11:44 AM Friday3 - July 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ…

ಇತ್ತೀಚಿನ ಸುದ್ದಿ

ಶ್ರೀನಿವಾಸಪುರ: ಆಮ್ ಆದ್ಮಿ ಪಾರ್ಟಿ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

24/09/2022, 23:53

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಜನರು ಆರೋಗ್ಯ ತಪಾಸಣೆಗೆ ಒಳಗಾಗುವುದರ ಮೂಲಕ ಸಂಭವನೀಯ ಅನಾರೋಗ್ಯದಿಂದ ಮುಕ್ತರಾಗಬೇಕು ಎಂದು ವೆಂಕಟೇಶ್ವರ ಗ್ರಾಮೀಣ ಆರೋಗ್ಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಹಾಗೂ ಎಎಪಿ ಮುಖಂಡ ಡಾ . ವೈ.ವಿ.ವೆಂಕಟಾಚಲ ಹೇಳಿದರು. 

ಪಟ್ಟಣದ ಸಂತೆ ಮೈದಾನದಲ್ಲಿ ಶನಿವಾರ ತಾಲ್ಲೂಕು ಎಎಪಿ ಘಟಕದ ವತಿಯಿಂದ ಏರ್ಪಡಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು , ಆರ್ಥಿಕ ಸಮಸ್ಯೆ ಹಾಗೂ ನಿರ್ಲಕ್ಷ್ಯದ ಪರಿಣಾಮವಾಗಿ ಗ್ರಾಮೀಣ ಪ್ರದೇಶದ ಬಡವರ ಆರೋಗ್ಯ ಹದಗೆಡುತ್ತಿದೆ ಎಂದು ಅಭಿಪ್ರಾಯಪಟ್ಟರು.

ಗ್ರಾಮೀಣರು ಕೃಷಿ ಚಟುವಟಿಕೆ ಒತ್ತಡದಲ್ಲಿ ವೈಯಕ್ತಿಕ ಆರೋಗ್ಯದ ಕಡೆ ಅಗತ್ಯ ಗಮನ ನೀಡಲು ಸಾಧ್ಯವಾಗುತ್ತಿಲ್ಲ. ಕೆಲವರು ವಾರದ ಸಂತೆಗೆ ಕಡ್ಡಾಯವಾಗಿ ಖರೀದಿಗೆ ಬರುತ್ತಾರೆ. ಅವರ ಹಿತದೃಷ್ಟಿಯಿಂದ ತಾಲ್ಲೂಕಿನ ಪ್ರತಿ ಸಂತೆಯಲ್ಲೂ ಎಎಪಿ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಲಾಗುತ್ತಿದೆ.

ಪ್ರತಿ ಸಂತೆಯಲ್ಲೂ ನೂರಾರು ಜನರು ಶಿಬಿರದ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು. ಶಿಬಿರದಲ್ಲಿ ಆರೋಗ್ಯ ಸಿಬ್ಬಂದಿ ವಿವಿಧ ಪರೀಕ್ಷೆಗಳನ್ನು ನಡೆಸಿ , ಆಯಾ ವ್ಯಕ್ತಿಯ ಆರೋಗ್ಯದ ಬಗ್ಗೆ ತಿಳಿಸುತ್ತಾರೆ.

ತಜ್ಞ ವೈದ್ಯರು ಪರೀಕ್ಷಿಸಿ ಆರೋಗ್ಯ ಸಲಹೆ ನೀಡುತ್ತಾರೆ, ಅದರಂತೆ ನಡೆದುಕೊಂಡರೆ ಅವರ ಆರೋಗ್ಯ ಸುಧಾರಿಸುತ್ತದೆ. ಇದು ಎಎಪಿ ಉಚಿತ ಸೇವೆಯಾಗಿರುತ್ತದೆ ಎಂದು ಹೇಳಿದರು. 

ಶಿಬಿರದಲ್ಲಿ ವೆಂಕಟೇಶ್ವರ ನರ್ಸಿಂಗ್ ಹೋಂ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರು ೩೦೦ ಕ್ಕೂ ಹೆಚ್ಚು ವ್ಯಕ್ತಿಗಳ ಆರೋಗ್ಯ ತಪಾಸಣೆ ನಡೆಸಿ , ಅಗತ್ಯ ವೈದ್ಯಕೀಯ ಸಲಹೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು