5:09 AM Sunday5 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಶ್ರೀಕ್ಷೇತ್ರ ಕೇಮಾರಿನಲ್ಲಿ “ಟೆಲಿಬರವು” ತಂತ್ರಾಂಶ ಲೋಕಾರ್ಪಣೆ*

12/06/2023, 20:18

ಮಂಗಳೂರು(reporterkarnataka.com):ಸಂಸ್ಕೃತಿ ಮುಖ್ಯ, ದೇಶ ವಿದೇಶಕ್ಕೂ ಹೋದರೂ ತುಳು ಸಂಸ್ಕೃತಿಯನ್ನು ಮರೆಯಬಾರದು. ಆದರೆ ತುಳು ಭಾಷೆಯನ್ನು ಎಂಟನೇ ಪರೀಚ್ಛೇಧದಲ್ಲಿ ಸೇರಿಸುವಲ್ಲಿ ಈತನಕವೂ ಆಗದೇ ರಾಜಕಾರಣಿಗಳು ಕೇವಲ ಬಂಡಲ್ ಬಿಡುವಲ್ಲೇ ಕಾಲ ಕಳೆದರು ಎಂದು ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಶ್ರೀ ಈಶ ವಿಠಲದಾಸ ಸ್ವಾಮೀಜಿ ಖೇದ ವ್ಯಕ್ತಪಡಿಸಿದರು.
ಜೈ ತುಲುನಾಡ್(ರಿ.) ಇದರ ನೇತೃತ್ವದಲ್ಲಿ ಶ್ರೀಕ್ಷೇತ್ರ ಕೇಮಾರಿನಲ್ಲಿ ಭಾನುವಾರ ‘ಟೆಲಿಬರವು’ ಎಂಬ ಆಪ್ ಲೋಕಾರ್ಪಣೆಗೊಳಿಸಿ ಅವರು ಆಶೀರ್ವಚನ ನೀಡಿ ಮಾತನಾಡಿದರು.
ಈ ವೇಳೆ ‘ಟೆಲಿಬರವು’ ತಂತ್ರಾಂಶದ ರಚನೆಕಾರರಾದ ಜ್ಙಾನೇಶ ದೇರಳಕಟ್ಟೆ ಇವರನ್ನು ಸನ್ಮಾನಿಸಲಾಯಿತು. ಈ ತಂತ್ರಾಂಶದಲ್ಲಿ ಕನ್ನಡದಲ್ಲಿ ಬರೆದಂತಹ ಅಕ್ಷರಗಳು ತುಳು ಲಿಪಿಗೆ ಪರಿವರ್ತನೆಯಾಗುತ್ತದೆ ಎಂದು ಸನ್ಮಾನಿತರಾದ ಜ್ಞಾನೇಶ್ ಹೇಳಿದರು. ಸುಮಂತ್ ಹೆಬ್ರಿ ತಂತ್ರಾಂಶದ ಬಗ್ಗೆ ಮಾಹಿತಿ ನೀಡಿದರು..
ಈ ಸಂಧರ್ಭ ಕೇಮಾರ್ ಕ್ಷೇತ್ರದ ನಾಮಪಲಕವನ್ನು ತುಲುಲಿಪಿಯಲ್ಲಿ ಅಳವಡಿಸಿ ಉದ್ಘಾಟಿಸಲಾಯಿತು.
ಜೈ ತುಲುನಾಡ್ ಸಂಘಟನೆಯ ಅಧ್ಯಕ್ಷ ವಿಶು ಶ್ರೀಕೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಐಕಳ ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷ ರಾಜೇಶ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಜೈ ತುಲುನಾಡ್ ಸಂಘಟನೆಯ ಉಪಾಧ್ಯಕ್ಷ ಉದಯ್ ಪೂಂಜಾ ಉಪಸ್ಥಿತರಿದ್ದರು. ಪೂರ್ಣಿಮಾ ಬಂಟ್ವಳಾ ಸನ್ಮಾನ ಪತ್ರ ವಾಚಿಸಿದರು. ಪವಿತ್ರ ಪೂಜಾರಿ ಸ್ವಾಗತಿಸಿ ಅಕ್ಷತ ಧನ್ಯವಾದ ಅರ್ಪಿಸಿದರು. ಕಿರಣ್ ತುಲುವೆ ಕಾರ್ಯಕ್ರಮ ನಿರೂಪಿಸಿದರು.

*ಟೆಲಿಬರವು*
ತುಲು ಭಾಷೆಗೆ ಯೂನಿಕೋಡ್ ಇಲ್ಲದಿರುವ ಕಾರಣ ಪರ್ಯಾಯವಾಗಿ ಆಂಗ್ಲ ಭಾಷೆಯ ಫಾಂಟ್ ಅನ್ನು ಜೈತುಲುನಾಡ್ ಸಂಘಟನೆಯು ಮರುವಿನ್ಯಾಸ ಗೊಳಿಸಿ ಸಿದ್ಧಪಡಿಸಿದಂತಃ ಫಾಂಟ್ ಮೂಲಕ ತುಲು ಅಕ್ಷರವನ್ನು ಬರೆಯಬಹುದು. ಆದರೆ ಅದನ್ನು ಬಳಸಲು ಜನಸಾಮಾನ್ಯರಿಗೆ ಅನಾನೂಕೂಲವಾಗುತ್ತಿತ್ತು. ಇದನ್ನರಿತ ಜೈತುಲುನಾಡ್ ಸಂಘಟನೆಯ ಉದಯೋನ್ಮುಖ ಯುವಕ ಜ್ಞಾನೇಶ್ ದೇರಳಕಟ್ಟೆ, ಎಲ್ಲರಿಗೂ ಸುಲಭವಾಗುವ ರೀತಿಯಲ್ಲಿ ಟೆಲಿಗ್ರಾಂ ಎನ್ನುವ ತಂತ್ರಾಂಶದಲ್ಲಿ ಟೆಲಿಬರವು ಅನ್ನು ಅಳವಡಿಸಿ ಸಿದ್ದಪಡಿಸಿದ ಈ ತಂತ್ರಾಂಶದ ವಿಶೇಷವೇನೆಂದರೆ, ಕನ್ನಡ ಅಕ್ಷರದಲ್ಲಿ ಬರೆದು ಕಳಿಸಿದರೆ ತುಳು ಅಕ್ಷರವಾ ಮಾರ್ಪಾಡಾಗಿ ಪಾರದರ್ಶಕ ಚಿತ್ರ(transparent png format image)ವಾಗಿ ನಿಮಗೆ ಸಿಗುತ್ತದೆ. ಈ ಚಿತ್ರವನ್ನು ಸುಲಭವಾಗಿ ಫೋಟೊ ಎಡಿಟಿಂಗ್ ಮಾಡಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು