8:08 PM Thursday25 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಶ್ರೀನಿವಾಸಪುರ ವಿದ್ಯಾರ್ಥಿಗಳ ವಸತಿ ನಿಲಯ ದುರವಸ್ಥೆ: ಉಪ ಲೋಕಾಯುಕ್ತರು ಗರಂ; ಸರಕಾರಿ ಆಸ್ಪತ್ರೆಗೂ ಭೇಟಿ

30/09/2024, 11:54

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com
ವಸತಿ ನಿಲಯದ ಒಳಗೆ ಹೋದರೆ ಸ್ವಚ್ಚತೆ ಇಲ್ಲದೆ ಕಸವು ತುಂಬಿ ತುಳುಕುತ್ತಿದ್ದನ್ನು ಕಂಡು ಉಪ ಉಪಲೋಕಾಯುಕ್ತ ನ್ಯಾಯಮೂರ್ತಿ ವೀರಪ್ಪ ಅವರು ಬೇಸರ ವ್ಯಕ್ತಪಡಿಸಿದರು. ವಸತಿ ನಿಲಯವು ಸಮಸ್ಯೆಗಳ ಆಗರವಾಗಿದೆ ಎಂದು ಅಧಿಕಾರಿಗಳ ವಿರುದ್ದ ಕಿಡಿಕಾರಿದರು.
ಶ್ರೀನಿವಾಸಪುರ ಪಟ್ಟಣದ ಪದವಿ ಕಾಲೇಜಿಗೆ ಅನಿರೀಕ್ಷಿತ ಭೇಟಿ ನೀಡಿ ಅವರು ಮಾತನಾಡಿದರು.
ಪದವಿ ಕಾಲೇಜಿಗೆ ಭೇಟಿ ನೀಡಿದ ಸಮಯದಲ್ಲಿ ವಸತಿ ನಿಲಯವು ಜಾನುವಾರು, ಹಂದಿಗಳ ದೊಡ್ಡಿಯಂತಿದೆ ಎಂದು ಖಾರವಾಗಿ ನುಡಿದು, ರಾಜ್ಯದಲ್ಲಿಯೇ ಈ ವಸತಿ ನಿಲಯವು ಅತೀ ಖಂಡನೀಯವಾಗಿದೆ. ಇದೊಂದು ಅವವ್ಯಸ್ಥೆ ಗೂಡಾಗಿದೆ. ವಸತಿ ನಿಲಯಕ್ಕೆ ಗೇಟು ಇದ್ದು ಇಲ್ಲದ ರೀತಿಯಲ್ಲಿ ಇದಿದ್ದನ್ನು ಕಂಡು ವಾರ್ಡನ್ ಹಾಗೂ ಸಮಾಜ ಕಲ್ಯಾಣ ಇಲಾಖಾಧಿಕಾರಿಗಳ ವಿರುದ್ದ ಕಿಡಿಕಾರಿದರು.
ವಿದ್ಯಾರ್ಥಿಗಳೊಂದಿಗೆ ಮಾಹಿತಿ ಪಡೆದ ಉಪಲೋಕಾಯುಕ್ತರು ಇಲ್ಲಿ ವಿದ್ಯಾರ್ಥಿಗಳಿಗೆ ಶುದ್ದವಾದ ಕುಡಿಯುವ ನೀರು, ಶುದ್ದವಾದ ಆಹಾರ ಪದಾರ್ಥಗಳು ಇಲ್ಲ ಎಂದು ತಿಳಿಸುತ್ತಾ, ಕರೆಂಟು ಹೋದ ಸಮಯದಲ್ಲಿ ಪರ್ಯಾಯವಾಗಿ ಸುಗುಮವಾಗಿ ವಿದ್ಯುತ್ ಸಂರ್ಪಕವಿಲ್ಲ. ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ನೀಡುವ ಅನುದಾನಗಳು ಅಧಿಕಾರಿಗಳ ಜೇಬು ಸೇರುತ್ತಿದ್ದೆ ಎಂದು ಕಿಡಿಕಾರುತ್ತಾ, ವಸತಿ ನಿಲಯದಲ್ಲಿ ಹಾಜರಾತಿ ಪುಸ್ತಕವಿಲ್ಲದ, ಸರಿಯಾದ ಕಾಂಪೌಡ್ ಇಲ್ಲದೆ ಇರುವುದನ್ನು ಗಮನಿಸಿ ವಸತಿ ನಿಲಯಕ್ಕೆ ಯಾವುದೇ ರೀತಿಯಾದ ಮೂಲ ಭೂತ ಸೌಲಭ್ಯಗಳ ಸಮಂಜಸವಾಗಿಲ್ಲದನ್ನು ಕಂಡು ಅಧಿಕಾರಿಗಳ ವಿರುದ್ದ ಸಮೋಟ ಕೇಸ್ ಹಾಕುತ್ತೇನೆ ಎಂದು ಎಚ್ಚರಿಸಿದರು.
ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯನ್ನ ದೂರವಾಣಿ ಮೂಲಕ ಮಾತನಾಡಿ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ರಾಜೇಶ್ ಉಪ ಲೋಕಾಯುಕ್ತರವರ ಸ್ವಗ್ರಾಮವಾದ ತಾಲೂಕಿನ ನಾಗೇದನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಸಂರ್ಪಕಿಸಿ ಲೋಕಾಯುಕ್ತರ ಸೂಚನೆಗಳನ್ನು ಆಲಿಸಿ ಒಂದು ವಾರ ಕಾಲಾವಕಾಶ ನೀಡುವಂತೆ ಮನವಿ ಮಾಡಿ ಒಂದು ವಾರದೊಳಗೆ ತಮ್ಮ ಸೂಚನೆಯಂತೆ ಸರಿಪಡಿಸುವುದಾಗಿ ತಿಳಿಸಿದರು.
*ಸರ್ಕಾರಿ ಸಾರ್ವಜನಿಕ ಆಸ್ಪತ್ರೆ:*
ಕಳೆದ ಎರಡು ವರ್ಷಗಳ ಹಿಂದೆ ಆಸ್ಪತ್ರೆಗೆ ಭೇಟಿ ನೀಡಿದಾಗ ಸಮಯದಲ್ಲಿ ಆಸ್ಪತ್ರೆಯು ಉತ್ತಮ ರೀತಿಯಲ್ಲಿ ಕಂಡುಬಂದಿತ್ತು, ಆದರೆ ಇಂದು ಒಂದು ರೀತಿಯಲ್ಲಿ ಅವವ್ಯಸ್ಥೆಗಳಿಂದ ಕೂಡಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ಈ ಹಿಂದೆ ಆಸ್ಪತ್ರೆಗೆ ಭೇಟಿ ನೀಡಿದಾಗ ರಾಜ್ಯದಲ್ಲೇ ಆಸ್ಪತ್ರೆಯು ಉತ್ತವಾಗಿ ರೀತಿಯಲ್ಲಿ ಕಂಡು ಬಂದಿತ್ತು, ಈ ಹಿಂದಿನ ರೀತಿಯಲ್ಲಿ ಆಸ್ಪತ್ರೆಯು ಸಿದ್ದವಾಗಿರಬೇಕು ಎಂದು ವೈದ್ಯರಿಗೆ ಸೂಚಿಸಿದರು.
ಕಳೆದ ವಾರ ಹಿಂದೆ ಚಿಂತಾಮಣಿ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಸಮಯಲ್ಲಿ ಅವಧಿ ಮುಕ್ತಾವಾಗಿರುವ ಔಷಧಿಗಳು ಇದ್ದುನ್ನು ಕಂಡು ಅಲ್ಲಿನ ಸಿಬ್ಬಂದಿಯ ತರಾಟೆಗೆ ತೆಗದುಕೊಂಡೆ ಎನ್ನುತ್ತಾ, ಇಲ್ಲಿಯ ಸಿಬ್ಬಂದಿಗಳು ಅವಧಿ ಮುಕ್ತಾಯವಾದ ಔಷಧಿಗಳನ್ನು ರೋಗಿಗಳಿಗೆ ಕೊಡದಂತೆ ಎಚ್ಚರವಹಿಸಿ. ರೋಗಿಗಳು ಆಸ್ಪತ್ರೆಗೆ ಬರುವುದು ತಮ್ಮ ರೋಗವನ್ನು ಪರಿಹರಿಸಿ ಕೊಳ್ಳಲು ಅವರನ್ನು ಪ್ರೀತಿಯಿಂದ ಮಾತನಾಡಿ ಅವರಿಗೆ ಚಿಕಿತ್ಸೆ ಕೊಡವಂತೆ ಸಲಹೆ ನೀಡಿದರು.
*ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ:* ತಾಲೂಕಿನ ಚಲ್ದಿಗಾನಹಳ್ಳಿ ಸಮೀಪದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಭೇಟಿ ನೀಡಿದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪಠ್ಯದೊಂದಿಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸಿ, ಈಗಿರುವ ಪ್ರತಿ ವಿದ್ಯಾರ್ಥಿ ಹಾಗೂ ಶಿಕ್ಷಕರು ಒಂದು ಗಿಡವನ್ನು ನೆಟ್ಟು ಪೋಷಿಸುವ ವ್ಯವಸ್ಥೆಯನ್ನು ಮಾಡುವಂತೆ ಸಲಹೆ ನೀಡಿದರು. ವಿದ್ಯಾರ್ಥಿಗಳು ವಸತಿ ನಿಯಲಕ್ಕೆ ರಸ್ತೆಯ ಬೇಡಿಕೆ ಇಟ್ಟಾಗ ಸ್ಥಳದಲ್ಲಿಯೇ ಇದ್ದ ಗ್ರಾ.ಪಂ.ಅಧ್ಯಕ್ಷ ಶ್ರೀನಿವಾಸ್ ರವರಿಗೆ ವಸತಿ ನಿಲಯಕ್ಕೆ ರಸ್ತೆಯನ್ನು ಹಾಕಿಸಿಕೊಂಡುವಂತೆ ತಿಳಿಸಿದರು.
ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಪದವಿಪೂರ್ವ ಕಾಲೇಜು ವಸತಿ ನಿಲಯ ಅನಿರೀಕ್ಷಿತ ಭೇಟಿ ನೀಡಿ ವಸತಿ ನಿಲಯ ವಾರ್ಡ್ನ್ ರವರಿಗೆ ವಿದ್ಯಾರ್ಥಿಗಳನ್ನು ನಿಮ್ಮ ಮಕ್ಕಳೆಂದು ಆರೈಕೆ ಮಾಡಿ ಚೆನ್ನಾಗಿ ಓದಲು ಪ್ರೇರೇಪಿಸಿ , ಕೊರತೆ ಇರುವ ಮೂಲ ಸೌಲಭ್ಯಗಳ ಹಾಗೂ ಇತರೆ ಕಾರ್ಯಗಳ ಬಗ್ಗೆ ಸೂಚನೆಗಳನ್ನು ಹಾಗು ಸಲಹೆ ನೀಡಿದರು.


ದೂರವಾಣಿ ಮೂಲಕ ತಹಶೀಲ್ದಾರ್ ಜಿ.ಎನ್.ಸುದೀಂದ್ರ ಅವರನ್ನ ಮಾತನಾಡಿ, ವಸತಿ ನಿಲಯಗಳಿಗೆ ಭೇಟಿ ನೀಡುವಂತೆ ಸೂಚಿಸಿದರು. ಜಿಲ್ಲಾ ಲೋಕಾಯುಕ್ತ ಎಸ್ಪಿ ಧನಂಜಯ, ಡಿವೈಎಸ್ಪಿ ಸೂರ್ಯನಾರಾಯಣ, ಲೋಕಾಯುಕ್ತ ಪಿ.ಐ. ಆಂಜನಪ್ಪ, ಪಿಎಸ್‌ಐ ಜಯರಾಮ್, ಲೋಕಾಯುಕ್ತ ಸಿಬ್ಬಂದಿಗಳಾದ ರಾಜಗೋಪಾಲ್, ಏಜಾಜ್‌ಪಾಷ, ಶ್ರೀನಿವಾಸ್, ರಮೇಶ್ , ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ವೈದ್ಯೆ ಗೌಸಿಯಾ ಬಾನು, ಸಿಬ್ಬಂದಿ ಉಷಾ, ಮಹಮ್ಮದ್ ಅಲಿ, ವಸತಿ ನಿಲಯಗಳ ಮೇಲ್ವಿಚಾರಕರಾದ ಚೆನ್ನಪ್ಪ ದತ್ತಪ್ಪ, ವೀರೇಶ್ ಸುಬೇದಾರ್ ಹಾಗೂ ಸಿಬ್ಬಂದಿ ಉಪಸ್ಥಿತರದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು