3:19 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಶ್ವಾನವನ್ನು ಬೆನ್ನಟ್ಟಿ ಬಾವಿಗೆ ಬಿದ್ದ 10ರ ಹರೆಯದ ಚಿರತೆ; ಅರಣ್ಯ ಇಲಾಖೆಯಿಂದ ರಕ್ಷಣೆ

11/11/2024, 19:14

ಕಾರ್ಕಳ(reporterkarnataka.com): ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದ ಪಾರಡಿ ಎಂಬಲ್ಲಿ ಚಿರತೆಯೊಂದು ನಾಯಿಯನ್ನು ಬೇಟೆಯಾಡಲು ಅಟ್ಟಿಸಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಬಾವಿಯೊಂದಕ್ಕೆ ಬಿದ್ದ ಘಟನೆ ನಡೆದಿದೆ.

ದರ್ಕಾಸು ಮನೆ ಪಿಲೋಮಿನಾ ಎಂಬವರ ಬಾವಿಗೆ ಚಿರತೆಯು ಬಿದ್ದಿತ್ತು. ಚಿರತೆಯ ಘರ್ಜನೆ ಕೇಳಿದ ಫಿಲೋಮಿನ ಕುಟುಂಬಸ್ಥರು ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖಾಧಿಕಾರಿಗಳ ತಂಡ ಬಾವಿಯಲ್ಲಿ ಬಿದ್ದಿದ್ದ ಚಿರತೆಯನ್ನು ಬೃಹತ್ ಬಲೆಯ ಮೂಲಕ ಮೇಲಕ್ಕೆತ್ತಿ ಬೋನಿಗೆ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ .ಹೆಣ್ಣು ಚಿರತೆಯಾಗಿದ್ದು ಸುಮಾರು ಹತ್ತು ವರ್ಷಗಳಾಗಿವೆ ಎಂದು ಅಂದಾಜಿಸಲಾಗಿದೆ.ಬೆಳ್ಮಣ್ ಪಾರಾಡಿ ಭಾಗಗಳಲ್ಲಿ ಮನೆಯ ಅನೇಕ ನಾಯಿಗಳು ಕಾಣೆಯಾಗುತ್ತಿದ್ದು ಚಿರತೆಯ ಅಹಾರವಾಗುತಿದ್ದವು‌. ಚಿರತೆ ಸೆರೆ ಹಿಡಿದ ಕಾರಣ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ. ಅರಣ್ಯ ಇಲಾಖೆಯ ಚಿರತೆ ರಕ್ಷಣಾ ಕಾರ್ಯಕ್ಕೆ ಭೇಷ್ ಎಂದಿದ್ದಾರೆ. ಚಿರತೆಯನ್ನು ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು