9:12 PM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಶ್ರೀನಿವಾಸಪುರ: ರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಬೃಹತ್ ಜಾಥಾ

12/12/2024, 12:33

ಮಂಗಳೂರು(reporterkarnataka.com):ಶ್ರೀನಿವಾಸಪುರ ತಾಲ್ಲೂಕು ವಕೀಲರ ಸಂಘ, ತಾಲ್ಲೂಕು ಆಡಳಿತ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲ್ಲೂಕು ಪಂಚಾಯಿತಿ, ಪುರಸಭೆ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಬೃಹತ್ ಜಾಥಾ ಶ್ರೀನಿವಾಸಪುರ ಪುರಸಭಾ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಜೆಎಂಎಫ್ ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಎಚ್.ಆರ್. ಸಚಿನ್ ‌ಅವರು, ತಹಶೀಲ್ದಾರ್ ಜಿ.ಎನ್.ಸುಧೀದ್ರ ಅವರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶಿವಕುಮಾರಿ, ಪುರಸಭಾ ಮುಖ್ಯಾಧಿಕಾರಿ ವಿ.ನಾಗರಾಜು, ವಕೀಲರ ಸಂಘದ ಅಧ್ಯಕ್ಷ ಎನ್.ವಿ.ಜಯರಾಮೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಮುನಿ ಲಕ್ಷ್ಮಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ತಾಲ್ಲೂಕು ಅಧಿಕಾರಿ ನವೀನ್ ಕುಮಾರ್ ಸೇರಿದಂತೆ ವಿವಿಧ ಶಾಲೆಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಅವರು ಇಂದು ನಿಧನರಾದ ಹಿನ್ನೆಲೆಯಲ್ಲಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎರಡು ನಿಮಿಷಗಳ ಕಾಲ ಮೌನಾಚರಣೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು