8:30 AM Sunday13 - July 2025
ಬ್ರೇಕಿಂಗ್ ನ್ಯೂಸ್
ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ…

ಇತ್ತೀಚಿನ ಸುದ್ದಿ

ಶ್ರೀನಿವಾಸಪುರ: ಬೈಲಾ ಗಾಳಿಗೆ ತೂರಿ ಡಿಸಿಸಿ ಬ್ಯಾಂಕ್‌ ನಿಂದ ಸಹಕಾರ ಸಂಘಗಳಿಗೆ ಸಾಲ ವಿತರಣೆ ಆರೋಪ

11/08/2022, 20:41

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಬೈಲಾ ಗಾಳಿಗೆ ತೂರಿ ಡಿಸಿಸಿ ಬ್ಯಾಂಕ್‌ ವತಿಯಿಂದ ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರ ನೇತೃತ್ವದಲ್ಲಿ ಸಹಕಾರ ಸಂಘಗಳಿಗೆ ಸಾಲ ವಿತರಣೆ ಮಾಡಲಾಗುತ್ತಿದೆ ಎಂದು ಮಾಜಿ ಶಾಸಕ ಹಾಗೂ ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ಜಿ.ಕೆ.ವೆಂಕಟಶಿವಾ ರೆಡ್ಡಿ ಆಪಾದಿಸಿದ್ದಾರೆ.

ಶ್ರೀನಿವಾಸಪುರದ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಆ .೧೦ ರಂದು ಶ್ರೀನಿವಾಸಪುರದ ಮಾವಿನ ಕಾಯಿ ಮಂಡಿಯೊಂದರಲ್ಲಿ ಏರ್ಪಡಿಸಿದ್ದ ಸಾಲ ವಿತರಣಾ ಸಮಾರಂಭದಲ್ಲಿ ತಾಲ್ಲೂಕಿನ ಯಲ್ಲೂರು , ಮಣಿಗಾನಹಳ್ಳಿ , ದಳಸನೂರು ಹಾಗೂ ಅಡ್ಡಗಲ್ ಸಹಕಾರ ಸಂಘಗಳ ವ್ಯಾಪ್ತಿಗೆ ಬರುವ ೩೭೬ ಸ್ತ್ರೀ ಶಕ್ತಿ ಸಂಘಗಳಿಗೆ ರೂ . ೧೮.೫೪ ಕೋಟಿ ಸಾಲ ವಿತರಣೆ ಮಾಡಲಾಗಿದೆ. ಸಂಘಗಳ ಕಾರ್ಯದರ್ಶಿಗಳ ಮೇಲೆ ಒತ್ತಡ ಹೇರಿ ಸದಸ್ಯರನ್ನು ಸಭೆಗೆ ಕರೆಸಿಕೊಳ್ಳಲಾಗಿದೆ ಹಾಗೂ ಸಾಲ ವಿತಣಾ ಸಮಾರಂಭಕ್ಕೆ ಸುಮಾರು ರೂ .೩.೫೦ ಲಕ್ಷ ವೆಚ್ಚ ಮಾಡಲಾಗಿದೆ ಎಂದು ಹೇಳಿದರು. 

ನಬಾರ್ಡ್ ಹಾಗೂ ಅಪೆಕ್ಸ್ ಬ್ಯಾಂಕ್‌ ನೀಡುವ ಹಣದಿಂದ ಡಿಸಿಸಿ ಬ್ಯಾಂಕ್ ಬಡ್ಡಿರಹಿತ ಸಾಲ ನೀಡುತ್ತಿದೆ. ಆದರೆ ತಾಲ್ಲೂಕಿನ ಶಾಸಕರು ಸ್ವಂತ ಹಣ ನೀಡಿದಂತೆ ಬಿಂಬಿಸಿಕೊಳ್ಳುತ್ತಿದ್ದಾರೆ . ಹಾಗೇನಾದರೂ ಕೊಡುವುದಾದರೆ, ಅವರೇ ಹೇಳಿರುವಂತೆ ಮೂರು ನಾಲ್ಕು ತಲೆಮಾರಿಗೆ ಸಾಕಾಗುಷ್ಟು ಮಾಡಲಾಗಿರುವ ಸಂಪಾದನೆಯಲ್ಲಿ ನೀಡಲಿ ಎಂದು ಕುಟುಕಿದರು.

ಸ್ತ್ರೀ ಶಕ್ತಿ ಸಂಘಗಳ ಬಗ್ಗೆ ನನಗೆ ಗೌರವವಿದೆ . ಸಂಘಗಳಿಗೆ ಸಾಲ ನೀಡುವ ಬಗ್ಗೆ ಯಾವುದೇ ಆಕ್ಷೇಪ ಇಲ್ಲ . ಮಹಿಳೆಯರ ಸಬಲೀಕರಣ ಆಗಲೇಕು . ಆದರೆ ಅವರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುವುದನ್ನು ವಿರೋಧಿಸುತ್ತೇನೆ ಎಂದು ಹೇಳಿದರು . ಕಸಬಾ ಬ್ಯಾಂಕ್ ಶಾಖೆ ಸೇರಿದಂತೆ ತಾಲ್ಲೂಕಿನ ಕೆಲವು ಬ್ಯಾಂಕ್‌ಗಳಲ್ಲಿ ಕೆಲವು ಪ್ರಭಾವಿಗಳು ಪಡೆದುಕೊಂಡಿರುವ ಸಾಲ ಮರುಪಾವತಿಯಾಗಿಲ್ಲ . ಸ್ತ್ರೀ ಶಕ್ತಿ ಸಂಘಗಳಿಂದ ಸಂಗ್ರಹಿಸಲಾಗಿರುವ ಶೇರು ಹಣಕ್ಕೆ ಲೆಕ್ಕವಿಲ್ಲ . ಈ ಬಗ್ಗೆ ತನಿಖೆ ಆಗಬೇಕು ಎಂದು ಒತ್ತಾಯಿಸಿದರು . ಕೆ.ಆರ್.ರಮೇಶ್ ಕುಮಾರ್ ಅವರು ನೀಡಿರುವ ಆಶ್ವಾಸನೆಗಳು ಆಶ್ವಾಸನೆಗಳಾಗಿಯೇ ಉಳಿದಿವೆ . ಸಮಯ ಇದ್ದಾಗ ಸುಮ್ಮನಿದ್ದ ಅವರು , ಚುನಾವಣೆ ಹತ್ತಿರವಾಗುತ್ತಿದ್ದಂತೆ ಹಾರಾಟ ಮಾಡುತ್ತಿದ್ದಾರೆ . ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಚ್.ಡಿ.ಕುಮಾರಸ್ವಾಮಿ ಎಂದು ಹೇಳಿದರು .ಅವರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ . ಅವರು ಬಾಯಿಬಿಟ್ಟರೆ ಶಾಸಕರ ಬಣ್ಣ ಬಯಲಾಗುತ್ತದೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತೂಪಲ್ಲಿ ಆರ್‌.ನಾರಾಯಣಸ್ವಾಮಿ , ಪುರಸಭಾ ಸದಸ್ಯ ಬಿ.ವೆಂಕಟರೆಡ್ಡಿ , ಮುಖಂಡರಾದ ಪೂಲ ಶಿವಾರೆಡ್ಡಿ , ಏಜಾಜ್ ಪಾಷ , ಸುಬ್ಬರೆಡ್ಡಿ , ನಾರಾಯಣಸ್ವಾಮಿ , ಏನಾಜ್ ಖಾನ್ , ಮನು ಮತ್ತಿತರರು ಇದ್ದರು 

ಇತ್ತೀಚಿನ ಸುದ್ದಿ

ಜಾಹೀರಾತು