12:10 PM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಶ್ರೀಕಾಂತ್ ಪೂಜಾರಿಯನ್ನು ತಿರುಗಾಡಲು ಬಿಟ್ಟರೆ ಶ್ರೀರಾಮಚಂದ್ರನೂ ಕ್ಷಮಿಸಲಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

05/01/2024, 22:37

ಬೆಂಗಳೂರು(reporterkarnataka.com):
ರಾಮಭಕ್ತ, ಕರಸೇವಕ ಎಂದು ಸಮಾಜದೆದುರು ನಕಲಿ ವೇಷ ತೊಟ್ಟು ಮೆರೆಯುವ ಶ್ರೀಕಾಂತ ಪೂಜಾರಿ ಕಾನೂನಿನ ದೃಷ್ಟಿಯಲ್ಲಿ ಒಬ್ಬ ಸಮಾಜಘಾತುಕ ವ್ಯಕ್ತಿ. ತನ್ನ ಅಪರಾಧ ಕೃತ್ಯಗಳಿಂದ ರಕ್ಷಣೆ ಸಿಗಲಿ ಎಂಬ ಕಾರಣಕ್ಕೆ ಧರ್ಮರಕ್ಷಣೆ ನಾಟಕವಾಡುವ ಇಂಥವರನ್ನು ಬಂಧಿಸದೆ, ರಾಜಾರೋಷವಾಗಿ ತಿರುಗಾಡಲು ಬಿಟ್ಟರೆ ಶ್ರೀರಾಮಚಂದ್ರನೂ ಕ್ಷಮಿಸಲಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅಕ್ರಮ ಸಾರಾಯಿ ಮಾರಾಟ, ದೊಂಬಿ, ಮಟಕಾ, ಜೂಜಾಟ ಮುಂತಾದ 16 ಸಮಾಜ ಘಾತುಕ ಕೃತ್ಯಗಳಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ವ್ಯಕ್ತಿಯ ಪರವಾಗಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರು ಈತನ ಎಲ್ಲಾ ಅಪರಾಧ ಕೃತ್ಯಗಳಿಗೆ ತಮ್ಮ ಪಕ್ಷದ ಬೆಂಬಲವಿದೆ ಎಂಬುದನ್ನು ಬಹಿರಂಗವಾಗಿ ಹೇಳಲಿ ಅಥವಾ ಪ್ರತಿಭಟನೆ ಕೈಬಿಟ್ಟು ಸಾರ್ವಜನಿಕವಾಗಿ ಕ್ಷಮೆ ಕೋರಲಿ ಎಂದು ಅವರು ಎಕ್ಸ್(ಟ್ವಿಟರ್)ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.
ಕಳೆದ 2023ನೇ ಸಾಲಿನಲ್ಲಿ ಹುಬ್ಬಳ್ಳಿ – ಧಾರವಾಡ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ, ಕಳ್ಳತನ, ಸುಲಿಗೆ, ವಂಚನೆ, ದೊಂಬಿ ಮುಂತಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಎಲ್.ಪಿ.ಸಿ ( ಕಾನೂನು ವಿಚಾರಣಾ ಪ್ರಮಾಣಪತ್ರ ) ಪ್ರಕರಣಗಳಲ್ಲಿ ಒಟ್ಟು 36 ಜನರನ್ನು ದಸ್ತಗಿರಿ ಮಾಡಲಾಗಿದೆ. ಇದರಲ್ಲಿ ಶ್ರೀಕಾಂತ ಪೂಜಾರಿ 32ನೆಯ ವ್ಯಕ್ತಿ. ಈತನನ್ನು ಕರಸೇವಕನೆಂಬ ಕಾರಣಕ್ಕೆ ಹೊರಗಡೆ ಬಿಡಬೇಕೋ? ಅಥವಾ ಆರೋಪಿ ಎಂಬ ಕಾರಣಕ್ಕೆ ಬಂಧಿಸಬೇಕೋ? ಬಿಜೆಪಿಯವರು ಪ್ರತಿಭಟನೆ ನಡೆಸುತ್ತಿರುವುದು ನಮ್ಮ ಸರ್ಕಾರದ ವಿರುದ್ಧವಲ್ಲ, ದೇಶದ ಕಾನೂನು ಮತ್ತು ಸಂವಿಧಾನದ ವಿರುದ್ಧ ಎಂದು ಮುಖ್ಯಮಂತ್ರಿ ತಿರುಗೇಟು ನೀಡಿದ್ದಾರೆ.
ಅಪರಾಧ ಕೃತ್ಯಗಳಲ್ಲಿ ತೊಡಗುವವರು ಧರ್ಮರಕ್ಷಕರು ಎಂದು ಹೇಳಿಕೊಂಡು ಕೊಲೆ, ಸುಲಿಗೆಗಳಿಗೆ ಇಳಿದರೆ ಅದನ್ನೂ ಬಿಜೆಪಿ ನಾಯಕರು ಬೆಂಬಲಿಸುತ್ತಾರೆಯೇ?
ರಾಮಮಂದಿರದ ಉದ್ಘಾಟನೆ ವೇಳೆ ಶ್ರೀಕಾಂತ ಪೂಜಾರಿಯ ಬಂಧನವಾಗಿರುವುದು ಕಾಕತಾಳೀಯ ಅಷ್ಟೆ. ಹಳೆಯ ಪ್ರಕರಣಗಳನ್ನು ಪರಿಶೀಲನೆ ನಡೆಸುವ ವೇಳೆ ಪೊಲೀಸರು ಇತರೆ 36 ಜನರ ಜೊತೆಗೆ ಇವರನ್ನು ಕೂಡ ಬಂಧಿಸಿದ್ದಾರೆ. ಇದರಲ್ಲಿ ಪ್ರತೀಕಾರವೂ ಇಲ್ಲ, ತುಷ್ಟೀಕರಣವೂ ಇಲ್ಲ. ಕಾನೂನು ಪಾಲನೆ ಮಾಡಬೇಕು, ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು