6:43 AM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಶ್ರೀನಿವಾಸ್ ಪ್ರಸಾದ್ ಗೆ ನುಡಿ ನಮನ ಸಲ್ಲಿಸಿ ಕಣ್ಣೀರಿಟ್ಟ ಬದನವಾಳು ಗ್ರಾಮಸ್ಥರು

11/05/2024, 18:08

ಮೋಹನ್ ನಂಜನಗೂಡು‌ ಮೈಸೂರು

info.reporterkarnataka@gmail.com
ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಸಂಸದ ದಿವಂಗತ ವಿ. ಶ್ರೀನಿವಾಸ್ ಪ್ರಸಾದ್ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಪ್ರಸಾದ್ ನೆನೆದು ಗ್ರಾಮಸ್ಥರು
ಕಣ್ಣೀರಿಟ್ಟಿದ್ದಾರೆ.


ಡಾ.ಬಿ.ಆರ್ ಅಂಬೇಡ್ಕರ್ ಯುವಕರ ಸಂಘ ಮತ್ತು ಶ್ರೀನಿವಾಸ್ ಪ್ರಸಾದ್ ಅಭಿಮಾನಿಗಳ ಬಳಗ ಹಾಗೂ ಗ್ರಾಮಸ್ಥರು ಆಯೋಜನೆ ಮಾಡಲಾಗಿದ್ದ ಶ್ರೀನಿವಾಸ ಪ್ರಸಾದ್ ರವರ ನುಡಿ ನಮನ ಕಾರ್ಯಕ್ರಮದಲ್ಲಿ ಪ್ರಸಾದ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಜ್ಯೋತಿ ಬೆಳಗಿಸಿ ಮೌನಾಚರಣೆ ಮಾಡಲಾಯಿತು.
ಮಾಜಿ ತಾ.ಪಂ ಸದಸ್ಯ ಬಿ.ಎಸ್ ರಾಮು ಮಾತನಾಡಿ, ಶ್ರೀನಿವಾಸ್ ಪ್ರಸಾದ್ ರವರ ಕಳೆದುಕೊಂಡು ನಾವು ತಬ್ಬಲಿ ಮಕ್ಕಳಾಗಿದ್ದೇವೆ. ರಾಜ್ಯಕ್ಕೆ ಮತ್ತು ರಾಷ್ಟ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಬದನವಾಳು ಕೊಲೆ ಪ್ರಕರಣದಲ್ಲಿ ಶ್ರೀನಿವಾಸ್ ಪ್ರಸಾದ್ ರವರು ಬೆನ್ನೆಲುಬಾಗಿ ನಿಂತು ನಮಗೆ ನ್ಯಾಯವನ್ನು ನೀಡಿದರು. ಬದನವಾಳಿಗೂ ಶ್ರೀನಿವಾಸ್ ಪ್ರಸಾದ್ ರವರಿಗೂ 40 ವರ್ಷಗಳ ಕಾಲ ನಂಟಿದೆ. ನಮ್ಮ ಮೈಸೂರು ಪ್ರಾಂತ್ಯದಲ್ಲಿ ದಲಿತ ನಾಯಕತ್ವ ಮರೆಯಾಗುತ್ತಿದೆ. ಹಾಗಾಗಿ ಬದನವಾಳು ಗ್ರಾಮದಲ್ಲಿ ಒಂದು ರಸ್ತೆಗೆ ಅವರ ಹೆಸರನ್ನು ನಾಮಕರಣ ಮಾಡುತ್ತೇವೆ ಎಂದು ಹೇಳಿದರು.
ನುಡಿ ನಮನ ಕಾರ್ಯಕ್ರಮದಲ್ಲಿ ಗೀತಾ ಗಾಯನದಲ್ಲಿ ಪ್ರಸಾದ್ ನೆನೆದು ಗ್ರಾಮಸ್ಥರುಕಣ್ಣೀರಿಟ್ಟಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ತಾಪಂ ಅಧ್ಯಕ್ಷ ನಾಗೇಶ್ ರಾಜ್, ಸಾಹಿತಿ ಮಲ್ಕುಂಡಿ ಮಹದೇವಸ್ವಾಮಿ, ಶ್ರೀನಿವಾಸ್ ಪ್ರಸಾದ್ ರವರ ಸಹೋದರ ರಾಮಸ್ವಾಮಿ, ಪ್ರೊ‌. ಕುಮಾರಸ್ವಾಮಿ, ಕುಂಬ್ರಹಳ್ಳಿ ಸುಬ್ಬಣ್ಣ, ದೊರೆಸ್ವಾಮಿ, ಗ್ರಾಪಂ ಸದಸ್ಯರಾದ ಶಿವರಾಮ್, ಮಹದೇವ್, ಮುಖಂಡರಾದ ಸೋಮಣ್ಣ, ಸುರೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು