12:04 AM Sunday5 - July 2026
ಬ್ರೇಕಿಂಗ್ ನ್ಯೂಸ್
ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ…

ಇತ್ತೀಚಿನ ಸುದ್ದಿ

ಶ್ರೀನಿವಾಸಪುರ: ಮಾವಿನಲ್ಲಿ ಸಮಗ್ರ ಬೆಳೆ ನಿರ್ವಹಣೆ; ಹೊರಾಂಗಣಾ ತರಬೇತಿ ಕಾರ್ಯಕ್ರಮ 

24/08/2022, 20:15

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ರೋಗನಿರೋಧಕ ಶಕ್ತಿಯೊಂದಿಗೆ ಬೆಳೆಯು ಆರೋಗ್ಯಕರವಾಗಿ ಬೆಳೆದು ಅಧಿಕ ಇಳುವರಿ ನೀಡಬೇಕಾದರೆ ಬೆಳೆಗಳಿಗೆ ಸಕಾಲದಲ್ಲಿ ಸವರುವಿಕೆ ಮತ್ತು ಸಮತೋಲನ ಪೋಷಕಾಂಶಗಳನ್ನು ಒದಗಿಸುವುದು ಅವಶ್ಯ . ಆದರೆ ಕೆಲವೇ ರೈತರು ಲಘು ಪೋಷಕಾಂಶಗಳ ಮಹತ್ವವನ್ನರಿತು ಬಳಸುತ್ತಿದ್ದಾರೆ.

ಆದ್ದರಿಂದ ಗುಣಮಟ್ಟದ ಬೆಳೆ ಹಾಗೂ ಹೆಚ್ಚಿನ ಇಳುವರಿಗಾಗಿ ಸವರುವಿಕೆ ಮಾಡುವುದು ಅವಶ್ಯವಾಗಿದೆ ಮತ್ತು ಸಮಗ್ರ ಪೋಷಕಾಂಶಗಳ ನಿರ್ವಹಣೆಯ ಅಂಗವಾಗಿ ಮಾವು ಬೆಳೆಯ ಎಲೆಗಳಿಗೆ ಸಿಂಪಡಿಸಬಹುದಾದ ಮಾವು ಸ್ಪೆಷಲ್ ಅತ್ಯಂತ ಉಪಯುಕ್ತವಾಗಿದೆ . ಈ ನಿಟ್ಟಿನಲ್ಲಿ ವಿಸ್ತರಣ ಶಿಕ್ಷಣ ಘಟಕ ( ಕೋಲಾರ ) , ಕೃಷಿ ವಿಜ್ಞಾನ ಕೇಂದ್ರ ಚಿಂತಾಮಣಿ ರವರ ವತಿಯಿಂದ ಮಾವಿನಲ್ಲಿ ಸಮಗ್ರ ಬೆಳೆ ನಿರ್ವಹಣೆ ಕುರಿತು ಹೊರಾಂಗಣಾ ತರಬೇತಿ ಕಾರ್ಯಕ್ರಮವನ್ನು ಶ್ರೀನಿವಾಸಪುರ ತಾಲೂಕಿನ ಬೂರುಗಾನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು ತೋಟಗಾರಿಕೆ ವಿಜ್ಞಾನಿಗಳಾದ ಸಿಂಧು ಕೆ. ಅವರು ಮಾವಿನಲ್ಲಿ ವೈಜ್ಞಾನಿಕ ಬೇಸಾಯ ಕ್ರಮಗಳು . ಮಾವಿನ ಮರ ಸವರುವಿಕೆ ಹಾಗೂ ಲಘುಪೋಷಕಾಂಶಗಳ ಮಿಶ್ರಣವಾದ ಮಾವು ಸ್ಪೆಷಲ್ ಕುರಿತು ಮಾಹಿತಿ ನೀಡಿದರು . ಡಾ.ದೀಲಿಪ್.ಎಸ್ .ವಿಜ್ಞಾನಿಗಳು ( ಕೃಷಿ ವಿಸ್ತರಣಾ ) ರವರು ಮಾವಿನಲ್ಲಿ ಸಮಗ್ರ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಅರಿವು ಮೂಡಿಸಿದರು ಮತ್ತು ಮಾವಿನಲ್ಲಿ ಸವರುವಿಕೆ ಬಗ್ಗೆ ಮಾಹಿತಿ ನೀಡಿ ಪ್ರಾತ್ಯಕ್ಷಿಕೆ ಮುಖಾಂತರ ತೋರಿಸಿಕೊಟ್ಟರು . ಈ ಕಾರ್ಯಕ್ರಮದಲ್ಲಿ 25 ಜನ ರೈತರು ಪಾಲ್ಗೊಂಡಿದ್ದರು . ಮಾವಿನಲ್ಲಿ ರೆಂಬೆಗಳು ಒತ್ತೊತ್ತಾಗಿ ಬೆಳೆದಾಗ ಅವುಗಳಲ್ಲಿ ಕೆಲವೊಂದು ರೆಂಬೆಗಳನ್ನು ಕತ್ತರಿಸಿ ವಿರಳಗೊಳಿಸಿದರೆ ಸೂರ್ಯನ ಬೆಳಕು ಒಳಭಾಗದಲ್ಲಿ ಬೀಳುವಂತಾಗಿ ಒಳಭಾಗದಲ್ಲೂ ಕಾಯಿಕಚ್ಚುತ್ತವೆ . ಇದರಿಂದ ಇಳುವರಿ ಹಾಗೂ ಹಣ್ಣಿನ ಗುಣಮಟ್ಟ ಹೆಚ್ಚಾಗುತ್ತವೆ . ಗಿಡಗಳಿಗೆ 5-6 ವರ್ಷವಾದಾಗ ಮೊದಲ ವರ್ಷ ಮಧ್ಯದ ಒಂದೆರೆಡು ರೆಂಬೆಗಳನ್ನು ತೆಗೆದು ತೆರೆವು ಮಾಡಬೇಕು . ನಂತರದ ವರ್ಷಗಳಲ್ಲಿ ಇತರ ರೆಂಬೆಗಳನ್ನು ವಿರಳಗೊಳಿಸಲು ಕತ್ತರಿಸಬೇಕು . ಕತ್ತರಿಸಿದ ಭಾಗಗಳಿಗೆ ಶಿಲೀಂಧ್ರ ನಾಶಕ + ಕೀಟನಾಶಕದ ಮುಲಾಮನ್ನು ಲೇಪಿಸುವುದು ಅವಶ್ಯ . ಹಣ್ಣಿನ ಕೊಯ್ದು ಆದನಂತರ ಜುಲೈ- ಆಗಸ್ಟ್ ತಿಂಗಳುಗಳು ಕತ್ತರಿಸಲು ಸೂಕ್ತ ಸಮಯ .

ಇತ್ತೀಚಿನ ಸುದ್ದಿ

ಜಾಹೀರಾತು