7:49 PM Monday18 - May 2026
ಬ್ರೇಕಿಂಗ್ ನ್ಯೂಸ್
ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್…

ಇತ್ತೀಚಿನ ಸುದ್ದಿ

ಶ್ರೀನಿವಾಸಪುರ: ಆಮ್ ಆದ್ಮಿ ಪಾರ್ಟಿ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

24/09/2022, 23:53

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಜನರು ಆರೋಗ್ಯ ತಪಾಸಣೆಗೆ ಒಳಗಾಗುವುದರ ಮೂಲಕ ಸಂಭವನೀಯ ಅನಾರೋಗ್ಯದಿಂದ ಮುಕ್ತರಾಗಬೇಕು ಎಂದು ವೆಂಕಟೇಶ್ವರ ಗ್ರಾಮೀಣ ಆರೋಗ್ಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಹಾಗೂ ಎಎಪಿ ಮುಖಂಡ ಡಾ . ವೈ.ವಿ.ವೆಂಕಟಾಚಲ ಹೇಳಿದರು. 

ಪಟ್ಟಣದ ಸಂತೆ ಮೈದಾನದಲ್ಲಿ ಶನಿವಾರ ತಾಲ್ಲೂಕು ಎಎಪಿ ಘಟಕದ ವತಿಯಿಂದ ಏರ್ಪಡಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು , ಆರ್ಥಿಕ ಸಮಸ್ಯೆ ಹಾಗೂ ನಿರ್ಲಕ್ಷ್ಯದ ಪರಿಣಾಮವಾಗಿ ಗ್ರಾಮೀಣ ಪ್ರದೇಶದ ಬಡವರ ಆರೋಗ್ಯ ಹದಗೆಡುತ್ತಿದೆ ಎಂದು ಅಭಿಪ್ರಾಯಪಟ್ಟರು.

ಗ್ರಾಮೀಣರು ಕೃಷಿ ಚಟುವಟಿಕೆ ಒತ್ತಡದಲ್ಲಿ ವೈಯಕ್ತಿಕ ಆರೋಗ್ಯದ ಕಡೆ ಅಗತ್ಯ ಗಮನ ನೀಡಲು ಸಾಧ್ಯವಾಗುತ್ತಿಲ್ಲ. ಕೆಲವರು ವಾರದ ಸಂತೆಗೆ ಕಡ್ಡಾಯವಾಗಿ ಖರೀದಿಗೆ ಬರುತ್ತಾರೆ. ಅವರ ಹಿತದೃಷ್ಟಿಯಿಂದ ತಾಲ್ಲೂಕಿನ ಪ್ರತಿ ಸಂತೆಯಲ್ಲೂ ಎಎಪಿ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಲಾಗುತ್ತಿದೆ.

ಪ್ರತಿ ಸಂತೆಯಲ್ಲೂ ನೂರಾರು ಜನರು ಶಿಬಿರದ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು. ಶಿಬಿರದಲ್ಲಿ ಆರೋಗ್ಯ ಸಿಬ್ಬಂದಿ ವಿವಿಧ ಪರೀಕ್ಷೆಗಳನ್ನು ನಡೆಸಿ , ಆಯಾ ವ್ಯಕ್ತಿಯ ಆರೋಗ್ಯದ ಬಗ್ಗೆ ತಿಳಿಸುತ್ತಾರೆ.

ತಜ್ಞ ವೈದ್ಯರು ಪರೀಕ್ಷಿಸಿ ಆರೋಗ್ಯ ಸಲಹೆ ನೀಡುತ್ತಾರೆ, ಅದರಂತೆ ನಡೆದುಕೊಂಡರೆ ಅವರ ಆರೋಗ್ಯ ಸುಧಾರಿಸುತ್ತದೆ. ಇದು ಎಎಪಿ ಉಚಿತ ಸೇವೆಯಾಗಿರುತ್ತದೆ ಎಂದು ಹೇಳಿದರು. 

ಶಿಬಿರದಲ್ಲಿ ವೆಂಕಟೇಶ್ವರ ನರ್ಸಿಂಗ್ ಹೋಂ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರು ೩೦೦ ಕ್ಕೂ ಹೆಚ್ಚು ವ್ಯಕ್ತಿಗಳ ಆರೋಗ್ಯ ತಪಾಸಣೆ ನಡೆಸಿ , ಅಗತ್ಯ ವೈದ್ಯಕೀಯ ಸಲಹೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು