4:40 PM Thursday17 - July 2025
ಬ್ರೇಕಿಂಗ್ ನ್ಯೂಸ್
ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ…

ಇತ್ತೀಚಿನ ಸುದ್ದಿ

ಶ್ರೀನಿವಾಸ್ ಪ್ರಸಾದ್ ಗೆ ನುಡಿ ನಮನ ಸಲ್ಲಿಸಿ ಕಣ್ಣೀರಿಟ್ಟ ಬದನವಾಳು ಗ್ರಾಮಸ್ಥರು

11/05/2024, 18:08

ಮೋಹನ್ ನಂಜನಗೂಡು‌ ಮೈಸೂರು

info.reporterkarnataka@gmail.com
ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಸಂಸದ ದಿವಂಗತ ವಿ. ಶ್ರೀನಿವಾಸ್ ಪ್ರಸಾದ್ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಪ್ರಸಾದ್ ನೆನೆದು ಗ್ರಾಮಸ್ಥರು
ಕಣ್ಣೀರಿಟ್ಟಿದ್ದಾರೆ.


ಡಾ.ಬಿ.ಆರ್ ಅಂಬೇಡ್ಕರ್ ಯುವಕರ ಸಂಘ ಮತ್ತು ಶ್ರೀನಿವಾಸ್ ಪ್ರಸಾದ್ ಅಭಿಮಾನಿಗಳ ಬಳಗ ಹಾಗೂ ಗ್ರಾಮಸ್ಥರು ಆಯೋಜನೆ ಮಾಡಲಾಗಿದ್ದ ಶ್ರೀನಿವಾಸ ಪ್ರಸಾದ್ ರವರ ನುಡಿ ನಮನ ಕಾರ್ಯಕ್ರಮದಲ್ಲಿ ಪ್ರಸಾದ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಜ್ಯೋತಿ ಬೆಳಗಿಸಿ ಮೌನಾಚರಣೆ ಮಾಡಲಾಯಿತು.
ಮಾಜಿ ತಾ.ಪಂ ಸದಸ್ಯ ಬಿ.ಎಸ್ ರಾಮು ಮಾತನಾಡಿ, ಶ್ರೀನಿವಾಸ್ ಪ್ರಸಾದ್ ರವರ ಕಳೆದುಕೊಂಡು ನಾವು ತಬ್ಬಲಿ ಮಕ್ಕಳಾಗಿದ್ದೇವೆ. ರಾಜ್ಯಕ್ಕೆ ಮತ್ತು ರಾಷ್ಟ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಬದನವಾಳು ಕೊಲೆ ಪ್ರಕರಣದಲ್ಲಿ ಶ್ರೀನಿವಾಸ್ ಪ್ರಸಾದ್ ರವರು ಬೆನ್ನೆಲುಬಾಗಿ ನಿಂತು ನಮಗೆ ನ್ಯಾಯವನ್ನು ನೀಡಿದರು. ಬದನವಾಳಿಗೂ ಶ್ರೀನಿವಾಸ್ ಪ್ರಸಾದ್ ರವರಿಗೂ 40 ವರ್ಷಗಳ ಕಾಲ ನಂಟಿದೆ. ನಮ್ಮ ಮೈಸೂರು ಪ್ರಾಂತ್ಯದಲ್ಲಿ ದಲಿತ ನಾಯಕತ್ವ ಮರೆಯಾಗುತ್ತಿದೆ. ಹಾಗಾಗಿ ಬದನವಾಳು ಗ್ರಾಮದಲ್ಲಿ ಒಂದು ರಸ್ತೆಗೆ ಅವರ ಹೆಸರನ್ನು ನಾಮಕರಣ ಮಾಡುತ್ತೇವೆ ಎಂದು ಹೇಳಿದರು.
ನುಡಿ ನಮನ ಕಾರ್ಯಕ್ರಮದಲ್ಲಿ ಗೀತಾ ಗಾಯನದಲ್ಲಿ ಪ್ರಸಾದ್ ನೆನೆದು ಗ್ರಾಮಸ್ಥರುಕಣ್ಣೀರಿಟ್ಟಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ತಾಪಂ ಅಧ್ಯಕ್ಷ ನಾಗೇಶ್ ರಾಜ್, ಸಾಹಿತಿ ಮಲ್ಕುಂಡಿ ಮಹದೇವಸ್ವಾಮಿ, ಶ್ರೀನಿವಾಸ್ ಪ್ರಸಾದ್ ರವರ ಸಹೋದರ ರಾಮಸ್ವಾಮಿ, ಪ್ರೊ‌. ಕುಮಾರಸ್ವಾಮಿ, ಕುಂಬ್ರಹಳ್ಳಿ ಸುಬ್ಬಣ್ಣ, ದೊರೆಸ್ವಾಮಿ, ಗ್ರಾಪಂ ಸದಸ್ಯರಾದ ಶಿವರಾಮ್, ಮಹದೇವ್, ಮುಖಂಡರಾದ ಸೋಮಣ್ಣ, ಸುರೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು