11:06 AM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಶ್ರೀನಿವಾಸ್ ಪ್ರಸಾದ್ ಗೆ ನುಡಿ ನಮನ ಸಲ್ಲಿಸಿ ಕಣ್ಣೀರಿಟ್ಟ ಬದನವಾಳು ಗ್ರಾಮಸ್ಥರು

11/05/2024, 18:08

ಮೋಹನ್ ನಂಜನಗೂಡು‌ ಮೈಸೂರು

info.reporterkarnataka@gmail.com
ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಸಂಸದ ದಿವಂಗತ ವಿ. ಶ್ರೀನಿವಾಸ್ ಪ್ರಸಾದ್ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಪ್ರಸಾದ್ ನೆನೆದು ಗ್ರಾಮಸ್ಥರು
ಕಣ್ಣೀರಿಟ್ಟಿದ್ದಾರೆ.


ಡಾ.ಬಿ.ಆರ್ ಅಂಬೇಡ್ಕರ್ ಯುವಕರ ಸಂಘ ಮತ್ತು ಶ್ರೀನಿವಾಸ್ ಪ್ರಸಾದ್ ಅಭಿಮಾನಿಗಳ ಬಳಗ ಹಾಗೂ ಗ್ರಾಮಸ್ಥರು ಆಯೋಜನೆ ಮಾಡಲಾಗಿದ್ದ ಶ್ರೀನಿವಾಸ ಪ್ರಸಾದ್ ರವರ ನುಡಿ ನಮನ ಕಾರ್ಯಕ್ರಮದಲ್ಲಿ ಪ್ರಸಾದ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಜ್ಯೋತಿ ಬೆಳಗಿಸಿ ಮೌನಾಚರಣೆ ಮಾಡಲಾಯಿತು.
ಮಾಜಿ ತಾ.ಪಂ ಸದಸ್ಯ ಬಿ.ಎಸ್ ರಾಮು ಮಾತನಾಡಿ, ಶ್ರೀನಿವಾಸ್ ಪ್ರಸಾದ್ ರವರ ಕಳೆದುಕೊಂಡು ನಾವು ತಬ್ಬಲಿ ಮಕ್ಕಳಾಗಿದ್ದೇವೆ. ರಾಜ್ಯಕ್ಕೆ ಮತ್ತು ರಾಷ್ಟ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಬದನವಾಳು ಕೊಲೆ ಪ್ರಕರಣದಲ್ಲಿ ಶ್ರೀನಿವಾಸ್ ಪ್ರಸಾದ್ ರವರು ಬೆನ್ನೆಲುಬಾಗಿ ನಿಂತು ನಮಗೆ ನ್ಯಾಯವನ್ನು ನೀಡಿದರು. ಬದನವಾಳಿಗೂ ಶ್ರೀನಿವಾಸ್ ಪ್ರಸಾದ್ ರವರಿಗೂ 40 ವರ್ಷಗಳ ಕಾಲ ನಂಟಿದೆ. ನಮ್ಮ ಮೈಸೂರು ಪ್ರಾಂತ್ಯದಲ್ಲಿ ದಲಿತ ನಾಯಕತ್ವ ಮರೆಯಾಗುತ್ತಿದೆ. ಹಾಗಾಗಿ ಬದನವಾಳು ಗ್ರಾಮದಲ್ಲಿ ಒಂದು ರಸ್ತೆಗೆ ಅವರ ಹೆಸರನ್ನು ನಾಮಕರಣ ಮಾಡುತ್ತೇವೆ ಎಂದು ಹೇಳಿದರು.
ನುಡಿ ನಮನ ಕಾರ್ಯಕ್ರಮದಲ್ಲಿ ಗೀತಾ ಗಾಯನದಲ್ಲಿ ಪ್ರಸಾದ್ ನೆನೆದು ಗ್ರಾಮಸ್ಥರುಕಣ್ಣೀರಿಟ್ಟಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ತಾಪಂ ಅಧ್ಯಕ್ಷ ನಾಗೇಶ್ ರಾಜ್, ಸಾಹಿತಿ ಮಲ್ಕುಂಡಿ ಮಹದೇವಸ್ವಾಮಿ, ಶ್ರೀನಿವಾಸ್ ಪ್ರಸಾದ್ ರವರ ಸಹೋದರ ರಾಮಸ್ವಾಮಿ, ಪ್ರೊ‌. ಕುಮಾರಸ್ವಾಮಿ, ಕುಂಬ್ರಹಳ್ಳಿ ಸುಬ್ಬಣ್ಣ, ದೊರೆಸ್ವಾಮಿ, ಗ್ರಾಪಂ ಸದಸ್ಯರಾದ ಶಿವರಾಮ್, ಮಹದೇವ್, ಮುಖಂಡರಾದ ಸೋಮಣ್ಣ, ಸುರೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು