂಕಟರಮಣ ಭಜನಾ ಮಂದಿರ ಕಡಂಬು ವಿಟ್ಲ, ಮೇ 26 ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಕಣಿಯೂರು ಕನ್ಯಾನ, ಜೂನ್1 ಅಶ್ವತ್ಥನಾರಾಯಣ ಭಜನಾ ಮಂದಿರ ಬೈರಿಕಟ್ಟೆ ಅಳಿಕೆ, ಜೂನ್2 ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬಂಟ್ವಾಳದಲ್ಲಿ ಸಂಪನ್ನಗೊಳ್ಳಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು