9:09 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಶ್ರೀ ವಿಠೋಭ ರುಕುಮಾಯಿ ದೇವಸ್ಥಾನ: ಎಲ್ ಇಡಿಯಲ್ಲಿ ರಾಮ ಪ್ರಾಣ ಪ್ರತಿಷ್ಠೆಯ ನೇರ ಪ್ರಸಾರ, ಭಜನೆ, ಅನ್ನಸಂತರ್ಪಣೆ

22/01/2024, 19:43

ಮಂಗಳೂರು(reporterkarnataka.com): ನಗರದ ವಿ.ಟಿ.ರಸ್ತೆಯಲ್ಲಿರುವ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದ ಆವರಣದಲ್ಲಿ ಎಲ್ ಇಡಿ ಪರದೆಯಲ್ಲಿ ಅಯೋಧ್ಯೆಯ ರಾಮಪ್ರಾಣ ಪ್ರತಿಷ್ಠೆಯ ನೇರಪ್ರಸಾರವನ್ನು ಭಕ್ತರು ನೋಡುವ ವ್ಯವಸ್ಥೆ ಮಾಡಲಾಗಿತ್ತು.

ನೂರಾರು ಸಂಖ್ಯೆಯಲ್ಲಿ ದೇವಸ್ಥಾನದ ಆವರಣದಲ್ಲಿ ರಾಮಭಕ್ತರು ಉಪಸ್ಥಿತರಿದ್ದು, ನೇರಪ್ರಸಾರವನ್ನು ವೀಕ್ಷಿಸಿದರು.
ದೇವಸ್ಥಾನಕ್ಕೆ ಆಗಮಿಸಿದ ಭಕ್ತರಿಗೆ ಮಾತ್ರವಲ್ಲ ರಸ್ತೆಯಲ್ಲಿ ಸಂಚರಿಸುವ ನಾಗರಿಕರಿಗೆ, ವಾಹನಗಳಲ್ಲಿ‌ ಪ್ರಯಾಣಿಸುವ ಜನರಿಗೂ ಶ್ರೇಯಾ ಸ್ವೀಟ್ಸ್ ವತಿಯಿಂದ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿತ್ತು. ದೇವಸ್ಥಾನದಲ್ಲಿ ಬೆಳಿಗ್ಗೆ 8 ಗಂಟೆಯಿಂದಲೇ ಭಜನೆ ಆರಂಭವಾಗಿತ್ತು. ಅಬಾಲವೃದ್ಧರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜೈ ಶ್ರೀರಾಮ್ ಘೋಷಣೆಗಳನ್ನು ಹಾಕಿದರು. ಮಧ್ಯಾಹ್ನ ಪೂಜೆಯ ಬಳಿಕ ಭಕ್ತರಿಗೆ ಭೋಜನ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.
ದೇವಳದ ಆಡಳಿತ ಮೋಕ್ತೇಸರರು, ಟ್ರಸ್ಟಿಗಳು, ಭಕ್ತರು, ಗಣ್ಯರು ಉಪಸ್ಥಿತರಿದ್ದರು. ರಾತ್ರಿ ಪೂಜೆಯ ನಂತರ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು