3:46 AM Thursday13 - August 2026
ಬ್ರೇಕಿಂಗ್ ನ್ಯೂಸ್
ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ

ಇತ್ತೀಚಿನ ಸುದ್ದಿ

ಶ್ರೀರಾಮ ನಮ್ಮ ಅಸ್ಮಿತೆ, ಆರೋಪಿಗಳ ಪರ ಯಾರೂ ನಿಲ್ಲುವಂತಿಲ್ಲ: ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ; ಫೈಜಾಬಾದ್ ಬಾರ್ ಕೌನ್ಸಿಲ್ ಖಡಕ್ ಆದೇಶ

29/06/2026, 17:22

ಅಯೋಧ್ಯೆ(reporterkarnataka.com): ಹಿಂದೂಗಳ ಅಸ್ಮಿತೆ ಎಂದೇ ಕರೆಯಲಾಗುವ ಅಯೋಧ್ಯಾ ರಾಮ ಮಂದಿರದ ದೇಣಿಗೆ ಹಣದಲ್ಲಿ ಅಕ್ರಮ ನಡೆದಿದೆ ಎನ್ನುವ ಸುದ್ದಿ ದೇಶಾದ್ಯಂತ ಚರ್ಚೆಗೆ ಕಾರಣವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸುಮಾರು ಎಂಟು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ಮುಂದುವರಿಸಿದ್ದಾರೆ. ಈಗ ಈ ಬಂಧಿತರಾಗಿರುವ ಆರೋಪಿಗಳ ಪರವಾಗಿ ವಕಾಲತ್​ನ್ನು ನಡೆಸದಂತೆ ಅಯೋಧ್ಯಾ ಬಾರ್​ ಕೌಂನ್ಸಿಲ್​ ನಿರ್ಧಾರ ಕೈಗೊಂಡಿದ್ದು, ಈ ನಿರ್ಧಾರವನ್ನು ವಿರೋಧಿಸುವ ವಕೀಲರಿಗೆ 5 ಲಕ್ಷ ದಂಡವನ್ನು ವಿಧಿಸುವುದಾಗಿ ಎಚ್ಚರಿಕೆ ನೀಡಲಾಗಿದೆ.
ಸೋಮವಾರ (ಜೂ.29) ಅಯೋಧ್ಯಾ ರಾಮ ಮಂದಿರದ ಬಗ್ಗೆ ಕೇಳಿ ಬಂದಿರುವ ಆರೋಪಗಳು ನಮ್ಮ ಅರಿವಿಗೆ ಬಂದಿದೆ. ಆದರೆ ಆರೋಪಿಗಳೆಂದು ಬಂಧಿಸಲಾಗಿರುವವರ ಪರವಾಗಿ ಅಯೋಧ್ಯಾ ಹಾಗೂ ಫೈಜಾಬಾದ್​ ಜಿಲ್ಲೆಯ ಯಾವುದೇ ವಕೀಲರು ವಕಾಲತ್​ ನಾಮವನ್ನು ಸಲ್ಲಿಸುವಂತಿಲ್ಲ. ಅಂತೆಯೇ ಅವರ ಪರವಾಗಿ ವಾದ ಮಂಡಿಸುವಂತಿಲ್ಲ ಎಂದು ಬಾರ್​ ಅಸೋಸಿಯೇಶನ್​ ಆದೇಶಿಸಿದೆ. ಈ ಆದೇಶವನ್ನು ಧಿಕ್ಕರಿಸುವ ವಕೀಲನಿಗೆ 5 ಲಕ್ಷ ದಂಡವನ್ನು ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ. ನಾವು ದೇವಸ್ಥಾನದ ಪರವಿದ್ದೆವೆ
ಅಯೋಧ್ಯಾ ರಾಮ ಮಂದಿರಕ್ಕೆ ಹರಿದು ಬಂದಿರುವ ದೇಣಿಗೆಯಲ್ಲಿ ಅಕ್ರಮ ನಡೆಸಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ಈ ಕುರಿತು ಈಗಾಗಲೇ ಹಲವರು ಬಂಧನಕ್ಕೆ ಒಳಗಾಗಿದ್ದಾರೆ. ಪ್ರಭು ಶ್ರೀರಾಮನ ಮಂದಿರ ನಮ್ಮೆಲ್ಲರ ಅಸ್ಮಿತೆ. ನಮ್ಮ ಅಸ್ಮಿತೆಗೆ ತೊಂದರೆ ಉಂಟಾದರೆ ನಾವು ಸುಮ್ಮನಿರುವುದಿಲ್ಲ. ನಾವು ಕೇವಲ ದೇವಸ್ಥಾನ ಪರವಾಗಿ ಮಾತ್ರ ನಿಲ್ಲುತ್ತೆವೆ, ನ್ಯಾಯಾಲಯದಲ್ಲಿ ಹೋರಾಡುತ್ತೆವೆಂದು ಬಾರ್​ ಕೌಂನ್ಸಿಲ್​ನಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ.
ಅಯೋಧ್ಯೆಯ ಶ್ರೀರಾಮನ ಮಂದಿರದ ದೇಣಿಗೆಯಲ್ಲಿ ಭಾರಿ ಅಕ್ರಮ ನಡೆದಿದೆ ಈ ಕುರಿತು ತುರ್ತು ವಿಚಾರಣೆ ನಡೆಯಬೇಕೆಂದು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್​ ಸೋಮವಾರ (ಜೂ.29) ವಜಾ ಮಾಡಿದೆ. ಈಗ ನ್ಯಾಯಾಲಯ ರಜಾಪೀಠದಲ್ಲಿದೆ. ಇದನ್ನು ಬೇಸಿಗೆ ರಜೆ ಮುಗಿದ ನಂತರ ಪಟ್ಟಿ ಮಾಡಲಾಗುವುದು, ಮೊದಲು ಪೊಲೀಸ್​ ತನಿಖೆ ಆಗಲಿ, ಇಷ್ಟು ಆತುರದ ಅಗತ್ಯವಿಲ್ಲ ಎಂದು ನ್ಯಾಯಮೂರ್ತಿಗಳಾದ ಎಂ. ಎಂ. ಸುಂದರೇಶ್ ಮತ್ತು ಶೀಲ್ ನಾಗು ಅವರ ನ್ಯಾಯಪೀಠ ಅಭಿಪ್ರಾಯ ಪಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು