7:55 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಶ್ರೀನಿವಾಸಪುರ: ಮಾವಿನಲ್ಲಿ ಸಮಗ್ರ ಬೆಳೆ ನಿರ್ವಹಣೆ; ಹೊರಾಂಗಣಾ ತರಬೇತಿ ಕಾರ್ಯಕ್ರಮ 

24/08/2022, 20:15

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ರೋಗನಿರೋಧಕ ಶಕ್ತಿಯೊಂದಿಗೆ ಬೆಳೆಯು ಆರೋಗ್ಯಕರವಾಗಿ ಬೆಳೆದು ಅಧಿಕ ಇಳುವರಿ ನೀಡಬೇಕಾದರೆ ಬೆಳೆಗಳಿಗೆ ಸಕಾಲದಲ್ಲಿ ಸವರುವಿಕೆ ಮತ್ತು ಸಮತೋಲನ ಪೋಷಕಾಂಶಗಳನ್ನು ಒದಗಿಸುವುದು ಅವಶ್ಯ . ಆದರೆ ಕೆಲವೇ ರೈತರು ಲಘು ಪೋಷಕಾಂಶಗಳ ಮಹತ್ವವನ್ನರಿತು ಬಳಸುತ್ತಿದ್ದಾರೆ.

ಆದ್ದರಿಂದ ಗುಣಮಟ್ಟದ ಬೆಳೆ ಹಾಗೂ ಹೆಚ್ಚಿನ ಇಳುವರಿಗಾಗಿ ಸವರುವಿಕೆ ಮಾಡುವುದು ಅವಶ್ಯವಾಗಿದೆ ಮತ್ತು ಸಮಗ್ರ ಪೋಷಕಾಂಶಗಳ ನಿರ್ವಹಣೆಯ ಅಂಗವಾಗಿ ಮಾವು ಬೆಳೆಯ ಎಲೆಗಳಿಗೆ ಸಿಂಪಡಿಸಬಹುದಾದ ಮಾವು ಸ್ಪೆಷಲ್ ಅತ್ಯಂತ ಉಪಯುಕ್ತವಾಗಿದೆ . ಈ ನಿಟ್ಟಿನಲ್ಲಿ ವಿಸ್ತರಣ ಶಿಕ್ಷಣ ಘಟಕ ( ಕೋಲಾರ ) , ಕೃಷಿ ವಿಜ್ಞಾನ ಕೇಂದ್ರ ಚಿಂತಾಮಣಿ ರವರ ವತಿಯಿಂದ ಮಾವಿನಲ್ಲಿ ಸಮಗ್ರ ಬೆಳೆ ನಿರ್ವಹಣೆ ಕುರಿತು ಹೊರಾಂಗಣಾ ತರಬೇತಿ ಕಾರ್ಯಕ್ರಮವನ್ನು ಶ್ರೀನಿವಾಸಪುರ ತಾಲೂಕಿನ ಬೂರುಗಾನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು ತೋಟಗಾರಿಕೆ ವಿಜ್ಞಾನಿಗಳಾದ ಸಿಂಧು ಕೆ. ಅವರು ಮಾವಿನಲ್ಲಿ ವೈಜ್ಞಾನಿಕ ಬೇಸಾಯ ಕ್ರಮಗಳು . ಮಾವಿನ ಮರ ಸವರುವಿಕೆ ಹಾಗೂ ಲಘುಪೋಷಕಾಂಶಗಳ ಮಿಶ್ರಣವಾದ ಮಾವು ಸ್ಪೆಷಲ್ ಕುರಿತು ಮಾಹಿತಿ ನೀಡಿದರು . ಡಾ.ದೀಲಿಪ್.ಎಸ್ .ವಿಜ್ಞಾನಿಗಳು ( ಕೃಷಿ ವಿಸ್ತರಣಾ ) ರವರು ಮಾವಿನಲ್ಲಿ ಸಮಗ್ರ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಅರಿವು ಮೂಡಿಸಿದರು ಮತ್ತು ಮಾವಿನಲ್ಲಿ ಸವರುವಿಕೆ ಬಗ್ಗೆ ಮಾಹಿತಿ ನೀಡಿ ಪ್ರಾತ್ಯಕ್ಷಿಕೆ ಮುಖಾಂತರ ತೋರಿಸಿಕೊಟ್ಟರು . ಈ ಕಾರ್ಯಕ್ರಮದಲ್ಲಿ 25 ಜನ ರೈತರು ಪಾಲ್ಗೊಂಡಿದ್ದರು . ಮಾವಿನಲ್ಲಿ ರೆಂಬೆಗಳು ಒತ್ತೊತ್ತಾಗಿ ಬೆಳೆದಾಗ ಅವುಗಳಲ್ಲಿ ಕೆಲವೊಂದು ರೆಂಬೆಗಳನ್ನು ಕತ್ತರಿಸಿ ವಿರಳಗೊಳಿಸಿದರೆ ಸೂರ್ಯನ ಬೆಳಕು ಒಳಭಾಗದಲ್ಲಿ ಬೀಳುವಂತಾಗಿ ಒಳಭಾಗದಲ್ಲೂ ಕಾಯಿಕಚ್ಚುತ್ತವೆ . ಇದರಿಂದ ಇಳುವರಿ ಹಾಗೂ ಹಣ್ಣಿನ ಗುಣಮಟ್ಟ ಹೆಚ್ಚಾಗುತ್ತವೆ . ಗಿಡಗಳಿಗೆ 5-6 ವರ್ಷವಾದಾಗ ಮೊದಲ ವರ್ಷ ಮಧ್ಯದ ಒಂದೆರೆಡು ರೆಂಬೆಗಳನ್ನು ತೆಗೆದು ತೆರೆವು ಮಾಡಬೇಕು . ನಂತರದ ವರ್ಷಗಳಲ್ಲಿ ಇತರ ರೆಂಬೆಗಳನ್ನು ವಿರಳಗೊಳಿಸಲು ಕತ್ತರಿಸಬೇಕು . ಕತ್ತರಿಸಿದ ಭಾಗಗಳಿಗೆ ಶಿಲೀಂಧ್ರ ನಾಶಕ + ಕೀಟನಾಶಕದ ಮುಲಾಮನ್ನು ಲೇಪಿಸುವುದು ಅವಶ್ಯ . ಹಣ್ಣಿನ ಕೊಯ್ದು ಆದನಂತರ ಜುಲೈ- ಆಗಸ್ಟ್ ತಿಂಗಳುಗಳು ಕತ್ತರಿಸಲು ಸೂಕ್ತ ಸಮಯ .

ಇತ್ತೀಚಿನ ಸುದ್ದಿ

ಜಾಹೀರಾತು