11:19 PM Friday30 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಶ್ರೀ ವಿಠೋಭ ರುಕುಮಾಯಿ ದೇವಸ್ಥಾನ: ಎಲ್ ಇಡಿಯಲ್ಲಿ ರಾಮ ಪ್ರಾಣ ಪ್ರತಿಷ್ಠೆಯ ನೇರ ಪ್ರಸಾರ, ಭಜನೆ, ಅನ್ನಸಂತರ್ಪಣೆ

22/01/2024, 19:43

ಮಂಗಳೂರು(reporterkarnataka.com): ನಗರದ ವಿ.ಟಿ.ರಸ್ತೆಯಲ್ಲಿರುವ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದ ಆವರಣದಲ್ಲಿ ಎಲ್ ಇಡಿ ಪರದೆಯಲ್ಲಿ ಅಯೋಧ್ಯೆಯ ರಾಮಪ್ರಾಣ ಪ್ರತಿಷ್ಠೆಯ ನೇರಪ್ರಸಾರವನ್ನು ಭಕ್ತರು ನೋಡುವ ವ್ಯವಸ್ಥೆ ಮಾಡಲಾಗಿತ್ತು.

ನೂರಾರು ಸಂಖ್ಯೆಯಲ್ಲಿ ದೇವಸ್ಥಾನದ ಆವರಣದಲ್ಲಿ ರಾಮಭಕ್ತರು ಉಪಸ್ಥಿತರಿದ್ದು, ನೇರಪ್ರಸಾರವನ್ನು ವೀಕ್ಷಿಸಿದರು.
ದೇವಸ್ಥಾನಕ್ಕೆ ಆಗಮಿಸಿದ ಭಕ್ತರಿಗೆ ಮಾತ್ರವಲ್ಲ ರಸ್ತೆಯಲ್ಲಿ ಸಂಚರಿಸುವ ನಾಗರಿಕರಿಗೆ, ವಾಹನಗಳಲ್ಲಿ‌ ಪ್ರಯಾಣಿಸುವ ಜನರಿಗೂ ಶ್ರೇಯಾ ಸ್ವೀಟ್ಸ್ ವತಿಯಿಂದ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿತ್ತು. ದೇವಸ್ಥಾನದಲ್ಲಿ ಬೆಳಿಗ್ಗೆ 8 ಗಂಟೆಯಿಂದಲೇ ಭಜನೆ ಆರಂಭವಾಗಿತ್ತು. ಅಬಾಲವೃದ್ಧರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜೈ ಶ್ರೀರಾಮ್ ಘೋಷಣೆಗಳನ್ನು ಹಾಕಿದರು. ಮಧ್ಯಾಹ್ನ ಪೂಜೆಯ ಬಳಿಕ ಭಕ್ತರಿಗೆ ಭೋಜನ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.
ದೇವಳದ ಆಡಳಿತ ಮೋಕ್ತೇಸರರು, ಟ್ರಸ್ಟಿಗಳು, ಭಕ್ತರು, ಗಣ್ಯರು ಉಪಸ್ಥಿತರಿದ್ದರು. ರಾತ್ರಿ ಪೂಜೆಯ ನಂತರ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು