7:31 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಶ್ರೀನಿವಾಸ್ ಪ್ರಸಾದ್ ಗೆ ನುಡಿ ನಮನ ಸಲ್ಲಿಸಿ ಕಣ್ಣೀರಿಟ್ಟ ಬದನವಾಳು ಗ್ರಾಮಸ್ಥರು

11/05/2024, 18:08

ಮೋಹನ್ ನಂಜನಗೂಡು‌ ಮೈಸೂರು

info.reporterkarnataka@gmail.com
ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಸಂಸದ ದಿವಂಗತ ವಿ. ಶ್ರೀನಿವಾಸ್ ಪ್ರಸಾದ್ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಪ್ರಸಾದ್ ನೆನೆದು ಗ್ರಾಮಸ್ಥರು
ಕಣ್ಣೀರಿಟ್ಟಿದ್ದಾರೆ.


ಡಾ.ಬಿ.ಆರ್ ಅಂಬೇಡ್ಕರ್ ಯುವಕರ ಸಂಘ ಮತ್ತು ಶ್ರೀನಿವಾಸ್ ಪ್ರಸಾದ್ ಅಭಿಮಾನಿಗಳ ಬಳಗ ಹಾಗೂ ಗ್ರಾಮಸ್ಥರು ಆಯೋಜನೆ ಮಾಡಲಾಗಿದ್ದ ಶ್ರೀನಿವಾಸ ಪ್ರಸಾದ್ ರವರ ನುಡಿ ನಮನ ಕಾರ್ಯಕ್ರಮದಲ್ಲಿ ಪ್ರಸಾದ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಜ್ಯೋತಿ ಬೆಳಗಿಸಿ ಮೌನಾಚರಣೆ ಮಾಡಲಾಯಿತು.
ಮಾಜಿ ತಾ.ಪಂ ಸದಸ್ಯ ಬಿ.ಎಸ್ ರಾಮು ಮಾತನಾಡಿ, ಶ್ರೀನಿವಾಸ್ ಪ್ರಸಾದ್ ರವರ ಕಳೆದುಕೊಂಡು ನಾವು ತಬ್ಬಲಿ ಮಕ್ಕಳಾಗಿದ್ದೇವೆ. ರಾಜ್ಯಕ್ಕೆ ಮತ್ತು ರಾಷ್ಟ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಬದನವಾಳು ಕೊಲೆ ಪ್ರಕರಣದಲ್ಲಿ ಶ್ರೀನಿವಾಸ್ ಪ್ರಸಾದ್ ರವರು ಬೆನ್ನೆಲುಬಾಗಿ ನಿಂತು ನಮಗೆ ನ್ಯಾಯವನ್ನು ನೀಡಿದರು. ಬದನವಾಳಿಗೂ ಶ್ರೀನಿವಾಸ್ ಪ್ರಸಾದ್ ರವರಿಗೂ 40 ವರ್ಷಗಳ ಕಾಲ ನಂಟಿದೆ. ನಮ್ಮ ಮೈಸೂರು ಪ್ರಾಂತ್ಯದಲ್ಲಿ ದಲಿತ ನಾಯಕತ್ವ ಮರೆಯಾಗುತ್ತಿದೆ. ಹಾಗಾಗಿ ಬದನವಾಳು ಗ್ರಾಮದಲ್ಲಿ ಒಂದು ರಸ್ತೆಗೆ ಅವರ ಹೆಸರನ್ನು ನಾಮಕರಣ ಮಾಡುತ್ತೇವೆ ಎಂದು ಹೇಳಿದರು.
ನುಡಿ ನಮನ ಕಾರ್ಯಕ್ರಮದಲ್ಲಿ ಗೀತಾ ಗಾಯನದಲ್ಲಿ ಪ್ರಸಾದ್ ನೆನೆದು ಗ್ರಾಮಸ್ಥರುಕಣ್ಣೀರಿಟ್ಟಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ತಾಪಂ ಅಧ್ಯಕ್ಷ ನಾಗೇಶ್ ರಾಜ್, ಸಾಹಿತಿ ಮಲ್ಕುಂಡಿ ಮಹದೇವಸ್ವಾಮಿ, ಶ್ರೀನಿವಾಸ್ ಪ್ರಸಾದ್ ರವರ ಸಹೋದರ ರಾಮಸ್ವಾಮಿ, ಪ್ರೊ‌. ಕುಮಾರಸ್ವಾಮಿ, ಕುಂಬ್ರಹಳ್ಳಿ ಸುಬ್ಬಣ್ಣ, ದೊರೆಸ್ವಾಮಿ, ಗ್ರಾಪಂ ಸದಸ್ಯರಾದ ಶಿವರಾಮ್, ಮಹದೇವ್, ಮುಖಂಡರಾದ ಸೋಮಣ್ಣ, ಸುರೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು