11:03 PM Monday22 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ: ಆರ್ಥಿಕವಾಗಿ ಸಬಲರಾಗಲು ಶಾಸಕ ಡಾ. ಭರತ್ ಶೆಟ್ಟಿ ಕರೆ

17/09/2024, 19:38

ಸುರತ್ಕಲ್ (reporterkarnataka.com): ವಿಶ್ವಕರ್ಮ ಜಯಂತಿಯ ಪ್ರಯುಕ್ತ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘ ಸುರತ್ಕಲ್, ಪಣಂಬೂರು ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘ ಕೃಷ್ಣಾಪುರ, ವಿಶ್ವ ಬ್ರಹ್ಮಾಣ ಸಂಘ ಕೈಕಂಬ ಕಿನ್ನಿ ಕಂಬ್ಲ ವತಿಯಿಂದ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ ನಡೆಯಿತು.
ಕಾರ್ಯಕ್ರಮದಲ್ಲಿ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ಭಾಗವಹಿಸಿ ಪ್ರಸಾದ ಸ್ವೀಕರಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಅಮೋಘ ಕಾಣಿಕೆ ನೀಡುತ್ತಿರುವ ವಿಶ್ವಕರ್ಮ ಸಮಾಜದ ಕೊಡುಗೆ ಅಪಾರವಾಗಿದೆ ಎಂದು ಬಣ್ಣಿಸಿದರು.
ನಾಗರಿಕ ಸಮಾಜ ನಿರ್ಮಾಣಕ್ಕೆ ಅವಶ್ಯವಿರುವ ಪಂಚ ಕಸುಬುಗಳೊಂದಿಗೆ ಎಲ್ಲ ಜಾತಿ ಮತ್ತು ವರ್ಗಗಳ ಜನರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದುವ ಮೂಲಕ ತಮ್ಮದೇ ಕೊಡುಗೆ ನೀಡುತ್ತಿರುವ ವಿಶ್ವಕರ್ಮರು ಸಂಘಟಿತರಾಗಬೇಕಿದೆ. ಸಂವಿಧಾನ ಬದ್ಧವಾಗಿ ದೊರೆಯಲೇ ಬೇಕಾಗಿರುವ ಸೌಲಭ್ಯಗಳನ್ನು ಕೇಳಿ ಪಡೆದು ಆರ್ಥಿಕವಾಗಿ ಸಬಲೀಕರಣ ಸಾಧಿಸಿ ಅಭಿವೃದ್ಧಿಯ ಪಥದತ್ತ ಸಾಗಬೇಕು ಎಂದು ಸಲಹೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು